ಬಳ್ಳಾರಿ ನಾಲಾ ಹಾಲಾಹಲ!


Team Udayavani, Aug 19, 2019, 11:35 AM IST

bg-tdy-1

ಬೆಳಗಾವಿ: ಬಳ್ಳಾರಿ ನಾಲಾ ವ್ಯಾಪ್ತಿಯಲ್ಲಿ ಬೆಳೆಯುವ ಬಾಸುಮತಿ ಅಕ್ಕಿಯಿಂದ ಬರುವ ಸುಮಧುರ ವಾಸನೆ ಈಗ ದುರ್ನಾತ ಬೀರುವಂತಾಗಿದೆ. ಬಳ್ಳಾರಿ ನಾಲಾ ಈ ಭಾಗದ ರೈತರಿಗೆ ದುಃಸ್ವಪ್ನದಂತಾಗಿದೆ.

ಸಮಸ್ಯೆ ಚಿಕ್ಕದಾಗಿದ್ದರೂ ರಾಜಕಾರಣಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಜಟಿಲವಾಗುತ್ತಲೇ ಇದೆ. ಸತತ ಪ್ರವಾಹಕ್ಕೆ ಶಾಶ್ವತ ಅಂತ್ಯ ಹಾಡಬೇಕು ಎಂದು ಹತ್ತು ವರ್ಷಗಳ ಹಿಂದೆ ಮಂಜೂರಾಗಿದ್ದ ಮೂರು ಕೋಟಿ ರೂ. ಯೋಜನೆ ವ್ಯರ್ಥವಾಗಿ ನೀರಿನಲ್ಲಿ ಕರಗಿದೆ.

ಇದರಿಂದ ಬಳ್ಳಾರಿ ನಾಲಾ ವ್ಯಾಪ್ತಿಯ ಸುಮಾರು 23 ಹಳ್ಳಿಯ ರೈತರು ಪ್ರತಿ ವರ್ಷ ಅಪಾರ ನಷ್ಟ ಅನುಭವಿಸುತ್ತಿದ್ದಾರೆ.

ಅಭಿವೃದ್ಧಿ ವಿಷಯದಲ್ಲಿ ಅಧಿಕಾರಿಗಳು ಹಾಗು ರಾಜಕಾರಣಿಗಳ ಹಸ್ತಕ್ಷೇಪದಿಂದ ಸಣ್ಣ ಸಮಸ್ಯೆಗಳೂ ಜಟಿಲ ವಾಗುತ್ತ್ತಿವೆ. ಪರಿಹಾರಕ್ಕಾಗಿ ವೆಚ್ಚಮಾಡಿದ ಕೋಟ್ಯಂತರ ಹಣ ಪ್ರಯೋಜನವಿಲ್ಲದೆ ನೀರಿನಲ್ಲಿ ಕರಗುತ್ತದೆ. ಪ್ರತಿ ವರ್ಷ ಈ ಸಮಸ್ಯೆಯಿಂದ ಜನಸಾಮಾನ್ಯರು ಹಾಗೂ ರೈತರು ನಲುಗುತ್ತಿದ್ದರೂ ಶಾಶ್ವತ ಪರಿಹಾರದ ಲಕ್ಷಣಗಳು ಮಾತ್ರ ಕಾಣುತ್ತಲೇ ಇಲ್ಲ. ಇದಕ್ಕೆ ಈಗ ಬೃಹದಾಕಾರವಾಗಿ ಬೆಳೆದು ನಿಂತಿರುವ ಬಳ್ಳಾರಿ ನಾಲಾ ಪ್ರವಾಹವೇ ಸಾಕ್ಷಿ.

ಉತ್ತಮ ಬೆಳೆಯಿಂದ ಕಂಗೊಳಿಸಬೇಕಿದ್ದ ಹೊಲಗಳು ನದಿಯಂತೆ ಕಾಣುತ್ತ್ತಿವೆ. ಬೆಳಗಾವಿ ತಾಲೂಕಿನ ದಕ್ಷಿಣ ಹಾಗೂ ಪೂರ್ವ ಭಾಗದ ಹಳ್ಳಿಗಳಿಗೆ ಪ್ರತಿ ಮಳೆಗಾಲದಲ್ಲಿ ಬಳ್ಳಾರಿ ನಾಲಾ ಸಮಸ್ಯೆ ತಪ್ಪಿಲ್ಲ. ಮಳೆಗಾಲ ಬಂತೆಂದರೆ ಸಾಕು ಇಲ್ಲಿನ ರೈತರಿಗೆ ಆತಂಕ ಎದುರಾಗುತ್ತದೆ.

ಬೆಳಗಾವಿ ಸುತ್ತಮುತ್ತ ಧಾರಾಕಾರ ಮಳೆಯಾದರೆ ಈ ನಾಲಾ ತುಂಬಿ ಹೊಲಗಳಿಗೆ ಆವರಿಸಿಕೊಳ್ಳುತ್ತದೆ. ನೀರು ಸರಾಗವಾಗಿ ಹರಿದು ಹೋಗಲು ನಾಲಾ ಇದ್ದರೂ ಅದರಲ್ಲಿ ಬೆಳೆದುನಿಂತಿರುವ ಆಪು (ಕಸ) ಹಾಗೂ ಅತಿಕ್ರಮಣ ಇದಕ್ಕೆ ಅಡ್ಡಿಯಾಗಿವೆ.

ಈ ಬಳ್ಳಾರಿ ನಾಲಾ ವ್ಯಾಪ್ತಿಯಲ್ಲಿ ಪ್ರತಿ ಮಳೆಗಾಲದಲ್ಲಿ 4600 ಕ್ಕೂ ಅಧಿಕ ಎಕರೆ ಕೃಷಿ ಜಮೀನು ನೀರಿನಲ್ಲಿ ಮುಳುಗುತ್ತದೆ. ಇದರಲ್ಲಿ ಕೈಗೆ ಬರುವ ಬೆಳೆ ಬಹಳ ಕಡಿಮೆ. ಇದಕ್ಕೆ ಪರಿಹಾರ ಒದಗಿಸಬೇಕು ಎಂಬ ಉದ್ದೇಶದಿಂದ ಯೋಜನೆ ರೂಪಿಸಿದ್ದರೂ ಅದು ಇದುವರೆಗೆ ಪೂರ್ಣಗೊಂಡಿಲ್ಲ ಈ ಯೋಜನೆ ಪೂರ್ಣಗೊಂಡರೆ ಬೆಳಗಾವಿ ತಾಲೂಕಿನ ಸುಮಾರು 20,262 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಲಿದೆ.

ಈ ತಿಂಗಳು ಸುರಿದ ಧಾರಾಕಾರ ಮಳೆ ಹಾಗೂ ಬಳ್ಳಾರಿ ನಾಲಾ ಪ್ರವಾಹ ರೈತ ಸಮುದಾಯದ ಉತ್ತಮ ಬೆಳೆಯ ಆಸೆಗೆ ತಣ್ಣೀರು ಎರಚಿದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ ಸುಮಾರು ಮೂರು ಸಾವಿರ ಎಕರೆ ಪ್ರದೇಶದ ಬೆಳೆ ಪ್ರವಾಹದಿಂದ ನಾಶವಾಗಿದೆ.

ಬೆಳಗಾವಿ ನಗರದಲ್ಲಿ ಸುಮಾರು 23 ಕಿಲೋಮೀಟರ್‌ವರೆಗೆ ಈ ಬಳ್ಳಾರಿ ನಾಲಾ ಹರಿಯುತ್ತದೆ. ಅದರಲ್ಲಿ ಶೇ. 90 ರಷ್ಟು ನಾಲಾ ದಕ್ಷಿಣ ಭಾಗದಲ್ಲೇ ಇದೆ. ಇಲ್ಲಿ ಈಗೀಗ ಮಳೆಗಾಲದಲ್ಲಿ ಬಳ್ಳಾರಿ ನಾಲಾದ ಅವಾಂತರ ಶಾಶ್ವತವಾಗಿ ಬಿಟ್ಟಿದೆ. ಸರಾಗವಾಗಿ ನೀರು ಹರಿಯುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡಗಳು ತಲೆಎತ್ತಿವೆ. ಇದರ ಪರಿಣಾಮ ಬಡವರು, ಮಧ್ಯಮ ವರ್ಗದ ಜನ ಹಾಗೂ ರೈತರ ಮೇಲಾಗುತ್ತಿದೆ.

 

•ಕೇಶವ ಆದಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.