ನದಿಗಳ ಜೋಡಣೆಗೆ ಯೋಜನೆ


Team Udayavani, Feb 21, 2018, 10:39 AM IST

gul-5.jpg

ಇಂಡಿ: ದೇಶದಲ್ಲಿ ನೀರಿನ ಸಮಸ್ಯೆ ಇದೆ. ನದಿಗಳ ಜೋಡಣೆ ಕುರಿತು ಈಗಾಗಲೇ ಯೋಜನೆ ತಯಾರಿಸಲಾಗುತ್ತಿದೆ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತೀನ್‌ ಗಡ್ಕರಿ ಹೇಳಿದರು. ತಾಲೂಕಿನ ಝಳಕಿ ಗ್ರಾಮದಲ್ಲಿ ವಿಜಯಪುರ-ಸೊಲ್ಲಾಪುರ ಚತುಷ್ಪಥ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಗೋದಾವರಿ ನದಿಯಿಂದ ಸುಮಾರು ಮೂರು ಸಾವಿರ ಟಿಎಂಸಿ ನೀರು ಸಮುದ್ರದ ಪಾಲಾಗುತ್ತಿದೆ. ಅದನ್ನು ರಕ್ಷಿಸಿ ಉಪಯೋಗಿಸಿಕೊಂಡರೆ ಗುಜರಾತ, ಕರ್ನಾಟಕ, ಆಂಧ್ರ, ತೆಲಂಗಾಣ, ಗೋವಾ ರಾಜ್ಯಗಳಿಗೆ ನೀರಾವರಿಗೆ ಅನುಕೂಲವಾಗಲಿದೆ ಎಂದರಲ್ಲದೇ ಗಂಗಾ-ಕಾವೇರಿ ನದಿ ಜೋಡಿಸಲು ಶ್ರಮಿಸುವುದಾಗಿ ತಿಳಿಸಿದರು.

ನದಿ ಜೋಡಣೆ ಮೊದಲು ಸ್ಥಳೀಯವಾಗಿ ನೀರನ್ನು ರಕ್ಷಿಸಿ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಸಣ್ಣ ನಾಲೆ, ನದಿ, ಹಳ್ಳ, ಕೆರೆಯ ನೀರನ್ನು ರಕ್ಷಿಸಿಕೊಳ್ಳಬೇಕು. ನೀರು ಇಂಗುವಂತೆ ವ್ಯವಸ್ಥೆ ಮಾಡಬೇಕು. ಹಳ್ಳ-ಕೊಳ್ಳಗಳಿಗೆ ಬಾಂದಾರು ನಿರ್ಮಿಸಿ ನೀರು ಇಂಗಿಸಬೇಕು. ದೇಶದಲ್ಲಿ ರೈತರ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲದಂತಾಗಿದೆ. ಇದಕ್ಕೆ ಜಾಗತೀಕರಣ ಮಾರುಕಟ್ಟೆಯೇ ಕಾರಣವಾಗಿದೆ. ರೈತರು ಬಯೋ ಡಿಸೆಲ್‌ ತಯಾರಿಸುವ ಬೆಳೆ ಬೆಳೆಯಬೇಕಿದೆ ಎಂದರು.

ವಿಜಯಪುರ-ಸೊಲ್ಲಾಪುರ ಚತುಷ್ಪಥ ಕಾಮಗಾರಿ 2012ರಲ್ಲಿ ಆರಂಭವಾಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಆರಂಭವಾಗಲಿಲ್ಲ. ಈಗ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ಕಾಮಗಾರಿ ಆರಂಭವಾಗಲಿದೆ. ಕಾಮಗಾರಿಗೆ ಎರಡು ವರ್ಷ ಆರು ತಿಂಗಳು ಕಾಲಾವಕಾಶ ನೀಡಲಾಗಿದ್ದು ಒಂದೂವರೆ ವರ್ಷದ ಅವಧಿಯಲ್ಲೇ ಕಾಮಗಾರಿ ಮುಗಿಸಿಕೊಡುವ ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಐವತ್ತು ಲಕ್ಷ ಕೋಟಿ ರೂ. ಕಾಮಗಾರಿ ಆರಂಭಿಸಲಾಗಿದೆ. ಮುಂಬೈ ನಗರದಲ್ಲಿ ನೀರಿನಲ್ಲಿ ಚಲಿಸುವ
ಬಸ್‌ ಆರಂಭಿಸಲಾಗಿದೆ. ವಿಜಯಪುರ ಜಿಲ್ಲೆಯ ಕೆರೆಗಳು ಹಾಗೂ ನದಿಗಳಿಂದ ವಿಜಯಪುರದ ಜನತೆ ದೆಹಲಿಗೆ ಪ್ರಯಾಣ ಬೆಳೆಸುವಂತೆ ಮಾಡುವುದಾಗಿ ಹೇಳಿದರು. ಇದರಿಂದ ಏರ್‌ಪೋರ್ಟ್‌ ಅವಶ್ಯಕತೆ ಬೀಳುವುದಿಲ್ಲ. ನೀರಿನಲ್ಲಿ ಇಳಿಯುವ ವಿಮಾನಗಳು ಬರಲಿವೆ. ವಾಟರ್‌ ಫೋರ್ಟ್‌ಗಳು ನಿರ್ಮಾಣವಾಗಲಿವೆ. ಇದನ್ನು ನಮ್ಮ ಸರ್ಕಾರ
ಸಾಧಿಸಿ ತೋರಿಸಲಿದೆ ಎಂದರು.

ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತಕುಮಾರ ಮಾತನಾಡಿ, ಗಡ್ಕರಿ ಅವರು ಮುಂಬರುವ ದಿನಗಳಲ್ಲಿ ಕರ್ನಾಟಕಕ್ಕೆ 2 ಲಕ್ಷ ಕೋಟಿ ರೂ. ಮೌಲ್ಯದ ರಸ್ತೆಗಳನ್ನು ನಿರ್ಮಿಸಲಿದ್ದಾರೆ. ಭಾರತದ ಎಲ್ಲ 32 ನದಿಗಳನ್ನು ಜೋಡಿಸಬೇಕೆಂಬುದು ನನ್ನ ಬೇಡಿಕೆಯಾಗಿದೆ. ದೇಶದ 32 ನದಿಗಳನ್ನು ಜೋಡಿಸಿ ಸುಜಲಾಂ ಸುಫಲಾಂ ಮಾಡಬೇಕಿದೆ. ಎಲ್ಲ ನದಿಗಳ ಜೋಡಣೆ ಮೋದಿ ಅವರ ಕನಸಾಗಿದೆ ಎಂದರು.

ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ, ಕೇಂದ್ರ ಸಚಿವ ರಮೇಶ ಜಿಗಜಿಣಗಿ, ಸಂಸದ ಪ್ರಹ್ಲಾದ ಜೋಶಿ
ಮಾತನಾಡಿದರು.ಶಾಸಕ ರಮೇಶ ಭೂಸನೂರ, ಎಂಎಲ್‌ಸಿ ಅರುಣ ಶಹಾಪುರ, ಬಸವನಗೌಡ ಪಾಟೀಲ (ಯತ್ನಾಳ),
ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ, ಜಿಲ್ಲಾಧ್ಯಕ್ಷ ವಿಠ್ಠಲ ಕಟಕದೋಂಡ, ಚಂದ್ರಶೇಖರ ಕವಟಗಿ, ಬಿಜೆಪಿ ಮಂಡಲ ಅಧ್ಯಕ್ಷ ಕಾಸುಗೌಡ ಬಿರಾದಾರ, ರವಿಕಾಂತ ಬಗಲಿ, ದಯಾಸಾಗರ ಬಿರಾದಾರ, ಶ್ರೀಶೈಲಗೌಡ ಬಿರಾದಾರ, ಪಾಪು ಕಿತ್ತಲಿ, ಶೀಲವಂತ ಉಮರಾಣಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.