ಕೃಷಿ ಜಮೀನು ನುಂಗಿದ ಕಲ್ಲುಗಳ ರಾಶಿ


Team Udayavani, Dec 16, 2019, 1:04 PM IST

bg-tdy-1

ಬೆಳಗಾವಿ: ಮೂರ್‍ನಾಲ್ಕು ತಿಂಗಳ ಹಿಂದೆ ಅಪ್ಪಳಿಸಿದ ಪ್ರವಾಹದಿಂದ ರೈತರ ಬದುಕು ಕೊಚ್ಚಿ ಹೋಗುವುದರ ಜತೆಗೆ ಹೊಲಗಳೂ ಕೊಚ್ಚಿ ಹೋಗಿವೆ. ತಾಲೂಕಿನ ಸಿದ್ಧನಹಳ್ಳಿ ಗ್ರಾಮದಲ್ಲಿ ಬಳ್ಳಾರಿ ನಾಲಾ ಪ್ರವಾಹದಿಂದ ರಾಶಿ ರಾಶಿಯಾಗಿ ಬಿದ್ದ ಕಲ್ಲಿನ ಗುಡ್ಡೆಗಳಿಂದ ಹೊಲಗಳು ಮುಚ್ಚಿ ಹೋಗಿವೆ. ಗುಡ್ಡದಂತೆ ಬಿದ್ದಿರುವ ಕಲ್ಲುಗಳನ್ನು ತೆಗೆಯುವುದೇ ದುಸ್ಥರವಾಗಿದೆ.

ಸಿದ್ಧನಹಳ್ಳಿ ಗ್ರಾಮದ ಪಕ್ಕದಲ್ಲಿ ಹರಿದು ಹೋಗುವ ಬಳ್ಳಾರಿ ನಾಲಾ ಇಡೀ ರೈತರ ಬದುಕನ್ನೇ ನುಂಗಿ ಹಾಕಿದೆ. ಜತೆಗೆ ರೈತರ ಹೊಲಗಳಿಗೂ ಕೊಳ್ಳೆ ಇಟ್ಟಿದ್ದು, ಎಲ್ಲವನ್ನೂ ನುಂಗಿ ನೀರು ಕುಡಿದಿದೆ. ಹಿಂದೆಂದೂ ಕಂಡು ಕೇಳರಿಯದಷ್ಟು ಬಳ್ಳಾರಿ ನಾಲಾದಲ್ಲಿ ನೀರು ಬಂದು ಸುತ್ತಲಿನ ಕೃಷಿ ಜಮೀನುಗಳನ್ನೇ ನುಂಗಿ ಹಾಕಿದೆ. ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಸಿದ್ಧನಹಳ್ಳಿ ಎಂಬ ಮುಳುಗಡೆ ಪ್ರದೇಶದ ಹೊಲಗಳು ಯಾವುದಕ್ಕೂ ಉಪಯೋಗಕ್ಕೆ ಬಾರದಂತಾಗಿವೆ.

ಬೆಳೆ ಹಾನಿ ಸಮೀಕ್ಷೆಯೇ ಇಲ್ಲ: ನೆರೆ ಬಂದೂ ನಾಲ್ಕು ತಿಂಗಳು ಗತಿಸಿದರೂ ಇಲ್ಲಿಯ ರೈತರ ಕಡೆಗೆ ಯಾರೂ ತಿರುಗಿಯೋ ನೋಡುತ್ತಿಲ್ಲ. ಪ್ರವಾಹದ ನೆಪದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಭೇಟಿ ನೀಡಿದ್ದು ಬಿಟ್ಟರೆ ಇನ್ನೂವರೆಗೆ ಒಬ್ಬರೂ ಬಂದಿಲ್ಲ. ಬೆಳೆ ಹಾನಿ ಸಮೀಕ್ಷೆಯೂ ಇಲ್ಲ, ಪರಿಹಾರವೂ ಇಲ್ಲದೇ ರೈತರು ಜಾತಕ ಪಕ್ಷಿಯಂತೆ ಕಾಯುತ್ತ ಕುಳಿತಿದ್ದಾರೆ.

ಪರಿಹಾರ ಮಾತುಗಳೇ ಇಲ್ಲ: ಫಲವತ್ತಾದ ಜಮೀನು ಹೊಂದಿರುವ ಈ ಗ್ರಾಮದ ಸುಮಾರು 20ಕ್ಕೂ ಹೆಚ್ಚು ಎಕರೆ ಜಮೀನು ಹಾನಿಯಾಗಿದೆ. ಬೆಳೆ ಹಾನಿಯಾದರೆ ಮತ್ತೂಂದು ಹಂಗಾಮಿನಲ್ಲಿ ಬೆಳೆಯಬಹುದು. ಆದರೆ ಇಡೀ ಜಮೀನಿಗೆ ಜಮೀನೇ ಅಲ್ಲಿ ನಿರ್ನಾಮಗೊಂಡಿದೆ. ಸಾವಿರಾರು ಟ್ರಾಕ್ಟರ್‌ಗಳಷ್ಟು ಕಲ್ಲಿನ ರಾಶಿಗಳು ಹೊಲದಲ್ಲಿ ಬಿದ್ದಿವೆ. ಅವುಗಳನ್ನು ಹೊರಗೆ ತೆಗೆದು ಕೃಷಿ ಚಟುವಟಿಕೆ ನಡೆಸುವುದು ಕಷ್ಟದ ಮಾತಾಗಿದೆ. ಇನ್ನೂವರೆಗೆ ಯಾವುದೇ ಜನಪ್ರತಿನಿಧಿಗಳಾಗಲೀ ಅಥವಾ ಅಧಿಕಾರಿಗಳಾಗಲೀ ಬಂದು ಭೇಟಿ ನೀಡಿ ಪರಿಹಾರ ನೀಡುವ ಮಾತುಗಳನ್ನು ಆಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಹರೇವಾರಿ ತರಕಾರಿ ಫಸಲು ನೀಡುವ ಈ ಬಂಗಾರದಂಥ ಜಮೀನಿನಲ್ಲಿ ಕಲ್ಲು ಬೆಳೆದಂತಾಗಿದೆ. ನೀರಿನಲ್ಲಿ ಹರಿದು ಬಂದಿರುವ ಕಲ್ಲುಗಳು ಹೊಲಗಳಲ್ಲಿ ಗಟ್ಟಿಯಾಗಿ ನೆಲೆಯೂರಿ ಕುಳಿತಿವೆ. ಮಣ್ಣು ಹಾಗೂ ನೀರಿನ ಹೊಡೆತಕ್ಕೆ ಬಂದು ಬಿದ್ದಿರುವ ಈ ಕಲ್ಲುಗಳು ನೆಲದಲ್ಲಿ ತಳವೂರಿ ಕುಳಿತಿದ್ದು, ಕೈಯಿಂದ ಇದನ್ನು ತೆಗೆದು ಹಾಕುವುದು ಕಷ್ಟಕರ.

ಕಲ್ಲು ಬೇರೆಡೆ ಸಾಗಿಸುವುದು ಕಷ್ಟ: ಆಗ ರೈತರು ಭತ್ತ, ಜೋಳ, ಗೋವಿನ ಜೋಳ, ತರಕಾರಿ ಬೆಳೆದಿದ್ದರು. ಆದರೆ ಈಗ ಹೊಲಗಳು ಕಲ್ಲಿನ ಪಾಲಾಗಿವೆ. ಮಣ್ಣೆಲ್ಲ ಕಿತ್ತು ಹೊಲಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳೂ ಬಿದ್ದಿವೆ. ಅದನ್ನು ಸಮತಟ್ಟು ಮಾಡುವುದು, ಕಲ್ಲುಗಳನ್ನು ಬೇರೆ ಕಡೆಗೆ ಸ್ಥಳಾಂತರಿಸುವುದು, ಮತ್ತೆ ಬೆಳೆ ಬೆಳೆಯುವುದು ಆಗದ ಮಾತು ಎನ್ನುತ್ತಾರೆ ರೈತರು.

ಮುಳುಗಡೆ ಪ್ರದೇಶ ಇದ್ದರೂ ಯಾವುದೇ ಸೌಲಭ್ಯವೂ ಇಲ್ಲ ಪರಿಹಾರವೂ ಇಲ್ಲ, ಪುನರ್ವಸತಿಯೂ ಕಲ್ಪಿಸಿಲ್ಲ. ಈ ಗ್ರಾಮವನ್ನು ಇನ್ನೂವರೆಗೆ ಸ್ಥಳಾಂತರ ಮಾಡದೇ, ಸೌಲಭ್ಯವನ್ನೂ ಕಲ್ಪಿಸಿಲ್ಲ. ಬಳ್ಳಾರಿ ನಾಲಾ ಅಣೆಕಟ್ಟು ಕಾಮಗಾರಿ ಆರಂಭಗೊಂಡರೂ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಈ ಅಧಿಕಾರಿಗಳಿಗೆ ಇಲ್ಲವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು. ತರಕಾರಿಯ ತವರೂರು ಎಂದೇ ಈ ಊರಿಗೆ ಕರೆಯಲಾಗುತ್ತಿದೆ. ಟೋಮೆಟೊ, ಕೋತಂಬರಿ,

ಭೇಂಡಿಕಾಯಿ, ಹಾಗಲಕಾಯಿ, ಚವಳಿಕಾಯಿ, ಮೆಣಸಿನಕಾಯಿ, ಹಿರೇಕಾಯಿ, ಸವತೆಕಾಯಿ, ಬದನೆಕಾಯಿ, ಸವರೆಕಾಯಿ, ಫ್ಲಾವರ್‌, ಎಲೆಕೂಸು(ಕ್ಯಾಬಿಜ್‌), ಬೀನ್ಸ್‌ ಸೇರಿದಂತೆ ಅನೇಕ ತರಕಾರಿ ಬೆಳೆಯಲಾಗುತ್ತದೆ. ಇಲ್ಲಿ ವಿವಿಧ ತರಹದ ತರಕಾರಿಗಳನ್ನು ಬೆಳೆದು ದಿನಾಲೂ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಕಳುಹಿಸಲಾಗುತ್ತಿದೆ. ನೆರೆ ಬಂದು ಅಪ್ಪಳಿಸಿದಾಗಿನಿಂದ ತರಕಾರಿ ಹೋಗುತ್ತಿಲ್ಲ. ಕೃಷಿಯನ್ನೇ ನಂಬು ಬದುಕುತ್ತಿರುವ ಇಲ್ಲಿಯ ರೈತರು ಪ್ರವಾಹದ ಹೊಡೆತದಿಂದ ಹೊರ ಬಂದಿಲ್ಲ.

 

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.