ಶಾಶ್ವತ ಸ್ಥಳಾಂತರಕ್ಕೆ ಕೊನೆ ಮೊಳೆ


Team Udayavani, Jul 15, 2022, 4:41 PM IST

19

ಬೆಳಗಾವಿ: ಪ್ರತಿ ವರ್ಷ ಪ್ರವಾಹದಿಂದ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದ ನದಿ ಪಾತ್ರದ ಗ್ರಾಮಗಳ ಜನರ ಶಾಶ್ವತ ಸ್ಥಳಾಂತರದ ನಿರೀಕ್ಷೆ ಹುಸಿಯಾಗಿದೆ. ಗ್ರಾಮಗಳ ಸ್ಥಳಾಂತರ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟಪಡಿಸಿರುವುದರಿಂದ ಗ್ರಾಮಗಳ ಸ್ಥಳಾಂತರಕ್ಕೆ ಒತ್ತಾಯಿಸಿ ಹೋರಾಟ ಮಾಡುತ್ತಿದ್ದ ಜನರಿಗೆ ನಿರಾಸೆಯಾಗಿದೆ. ಜತೆಗೆ ಬಗಲಲ್ಲೇ ಅತಂಕ ಉಳಿದುಕೊಂಡಿದೆ.

ಗಡಿ ಜಿಲ್ಲೆ ಬೆಳಗಾವಿ, ಬಾಗಲಕೋಟೆ ಸೇರಿದಂತೆ ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳಲ್ಲಿ ಪ್ರತಿ ವರ್ಷ ಪ್ರವಾಹದ ಆತಂಕ ತಪ್ಪಿಲ್ಲ. ಇದರಿಂದ ಮನೆ-ಮಠ ಕಳೆದುಕೊಂಡಿರುವ ನದಿ ಪಾತ್ರದ ಗ್ರಾಮಗಳ ಜನರು ಕೃಷಿಯಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಇದರಿಂದ ಮುಕ್ತಿ ಪಡೆಯಲು ಗ್ರಾಮಗಳ ಸ್ಥಳಾಂತರ ಮಾಡಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿಬಂದಿತ್ತು. ಇದಕ್ಕಾಗಿ ಹೋರಾಟಗಳು ಸಹ ನಡೆದಿದ್ದವು.

ಆದರೆ ಈಗ ಗ್ರಾಮಗಳ ಸ್ಥಳಾಂತರ ಇಲ್ಲ ಎಂದು ಹೇಳಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ವಿಷಯದಲ್ಲಿ ಇದ್ದ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಗ್ರಾಮಗಳ ಸಮೀಪದ ಎತ್ತರದ ಪ್ರದೇಶದಲ್ಲಿ ಪುನರ್ವಸತಿ ಕೇಂದ್ರ ಆರಂಭಿಸುವ ಭರವಸೆ ನೀಡಿದ್ದಾರೆ.

ಗ್ರಾಮಗಳ ಸ್ಥಳಾಂತರಕ್ಕೆ ಸಾವಿರಾರು ಕೋಟಿ ಹಣ ಬೇಕು. ಇಷ್ಟು ಹಣ ಖರ್ಚು ಮಾಡಿ ಹೊಸ ಗ್ರಾಮಗಳ ನಿರ್ಮಾಣ ಮಾಡಿದರೂ ಜನರು ಅಲ್ಲಿಗೆ ಹೋಗುವುದಿಲ್ಲ ಎಂಬುದು ಸರ್ಕಾರದ ಅಭಿಪ್ರಾಯ. ಈ ಹಿಂದೆ ಸ್ಥಳಾಂತರ ಮಾಡಿರುವ ಗ್ರಾಮಗಳ ಈಗಿನ ಚಿತ್ರಣ ನೋಡಿದರೆ ಸರ್ಕಾರದ ವಾದ ಸರಿಯಾಗಿದೆ. ಸ್ಥಳಾಂತರಕ್ಕೆ ಮಾಡಿದ ಕೋಟ್ಯಂತರ ಹಣ ವ್ಯರ್ಥವಾಗಿದೆ. ಆದರೆ ಸ್ಥಳಾಂತರ ನಿರ್ಧಾರ ಕೈಬಿಟ್ಟಿರುವದರಿಂದ ನದಿ ತೀರದ ಗ್ರಾಮಗಳ ಜನರಿಗೆ ಪ್ರವಾಹದ ಆತಂಕದಿಂದ ಮುಕ್ತಿ ಸಿಗುವದಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಘಟಪ್ರಭಾ, ಮಲಪ್ರಭಾ ತೀರದ ಗೋಳು: ಮೂರು ವರ್ಷಗಳ ಹಿಂದೆ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ಭೀಕರ ಪ್ರವಾಹದಿಂದ ಉಂಟಾದ ಹಾನಿ ಮತ್ತು ಆತಂಕದಿಂದ ನದಿ ತೀರದ ಜನರು ಇನ್ನೂ ಚೇತರಿಸಿಕೊಂಡಿಲ್ಲ. ಆಗ ಉಂಟಾಗಿರುವ ನಷ್ಟಕ್ಕೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಪರಿಹಾರ ಸಿಕ್ಕಿಲ್ಲ. ಬಿದ್ದ ಮನೆಗಳ ನಿರ್ಮಾಣ ಪೂರ್ತಿಯಾಗಿಲ್ಲ. ಹೀಗಿರುವಾಗ ಪ್ರತಿ ವರ್ಷ ನಾವು ಪರಿಹಾರಕ್ಕೆ ಹೋರಾಟ ಮಾಡುವ ಪರಿಸ್ಥಿತಿ ಬರುತ್ತದೆ ಎಂಬುದು ಗ್ರಾಮಸ್ಥರ ಅತಂಕ.

2019ರಲ್ಲಿ ಕೃಷ್ಣಾ, ವೇದಗಂಗಾ ಜತೆಗೆ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಸಹ ಅಪಾರ ಪ್ರಮಾಣದಲ್ಲಿ ಹಾನಿ ಮಾಡಿದ್ದವು. ಆಗ ಜಿಲ್ಲಾಡಳಿತದ ಸಮೀಕ್ಷೆ ಪ್ರಕಾರ ಅತಿಯಾದ ಮಳೆ ಹಾಗೂ ನದಿಗಳ ಪ್ರವಾಹದಿಂದ 872 ಗ್ರಾಮಗಳು ತೊಂದರೆಗೆ ತುತ್ತಾಗಿದ್ದವು. ಭೀಕರ ಪ್ರವಾಹ ಸ್ಥಿತಿ ಬಂದಾಗ ಸ್ಥಳಕ್ಕೆ ಭೇಟಿ ನೀಡಿದ್ದ ಆಗಿನ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರೇ ಸ್ವತಃ ನದಿ ತೀರದ ಹಳ್ಳಿಗಳ ಸ್ಥಳಾಂತರ ವಿಷಯ ಪ್ರಸ್ತಾಪ ಮಾಡಿದ್ದಲ್ಲದೆ ಸಂತ್ರಸ್ತರು ಲಿಖೀತ ರೂಪದಲ್ಲಿ ಬರೆದುಕೊಟ್ಟರೆ ಸರ್ಕಾರ ಇದಕ್ಕೆ ಸಿದ್ಧ ಎಂದು ಹೇಳಿ ನದಿ ಪಾತ್ರದ ಜನರ ಆತಂಕದ ಜೀವನಕ್ಕೆ ಶಾಶ್ವತ ಪರಿಹಾರ ದೊರಕಿಸಿಕೊಡುವ ಹೆಜ್ಜೆ ಇಟ್ಟಿದ್ದರು.

ಆದರೆ ಎಲ್ಲವೂ ಅಂದುಕೊಂಡಂತೆ ಆಗಲೇ ಇಲ್ಲ. ನದಿ ನೀರಿನ ಅಬ್ಬರ ಇಳಿಯುತ್ತಿದ್ದಂತೆ ಹಳ್ಳಿಗಳ ಸ್ಥಳಾಂತರದ ಬಿಸಿಯೂ ಆರಿತು. ಪ್ರವಾಹದ ಆತಂಕಕ್ಕೆ ಸ್ಥಳಾಂತರವೇ ಪರಿಹಾರ ಎಂದು ಹೇಳಿದ್ದ ಜನಪ್ರತಿನಿಧಿಗಳು ಸಹ ಆನಂತರ ಸುಮ್ಮನಾದರು. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಳಾಂತರ ವಿಚಾರ ಕೈಬಿಟ್ಟಿರುವುದು ಶಾಶ್ವತ ಪರಿಹಾರದ ಆಸೆಯನ್ನು ಹುಸಿಮಾಡಿದೆ.

2005ರಲ್ಲೂ ಎದುರಾಗಿತ್ತು ಸಂಕಷ್ಟ: 2005ರಲ್ಲಿ ಕೃಷ್ಣಾ ನದಿಗೆ ಇದೇ ರೀತಿ ಭೀಕರ ಪ್ರವಾಹ ಬಂದಾಗ ನದಿ ತೀರದ ಹಳ್ಳಿಗಳನ್ನು ಸ್ಥಳಾಂತರ ಮಾಡಬೇಕು ಎಂದು ಆಗಿನ ಸರ್ಕಾರ ನಿರ್ಧಾರ ಮಾಡಿ ಪ್ರಕ್ರಿಯೆ ಸಹ ಆರಂಭಿಸಲಾಗಿತ್ತು. ಅನೇಕ ಹಳ್ಳಿಗಳಿಗೆ ಪರಿಹಾರ ನೀಡಲಾಗಿತ್ತು. ಆದರೆ ಯಾವ ಹಳ್ಳಿಯೂ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರವಾಗಲಿಲ್ಲ. ಹೀಗಾಗಿ ಸರ್ಕಾರ ಈಗ ಸ್ಥಳಾಂತರದ ಆಲೋಚನೆ ಕೈ ಬಿಟ್ಟಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸತತ ಪ್ರವಾಹ ನೋಡಿ ನದಿ ತೀರದ ಜನರು ಸುರಕ್ಷತೆಯ ದೃಷ್ಟಿಯಿಂದ ಸ್ಥಳಾಂತರವಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಅವರಲ್ಲಿ ಹಳ್ಳಿಗಳ ಸ್ಥಳಾಂತರ ಮಾಡಿದರೆ ತಮಗೆ ಬರುವ ಪರಿಹಾರ ಹಾಗೂ ಪುನರ್ವಸತಿ ಬಗ್ಗೆ ಆತಂಕ ಹಾಗೂ ಗೊಂದಲ ಇದೆ. ಪುನರ್ವಸತಿ ಎಲ್ಲಿ ಮತ್ತು ಯಾವ ರೀತಿ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಹೀಗಾಗಿ ಸಂತ್ರಸ್ತರು ಸರ್ಕಾರದ ಪುನರ್ವಸತಿ ಭರವಸೆಯನ್ನು ಅನುಮಾನದಿಂದ ನೋಡುತ್ತಿದ್ದಾರೆ.

ಗ್ರಾಮಗಳ ಸ್ಥಳಾಂತರ ಸುಲಭದ ಮಾತಲ್ಲ. ಇದಕ್ಕೆ ಸಾವಿರಾರು ಕೋಟಿ ಹಣ ಬೇಕು. ಜಾಗದ ಸಮಸ್ಯೆಯೂ ಇದೆ. ಒಂದು ವೇಳೆ ಇಷ್ಟೊಂದು ಹಣ ಖರ್ಚು ಮಾಡಿ ಹೊಸ ಗ್ರಾಮಗಳ ನಿರ್ಮಾಣ ಮಾಡಿದರೂ ಮೊದಲಿದ್ದ ಗ್ರಾಮಗಳಿಂದ ಜನ ಹೋಗುವದಿಲ್ಲ. ಪ್ರವಾಹ ಕಡಿಮೆಯಾದ ನಂತರ ಅವರು ಮತ್ತೆ ತಮ್ಮ ಹಳೆ ಗ್ರಾಮಕ್ಕೆ ಹೋಗುತ್ತಾರೆ. ಹೀಗಾಗಿ ಸ್ಥಳಾಂತರದ ಬದಲು ಪರ್ಯಾಯ ಯೋಜನೆ ಮಾಡಲಾಗುತ್ತಿದೆ. –ಗೋವಿಂದ ಕಾರಜೋಳ, ಜಲಸಂಪನ್ಮೂಲ ಸಚಿವ

ಗ್ರಾಮಗಳ ಸ್ಥಳಾಂತರ ಇಲ್ಲ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಸರಿಯಲ್ಲ. ಮೂರು ವರ್ಷಗಳ ಹಿಂದೆ ಬಂದ ಪ್ರವಾಹದಿಂದ ಬಹಳ ಕೆಟ್ಟ ಪರಿಸ್ಥಿತಿ ಎದುರಿಸಿದ್ದೇವೆ. ಆಗ ಇಲ್ಲಿಗೆ ಭೇಟಿ ನೀಡಿದ ಸಚಿವರು ಹಾಗೂ ಶಾಸಕರೆಲ್ಲ ಗ್ರಾಮವನ್ನು ಸ್ಥಳಾಂತರ ಮಾಡುವ ಭರವಸೆ ನೀಡಿದ್ದರು. ನಾವು ಸಹ ನಿರಾಳವಾಗಿದ್ದೆವು. ಆದರೆ ಈಗ ಮುಖ್ಯಮಂತ್ರಿಗಳು ಗ್ರಾಮಗಳ ಸ್ಥಳಾಂತರ ಇಲ್ಲ ಎಂದು ಹೇಳಿರುವುದು ಆತಂಕ ಉಂಟು ಮಾಡಿದೆ. ಪುನರ್ವಸತಿ ಕೇಂದ್ರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗುವದಿಲ್ಲ.  –ಚನ್ನಬಸು ನೆಲಗುಡ್ಡ, ಲಿಂಗದಾಳ ಗ್ರಾಮ

-ಕೇಶವ ಆದಿ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.