ನೆರವು ನೀಡಿ ಮಾನವೀಯತೆ ಮೆರೆದ ಜನರು


Team Udayavani, Aug 11, 2019, 4:43 PM IST

bg-tdy-3

ಚಿಕ್ಕೋಡಿ: ಕೇರೂರ ಗ್ರಾಮದಲ್ಲಿರುವ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ನೀಡಿದರು.

ಚಿಕ್ಕೋಡಿ: ಕೃಷ್ಣಾ ನದಿಯಿಂದ ಉಂಟಾದ ನೆರೆ ಪರಿಸ್ಥಿತಿಗೆ ಕಂಗಾಲಾಗಿ ಗ್ರಾಮ ತೊರೆದು ಬಂದ ಸಂತ್ರಸ್ತರಿಗೆ ಕೇರೂರ ಗ್ರಾಮದ ಜನ ನೆರವು ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ.

ಕಲ್ಲೋಳ, ಯಡೂರ, ಚೆಂದೂರ, ಮಾಂಜರಿ ಮತ್ತು ಅಂಕಲಿ ಗ್ರಾಮದ ಸುಮಾರು 1500 ಜನ ಕೇರೂರ ಗ್ರಾಮದ ಸಂತ್ರಸ್ತರ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ. ನೆರೆಹಾವಳಿಗೆ ತುತ್ತಾಗಿ ಮನೆ ಬಿಟ್ಟು ಬಂದಿರುವ ಸಂತ್ರಸ್ತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕೇರೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಪಾಟೀಲ ನೇತೃತ್ವದ ತಂಡ ಕಳೆದ ನಾಲ್ಕೈದು ದಿನಗಳಿಂದ ಪರಿಹಾರ ಕೇಂದ್ರದಲ್ಲಿದ್ದುಕೊಂಡು ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ.

ಪ್ರಕೃತಿ ವಿಕೋಪದಿಂದ ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹದಿಂದ ನದಿ ಪಾತ್ರದ ಜನ ಕಂಗಾಲಾಗಿ ಉಟ್ಟ ಬಟ್ಟೆ ಮೇಲೆ ಮನೆಗಳನ್ನು ಬಿಟ್ಟು ಬಂದಿದ್ದಾರೆ. ಇಂತಹ ಸಂಕಷ್ಟ ಸ್ಥಿತಿಯಲ್ಲಿರುವ ಜನರಿಗೆ ನೆರವು ನೀಡುವುದು ಮನುಷ್ಯನ ಧರ್ಮ. ಹೀಗಾಗಿ ಸಂತ್ರಸ್ತರಿಗೆ ಪ್ರತಿ ದಿನ ವಿಶೇಷವಾಗಿ ತಯಾರಿಸಲಾದ ರುಚಿಕಟ್ಟಾದ ಊಟ, ಬಟ್ಟೆ, ಬರೆ, ಜಾನುವಾರುಗಳಿಗೆ ಮೇವು ನೀಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

ಗ್ರಾಮದ ಎಲ್ಲ ಮುಖಂಡರು ಪಕ್ಷ ಭೇದ ಮರೆತು ಜನರ ಸಂಕಷ್ಟಕ್ಕೆ ನೆರವಾಗುತ್ತಿದ್ದಾರೆ. ಮಲ್ಲಿಕಾರ್ಜುನ ಪಾಟೀಲರ ನೆರವಿಗೆ ಜೋಡಕುರಳಿ ಗ್ರಾಮದ ಬಸಗೌಡ ಪಾಟೀಲ, ಚಂದ್ರಕಾಂತ ಪೂಜೇರಿ, ಅಪ್ಪಾಸಾಹೇಬ ಬ್ಯಾಳಿ, ಸುರೇಸ ಬಾಡ್ಕರ, ಮಲ್ಲಿಕಾರ್ಜುನ ಹಿರೇಮಠ ಮುಂತಾದವರು ಕೈಜೋಡಿಸಿದ್ದಾರೆ.

ಶಾಶ್ವತ ಪರಿಹಾರ ನೀಡಿ: ಇಲ್ಲಿಯ ಪರಿಹಾರ ಕೇಂದ್ರದಲ್ಲಿ ಕೇರೂರ ಗ್ರಾಮದ ಜನರು ನಮ್ಮನ್ನು ಸ್ವಂತ ಕುಟುಂಬದವರ ಹಾಗೇ ನೋಡಿಕೊಳ್ಳುತ್ತಿದ್ದಾರೆ. ಆದರೆ ಎಷ್ಟು ದಿನ ಬೇರೆಯವರಿಗೆ ನಮ್ಮ ನೋವು ಕೊಡುವುದು. ಈಗ ನಮ್ಮ ಬದುಕು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ನಮ್ಮ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ, ಉಟ್ಟ ಬಟ್ಟೆ ಮೇಲೆ ಮನೆ ಬಿಟ್ಟು ಬಂದಿದ್ದೇವೆ. ಈಗ ಮನೆಗಳು ನಡು ನೀರಿನಲ್ಲಿ ನಿಂತುಕೊಂಡಿವೆ. ನೀರು ಕಡಿಮೆಯಾದ ಮೇಲೆ ಮನೆ ಬೀಳುವ ಭಯ ಇರುತ್ತದೆ. ಕೂಡಲೇ ಸರ್ಕಾರ ಧನ ಸಹಾಯ ಮಾಡುವ ಬದಲು ಶಾಶ್ವತ ಪರಿಹಾರ ಕಂಡುಕೊಂಡು ಸೂಕ್ತ ಜಾಗದಲ್ಲಿ ಮನೆ ಕಟ್ಟಿಸಿಕೊಡಬೇಕೆಂದು ಸಂತ್ರಸ್ತ ಮಹಿಳೆ ಗಜುಬಾಯಿ ದೊಡಮನಿ ಸರ್ಕಾರಕ್ಕೆ ಮನವಿ ಮಾಡಿದರು.

ಪುನರ್ವಸತಿ ಕಲ್ಪಿಸಿ: ಕೃಷ್ಣಾ ನದಿಗೆ ಇಷ್ಟೊಂದು ಪ್ರಮಾಣ ನೀರು ಬರುತ್ತಿದೆಂದು ನಾವು ಊಹಿಸಿರಲಿಲ್ಲ, ಈ ಹಿಂದೆ 2005ರಲ್ಲಿ ಪ್ರವಾಹ ಬಂದು ನಮ್ಮ ಬದುಕು ಕಸಿದುಕೊಂಡಿದೆ. ಈಗ ಮತ್ತೂಮ್ಮೆ ನಮ್ಮ ಜೀವನ ಹಾಳಾಗಿದೆ. ಇಲ್ಲಿಯವರಿಗೆ ದುಡಿದು ಕಟ್ಟಿಸಿದ ಮನೆ ನೀರಿನಲ್ಲಿ ಮುಳುಗಿ ಹೋಗಿದೆ. ಈಗ ಪುನರ್ವವಸತಿ ಕಲ್ಪಿಸಿ ನಮಗೆ ಸೂಕ್ತ ಪರಿಹಾರ ಕೊಡಬೇಕೆಂದು ಕಲ್ಲೋಳ ಗ್ರಾಮದ ಮಹಿಳೆ ಸುಭದ್ರಾ ಪುಂಡಲಿಕ ಕಾಂಬಳೆ ಕಣ್ಣಿರು ಹಾಕುತ್ತಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.