ಭಾನುವಾರ ಬೆಳಗಾವಿ ಭಣ ಭಣ: ಸಂಪೂರ್ಣ ಸ್ತಬ್ಧವಾದ ಕುಂದಾನಗರಿ
Team Udayavani, May 24, 2020, 9:42 AM IST
ಬೆಳಗಾವಿ: ಕೋವಿಡ್-19 ಭಾನುವಾರದ ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಂದಾನಗರಿ ಬೆಳಗಾವಿ ಸಂಪೂರ್ಣ ಸ್ತಬ್ಧವಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ಇಲ್ಲದೇ ಬಿಕೋ ಎನ್ನುತ್ತಿವೆ.
ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಪೂರ್ಣ ಕರ್ಪ್ಯೂ ಆಗಿದ್ದು, ಬಸ್ ಸಂಚಾರ, ಖಾಸಗಿ ವಾಹನಗಳು, ಆಟೋ ರಿಕ್ಷಾ ಓಡಾಟ ಇಲ್ಲ. ಜೊತೆಗೆ ಜನ ಸಂಚಾರ ಇಲ್ಲದೇ ರಸ್ತೆಗಳು ಭಣ ಭಣಗುಟ್ಟುತ್ತಿವೆ. ಇಡೀ ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.
ಬೆಳಗ್ಗೆ ಅಗತ್ಯ ವಸ್ತುಗಳಾದ ಹಾಲು ಮಾರಾಟ ಬಿಟ್ಟರೆ ಇನ್ನುಳಿದಂತೆ ಯಾವುದೇ ಅಂಗಡಿಗಳು ತೆರೆದಿಲ್ಲ. ಅಗತ್ಯ ವಸ್ತುಗಳಾದ ದಿನಸಿ, ಔಷಧಿ, ಮಟನ್, ಚಿಕನ್, ಮೀನು ಮಾರಾಟಕ್ಕೆ ಅವಕಾಶ ಇದ್ದರೂ ಇನ್ನೂ ಅಂಗಡಿಗಳು ತೆರೆದಿಲ್ಲ. ಬೆಳಗಾವಿ ನಗರದ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಜಿಲ್ಲೆಯಾದ್ಯಂತ ಲಾಕ್ ಡೌನ್ ಗೆ ಬೆಳಗ್ಗೆಯಿಂದಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ