ಜನರು ಆತಂಕ ಪಡುವುದು ಬೇಡ: ಶಾಸಕ ಯಾದವಾಡ
Team Udayavani, Sep 8, 2019, 10:13 AM IST
ರಾಮದುರ್ಗ: ಉಜ್ಜಿನಕೊಪ್ಪ ಗ್ರಾಮದ ಹತ್ತಿರ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆ ದುರಸ್ತಿ ಕಾಮಗಾರಿಯನ್ನು ಶಾಸಕ ಮಹಾದೇವಪ್ಪ ಯಾದವಾಡ ವೀಕ್ಷಿಸಿದರು.
ರಾಮದುರ್ಗ: ಖಾನಾಪುರ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವುದರಿಂದಾ ನದಿ ಪಾತ್ರದ ಜನತೆ ಮತ್ತೋಮ್ಮೆ ಪ್ರವಾಹದ ಭೀತಿಯನ್ನು ಎದುರಿಸಬೇಕಾದ ಅನಿವಾರ್ಯತೆ ಬಂದಿದ್ದು, ಜನತೆ ಆತಂಕ ಪಡುವುದು ಬೇಡ ಎಂದು ಶಾಸಕ ಮಹಾದೇವಪ್ಪ ಯಾದವಾಡ ಧೈರ್ಯ ಹೇಳಿದರು.
ಮಲಪ್ರಭಾ ನದಿಗೆ 18 ಸಾವಿರ ಕ್ಯೂಸೆಕ್ಗಿಂತ ಹೆಚ್ಚು ನೀರು ಹರಿಬಿಟ್ಟ ಕಾರಣ ಮತ್ತೆ ಪ್ರವಾಹ ಪರಿಸ್ಥಿತಿ ಉದ್ಭವಗೊಂಡ ಹಿನ್ನೆಲೆಯಲ್ಲಿ ಹಲಗತ್ತಿ, ಸುನ್ನಾಳ, ಹಾಲೋಳ್ಳಿ ಹಾಗೂ ಹಳೆತೋರಗಲ್ಲ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿ ಜನರಿಗೆ ಧೈರ್ಯ ಹೇಳಿದರು. ನದಿ ಪಾತ್ರದಲ್ಲಿರುವ ಜನತೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ತಾತ್ಕಾಲಿಕ ಜೀವನ ನಡೆಸಲು ಬೇಕಾದ ಅವಶ್ಯಕ ಸೌಲಭ್ಯಗಳನ್ನು ಒದಗಿಸಲು ತಾಲೂಕಿನ ಅಧಿಕಾರಿಗಳಗೆ ಸೂಚನೆ ನೀಡಲಾಗಿದೆ. ಪ್ರವಾಹವನ್ನು ಸಮರ್ಥವಾಗಿ ಎದುರಿಸಲು ಸಹಕರಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಖಾನಾಪುರ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.
ರವಿವಾರ ಸುಮಾರು 20 ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿರುವ ಜನತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಮಾರುತಿ ತುಪ್ಪದ, ಬಿಜೆಪಿ ತಾಲೂಕಾಧ್ಯಕ್ಷ ಜಿ.ಜಿ. ಪಾಟೀಲ, ಮಹಾದೇವ ಚಿನ್ನಾಕಟ್ಟಿ, ಎಲ್.ಬಿ.ಕಿತ್ತೂರ ಸೇರಿದಂತೆ ಇದ್ದರು.
ಉಜ್ಜಿನಕೊಪ್ಪ ಗ್ರಾಮದ ಹತ್ತಿರದ ಮಲಪ್ರಭಾ ಎಡದಂಡೆ ಮುಖ್ಯ ಕಾಲುವೆಯ ದುರಸ್ತಿ ಕಾಮಗಾರಿಯನ್ನು ಶಾಸಕ ಮಹಾದೇವಪ್ಪ ಯಾದವಾಡ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಭೆೇಟಿ ನೀಡಿ ಪರಿಶೀಲಿಸಿದರು. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ