ಇನ್ನೂ ಏನೇನ ಅನಾಹುತ ಕಾದಿದೆಯೋ..


Team Udayavani, Oct 25, 2019, 2:02 PM IST

bg-tdy-1

ಬೆಳಗಾವಿ: ಬ್ಯಾಡಾ ಬ್ಯಾಡಾ ಅಂದ್ರು ಭಗವಂತ ಬಿಡವಲ್ಲ. ಇನ್ನೂ ಏನೇನ ಅನಾಹುತ ಕಾದಿದೆಯೊ. 70 ವರ್ಷದಿಂದ ಹೊಳಿ ನೋಡಕೋತ ಬಂದೇನಿ. ಆದರೆ ಯಾವತ್ತೂ ಈ ರೀತಿ ಬಂದಿರಲಿಲ್ಲ. ಆನಾಹುತಗಳು ಆಗಿರಲಿಲ್ಲ. ಈಗ ಹೊಳಿ ಅಂದರ ಊರಿನವರಿಗೆ ಹೆದರಿಕೆ ಆಗ್ತದ. ಎಲ್ಲಾ ಕಳಕೊಂಡು ಈಗ ನೀರು ನೋಡಕೋತ ನಿಂತೇವಿ.

ಇದು ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ನೆರೆ ಸಂತ್ರಸ್ತರ ನೋವಿನ ಮಾತು. ಅಡಿಬಟ್ಟಿ ಗ್ರಾಮಕ್ಕೆ ಭೇಟಿ ನೀಡಿದಾಗ ಅಲ್ಲಿ ಕಂಡಿದ್ದು ನೆಲಕ್ಕೊರಗಿದ ನೂರಾರು ಮನೆಗಳ ಅವಶೇಷ, ಅಲ್ಲಲ್ಲಿ ಬಿದ್ದಿರುವ ವಿದ್ಯುತ್‌

ಕಂಬಗಳು. ಸರಕಾರದಿಂದ ಪರಿಹಾರ ಬರುತ್ತದೆ. ಶಾಶ್ವತ ಸೂರಿನ ಆಸರೆ ಸಿಗುತ್ತದೆ ಎಂದು ಚಾತಕ ಪಕ್ಷಿಯಂತೆ ಕಟ್ಟೆಯ ಮೇಲೆ ಕುಳಿತಿದ್ದ ಜನ. ಗ್ರಾಮದ ಜನರನ್ನು ಮಾತನಾಡಿಸಿದಾಗ ಕೇಳಿ ಬಂದಿದ್ದು ಒಂದೇ ಮಾತು. ಹೇಳಲಿಕ್ಕೆ ಏನು ಉಳಿದಿದೆ. ಎಲ್ಲಾ ನಿಮ್ಮ ಕಣ್ಣಮುಂದೇ ಇದೆ.

ಗೋಕಾಕ ಪಟ್ಟಣದಿಂದ ಕೇವಲ ಮೂರು ಕಿಲೋಮೀಟರ್‌ ದೂರದಲ್ಲಿರುವ ಅಡಿಬಟ್ಟಿಗ್ರಾಮ ಘಟಪ್ರಭಾ ನದಿಗೆ ಹೊಂದಿಕೊಂಡೇ ಇದೆ. ಈ ವರ್ಷ ಮೂರು ಬಾರಿ ಭೀಕರ ಪ್ರವಾಹ ಕಂಡಿರುವ ಅಡಿಬಟ್ಟಿ ಗ್ರಾಮದ ಜನ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಲೆಕ್ಕವಿಲ್ಲದಷ್ಟು ಮನೆಗಳು ನೆಲಸಮವಾಗಿವೆ. ಬೆಳೆಗಳು ನೀರು ಪಾಲಾಗಿವೆ. ಮನೆಯ ಮುಂದೆ ನದಿಯಲ್ಲಿ ತೇಲಿಕೊಂಡು ಬಂದ ಕಸದ ರಾಶಿ ಬಿದ್ದಿದೆ. ಇದರಿಂದ ದುರ್ವಾಸನೆ ಆರಂಭವಾಗಿದೆ. ಪ್ರವಾಹದ ನಂತರ ರೋಗ ರುಜಿನಗಳ ಭಯ ಕಾಡುತ್ತಿದೆ.

ಇದು ಕೇವಲ ಅಡಿಬಟ್ಟಿ ಗ್ರಾಮಕ್ಕೆ ಮಾತ್ರ ಸೀಮಿತವಾದ ನೋವಲ್ಲ. ಹಾನಿಯ ವಾಸ್ತವ ಸ್ಥಿತಿ ಅಲ್ಲ. ಜಿಲ್ಲೆಯಲ್ಲಿ ಈ ಬಾರಿ ಭೀಕರ ನೆರೆ ಹಾವಳಿಗೆ ತುತ್ತಾದ ನದಿ ತೀರದ ಗ್ರಾಮಗಳ ಜನರ ಕಥೆ ಇದೇ ರೀತಿಯಾಗಿದೆ. ಗ್ರಾಮಕ್ಕೆ ಬಂದವರಿಗೆ ತೋರಿಸಲು ಬೇಕಾದಷ್ಟಿದೆ.ಅದನ್ನು ನೋಡಿ ನಮಗೆ ಹೊಸ ಬದುಕು ಕಟ್ಟಿಕೊಳ್ಳಲು ಸಾಧ್ಯವಾದಷ್ಟು ಹೆಚ್ಚಿನ ಪರಿಹಾರ ನೀಡಬೇಕು ಎಂಬುದು ಸಂತ್ರಸ್ತರ ಅಳಲು. ಕೃಷಿಯಿಂದ ಸಮೃದ್ಧವಾಗಿರುವ ಅಡಿಬಟ್ಟಿ ಗ್ರಾಮದಲ್ಲಿ ಘಟಪ್ರಭಾ ನದಿ ಈ ಬಾರಿ ಎಂದೂ ಮರೆಯದಂತಹ ಪೆಟ್ಟು ಕೊಟ್ಟಿದೆ.

ಒಂದೇ ವರ್ಷದಲ್ಲಿ ಆಗಸ್ಟ್‌, ಸೆಪ್ಟಂಬರ್‌ ಹಾಗೂ ಈಗ ಅಕ್ಟೋಬರ್‌ದಲ್ಲಿ ಬಂದ ಭೀಕರ ಪ್ರವಾಹ ಹಾಗೂ ಅತಿಯಾದ ಮಳೆ ಗ್ರಾಮದ ಜೀವನ ವ್ಯವಸ್ಥೆಯನ್ನೇ ಹಾಳುಮಾಡಿದೆ. ನದಿಯ ಪಕ್ಕದಲ್ಲೇ ಇದ್ದರೂ ಎಂದೂ ಅದಕ್ಕೆ ಅಂಜದ ಗ್ರಾಮದ ಜನ ಈಗ ನೀರು ಎಂದರೆ ಸಾಕು ಹೌಹಾರುತ್ತಾರೆ. ಮೊದಲ ಬಾರಿಗೆ ಗ್ರಾಮಸ್ಥರಿಗೆ ಹೊಳೆಯ ಅಂಜಿಕೆ ಆರಂಭವಾಗಿದೆ. ಸುಮಾರು 2000 ಜನಸಂಖ್ಯೆ ಇರುವ ಗ್ರಾಮದಲ್ಲಿ ಬೆರಳಣಿಕೆಯಷ್ಟು ಮನೆಗಳು ನೋಡಲು ಗಟ್ಟಿಮುಟ್ಟು ಎನಿಸುತ್ತವೆ. ಹಳೆಯ ಮನೆಗಳ ಜೊತೆಗೆ ಈಗೀಗ ಕಟ್ಟಿದ ಮನೆಗಳು ಸಹ ನೀರು ಪಾಲಾಗಿವೆ. ಸರಕಾರಿ ಶಾಲೆಯ ಮೂರು ಕೊಠಡಿಗಳು ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿವೆ. ಹೀಗಾಗಿ ಈ ಕೊಠಡಿಗಳಿಗೆ ಅಸುರಕ್ಷಿತ ಕೊಠಡಿಗಳು ಎಂಬ ಫಲಕ ಸಹ ಹಾಕಲಾಗಿದೆ.

 

-ಕೇಶವ ಆದಿ

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.