ಸಭೆ-ಸಮಾರಂಭಕ್ಕೆ ಅನುಮತಿ ಕಡ್ಡಾಯ


Team Udayavani, Sep 23, 2019, 11:36 AM IST

bg-tdy-1

ಬೆಳಗಾವಿ: ಜಿಲ್ಲೆಯ ಮೂರು ಮತಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಸೋಮವಾರದಿಂದ ನಾಮಪತ್ರ ಸ್ವೀಕಾರ ಆರಂಭವಾಗಲಿದೆ. ಮಾದರಿ ನೀತಿ ಸಂಹಿತೆ ಜಿಲ್ಲಾ ವ್ಯಾಪ್ತಿಯಲ್ಲಿ ಜಾರಿಯಲ್ಲಿ ಇರುವುದರಿಂದ ಯಾವುದೇ ಸಭೆ, ಸಮಾರಂಭ ಅಥವಾ ಮೆರವಣಿಗೆಗೆ ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಸೂಚನೆ ನೀಡಿದರು.

ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರವಿವಾರ ನಡೆದ ನೋಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನುಅಳವಡಿಸುವಂತಿಲ್ಲ. ಖಾಸಗಿ ಜಾಗದಲ್ಲಿ ಪ್ರಚಾರ ಸಾಮಗ್ರಿ ಅಳವಡಿಸಲು ಮಾಲೀಕರು ಹಾಗೂ ಸ್ಥಳೀಯ ಸಂಸ್ಥೆಯ ಅನುಮತಿ ಪಡೆದಿರಬೇಕು ಎಂದು ಹೇಳಿದರು.

ಚುನಾವಣಾ ಪ್ರಚಾರ ನಡೆಸಬೇಕಾದರೆ ನಿಯಮಾವಳಿ ಪ್ರಕಾರ ಪೂರ್ವಾನುಮತಿ ಪಡೆದುಕೊಳ್ಳಬೇಕು. ಪಕ್ಷದ ಪದಾಧಿಕಾರಿಗಳಿಗೆ ವಾಹನ ಬಳಕೆ, ಧ್ವನಿ ವರ್ಧಕಗಳ ಬಳಕೆಗೆ ಅನುಮತಿ ಪಡೆಯಬೇಕು. ಅದೇ ರೀತಿ ಖಾಸಗಿ ಸ್ಥಳದ ಬಳಕೆಗೆ ಅವುಗಳ ಮಾಲೀಕರಮತ್ತು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅನುಮತಿ ಅಗತ್ಯ ಎಂದರು.

ಚುನಾವಣಾ ವೆಚ್ಚ ವೀಕ್ಷಕರು: ಜಿಲ್ಲೆಯಲ್ಲಿ ನಡೆಯಲಿರುವ ಮೂರು ಮತಕ್ಷೇತ್ರಗಳ ಉಪಚುನಾವಣೆಯ ಖರ್ಚು-ವೆಚ್ಚದ ಮೇಲೆ ನಿಗಾ ವಹಿಸಲು ಚುನಾವಣಾ ವೀಕ್ಷಕರು ಶೀಘ್ರ

ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಬೊಮ್ಮನಹಳ್ಳಿ ತಿಳಿಸಿದರು. ಚುನಾವಣಾ ಸಂದರ್ಭಗಳಲ್ಲಿ

ದುರ್ಬಳಕೆ ತಡೆಗೆ ನಿಯಮಾನುಸಾರ ನಿಗಮ-ಮಂಡಳಿಗಳ ವಾಹನಗಳನ್ನು ಹಿಂದಕ್ಕೆ ಪಡೆಯಲಾಗುವುದು. ಮತದಾರರ ಪಟ್ಟಿ ಈಗಾಗಲೇ ಸಿದ್ಧಪಡಿಸಲಾಗಿರುತ್ತದೆ. ಹೊಸದಾಗಿ ಅರ್ಜಿ ಪರಿಶೀಲಿಸಿ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದ್ದು, ಹೆಸರು ಸೇರ್ಪಡೆಗೆ ಸೆ.30ರ ವರೆಗೆ ಅವಕಾಶವಿದೆ. ತಿದ್ದುಪಡಿ ಅಥವಾ ಹೆಸರು ತೆಗೆದು ಹಾಕಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪಟ್ಟಿಯಲ್ಲಿ ಸಂಶಯಾಸ್ಪದ ಹೆಸರುಗಳು ಕಂಡುಬಂದರೆ ಪಕ್ಷಗಳು ಅಥವಾ ಯಾರಾದರೂ ತಮ್ಮ ಗಮನಕ್ಕೆ ತಂದರೆ ಅಂತಹ ವ್ಯಕ್ತಿಗಳು ಮತದಾನಕ್ಕೆ ಬಂದಾಗ ಎಲ್ಲ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುವುದು. ಇವಿಎಂ/ವಿವಿ ಪ್ಯಾಟ್‌ಗಳಲ್ಲಿ ಹೊಸದಾಗಿ ಎಂ3 ಇವಿಎಂ ಗಳನ್ನು ಈ ಬಾರಿ ಬಳಕೆ ಮಾಡಲಾಗುತ್ತದೆ. ಮತಯಂತ್ರಗಳ ಬಳಕೆಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು.

ಪರ್ಯಾಯ ಮತಗಟ್ಟೆ ಸ್ಥಾಪನೆಪರಿಶೀಲನೆ: ಕಳೆದ ಚುನಾವಣೆಯಲ್ಲಿದ್ದ ಬಹುತೇಕ ಮತಕೇಂದ್ರಗಳು ಈ ಬಾರಿಯೂ ಇರಲಿವೆ. ಆದರೆ ಪ್ರವಾಹದಿಂದ ಕೆಲವು ಶಾಲಾ ಕಟ್ಟಡಗಳು ಕುಸಿದಿದ್ದರೆ ಅಥವಾ ಶಿಥಿಲಗೊಂಡಿದ್ದರೆ ಸೂಕ್ತ ಪರಿಶೀಲನೆ ಬಳಿಕ ಪರ್ಯಾಯ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಮತದಾನ ಸಂದರ್ಭದಲ್ಲಿ ಆಧಾರ, ವಾಹನ ಚಾಲನಾಪತ್ರ ಸೇರಿದಂತೆ 22 ದಾಖಲೆಗಳ ಪೈಕಿ ಯಾವುದಾದರೂ ಒಂದು ದಾಖಲೆ ಪ್ರದರ್ಶಿಸಿ ಮತದಾನ ಮಾಡಬಹುದು. ಒಂದು ವೇಳೆ ದಾಖಲೆಗಳನ್ನು ಕಳೆದುಕೊಂಡಿದ್ದರೆ ಸಾಕಷ್ಟು ಸಮಯಾವಕಾಶ ಇರುವುದರಿಂದ

ನಕಲು ಪ್ರತಿಯನ್ನು ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸಲು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

ರಾಜೇಂದ್ರ ಹರಕುಣಿ, ಬಹುಜನ ಸಮಾಜ ಪಾರ್ಟಿಯ ರಮೇಶ್‌ ಕಡ್ಲಾಸ್ಕರ, ಕೆ.ಜಿ. ಪಾಟೀಲ, ಅಪರ ಜಿಲ್ಲಾ ಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್‌. ಇತರರು ಇದ್ದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

Nomination: ಏ.18ಕ್ಕೆ ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸುತ್ತೇನೆ… ಪ್ರಿಯಂಕಾ ಜಾರಕಿಹೊಳಿ

belagaviBelagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Belagavi; ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.