ದತ್ತು ಶಾಲೆಗಳ ಅಭಿವೃದ್ಧಿಗೆ ಯೋಜನೆ ಸಿದ್ಧ

ರಾಯಬಾಗ ಕ್ಷೇತ್ರದಲ್ಲಿ 3 ಶಾಲೆ ದತ್ತು ಪಡೆದ ಶಾಸಕ ಐಹೊಳೆ

Team Udayavani, Dec 26, 2020, 3:41 PM IST

ದತ್ತು ಶಾಲೆಗಳ ಅಭಿವೃದ್ಧಿಗೆ ಯೋಜನೆ ಸಿದ್ಧ

ಬೆಳಗಾವಿ: ಪಕ್ಕದಲ್ಲೇ ಕೃಷ್ಣಾ ನದಿ ಹರಿಯುತ್ತಿದ್ದರೂ ರಾಯಬಾಗ ತಾಲೂಕು ಅಭಿವೃದ್ಧಿ ವಿಷಯದಲ್ಲಿ ಇನ್ನೂ ಸಮೃದ್ಧಿಯಾಗಿಲ್ಲ. ಇದರಿಂದ ಶಿಕ್ಷಣ ಕ್ಷೇತ್  ಸಹ ಹೊರತಾಗಿಲ್ಲ. ಸೌಲಭ್ಯಗಳ ಕೊರತೆ ಇಲ್ಲಿ ಸರ್ಕಾರಿ ಶಾಲೆಗಳನ್ನು ಬಹಳವಾಗಿ ಕಾಡುತ್ತಿದೆ. ಬಹುತೇಕ ಶಾಲೆಗಳಲ್ಲಿ ಈಗಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿಲ್ಲ.

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರಬೇಕಾದರೆ ಅಲ್ಲಿ ಅಗತ್ಯ ಸೌಲಭ್ಯಗಳು ಇರಬೇಕು. ಈ ನಿಟ್ಟಿನಲ್ಲಿ ಶಾಲೆ ಶಿಕ್ಷಕ ಮಂಡಳಿ, ಶಾಲಾ ಸುಧಾರಣಾ ಸಮಿತಿ ಪ್ರಯತ್ನ ಮಾಡುತ್ತಿದ್ದರೂ ಅದು ಸಾಕಾಗುತ್ತಿಲ್ಲ. ಇದಕ್ಕೆ ಜನಪ್ರತಿನಿಧಿಗಳ ಸಹಕಾರ ಬಹಳ ಮುಖ್ಯ ಎಂಬ ಅಭಿಪ್ರಾಯ ಎಲ್ಲರಲ್ಲಿದೆ. ಮಕ್ಕಳ, ಶಿಕ್ಷಕರ ಹಾಗೂ ಪಾಲಕರ ಮನವಿಗೆ ಸ್ಪಂದಿಸಿರುವ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಕ್ಷೇತ್ರದಲ್ಲಿ 3 ಶಾಲೆ ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರಾಯಬಾಗ ವಿಧಾನಸಭಾ ಕ್ಷೇತ್ರದ ನಿಪನಾಳದ ಸರ್ಕಾರಿ ಪ್ರೌಢಶಾಲೆ, ರಾಯಬಾಗದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಚಿಂಚಲಿಯ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಶಾಲೆ ಶಾಸಕರು ಅಭಿವೃದ್ಧಿಪಡಿಸಲು ಯೋಜನೆ ಸಿದ್ಧಪಡಿಸಿದ್ದಾರೆ. ಅಂದಾಜು  105.20 ಲಕ್ಷ ವೆಚ್ಚದಲ್ಲಿ ಈ 3 ಶಾಲೆಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಉದ್ದೇಶಿಸಲಾಗಿದ್ದು ಪ್ರಮುಖವಾಗಿ ಶೌಚಾಲಯ, ಶುದ್ಧ ಕುಡಿವ ನೀರಿನ ಘಟಕ, ಹೆಚ್ಚುವರಿ ಕೊಠಡಿಗಳು ಹಾಗೂ ಆಟದ ಮೈದಾನ ಸೇರಿವೆ.

ಇದನ್ನೂ ಓದಿ:ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತು

ಸರ್ಕಾರಿ ಪ್ರೌಢಶಾಲೆ ನಿಪನಾಳ: 50.50 ಲಕ್ಷ

ರಾಯಬಾಗ ತಾಲೂಕಿನ ನಿಪನಾಳದ ಸರ್ಕಾರಿ ಪ್ರೌಢಶಾಲೆಯಲ್ಲಿ 8ರಿಂದ 10ರವರೆಗೆ ತರಗತಿಗಳಿದ್ದು ಒಟ್ಟು 292 ವಿದ್ಯಾರ್ಥಿಗಳಿದ್ದಾರೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಸಾಕಷ್ಟು ಕೊಠಡಿಗಳಿಲ್ಲ. ಹೀಗಾಗಿ ಎರಡು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಲಾಗಿದೆ. ಇದಲ್ಲದೇ ಸ್ಮಾರ್ಟ್‌ ಕ್ಲಾಸ್‌ ಸೌಲಭ್ಯ ಒದಗಿಸಲು ಸಹ ಉದ್ದೇಶಿಸಲಾಗಿದೆ. ಪ್ರೌಢಶಾಲೆ ಶಿಕ್ಷಕ ಮಂಡಳಿ ಮಾಡಿಕೊಂಡ ಮನವಿಗೆ ಸ್ಪಂದಿಸಿರುವ ಶಾಸಕರು ಅಂದಾಜು 50.50 ಲಕ್ಷ ರೂ. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದಾರೆ. ಇದರಲ್ಲಿ ಎರಡು ಕೊಠಡಿಗಳು, ಕಾಂಪೌಂಡ್‌ ನಿರ್ಮಾಣ, ಆಟದ ಮೈದಾನದ ಸಮತಟ್ಟು, ಸೈಕಲ್‌ ಸ್ಟ್ಯಾಡ್‌ ಹಾಗೂ ಪೇವರ್ಸ್‌ ಅಳವಡಿಕೆ ಸೇರಿವೆ.

ಕರ್ನಾಟಕ ಪಬ್ಲಿಕ್‌ ಸ್ಕೂಲ್‌: 40.20 ಲಕ್ಷ

ರಾಯಬಾಗ ಪಟ್ಟದಲ್ಲಿರುವ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ 1ರಿಂದ 12ನೇ ತರಗತಿ ಹೊಂದಿದ್ದು 749 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಇಲ್ಲಿ ಎಲ್ಲ ಸೌಲಭ್ಯಗಳು ಇಲ್ಲ. ಸರ್ಕಾರಿ ಶಾಲೆ ಸಮಸ್ಯೆಗಳ ಕೊರಗಿನಿಂದ ಹೊರಬರಬೇಕು. ಇದು ಉಳಿದ ಶಾಲೆಗಳಿಗೆ ಮಾದರಿಯಾಗಬೇಕು ಎಂದು ಇಲ್ಲಿನ ಶಿಕ್ಷಕ ವರ್ಗ ಪ್ರಯತ್ನ ಮಾಡುತ್ತಲೇ ಇದೆ. ಮುಖ್ಯವಾಗಿ ಶಾಲೆಯಲ್ಲಿ ಶೌಚಾಲಯ, ಕೊಠಡಿಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ಎದ್ದು ಕಾಣುತ್ತಿದೆ. 1ರಿಂದ 12ನೇ ತರಗತಿವರೆಗಿನ ಈ ಶಾಲೆಯಲ್ಲಿ ಬಾಲಕ ಹಾಗೂ ಬಾಲಕಿಯರು ಓದುತ್ತಿದ್ದಾರೆ. ಹೀಗಾಗಿ ಶಾಲೆಗೆ ಶೌಚಾಲಯದ ಅಗತ್ಯತೆ ಬಹಳ ಇದೆ. ಇದಲ್ಲದೇ ಎರಡು ಕೊಠಡಿಗಳು ಬೇಕು ಎಂದು ಶಿಕ್ಷಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಆಟದ ಮೈದಾನದ ಸಮತಟ್ಟು, ಸ್ಮಾರ್ಟ್‌ ಕ್ಲಾಸ್‌, ಸೈಕಲ್‌ ಸ್ಟ್ಯಾಡ್‌ ಬೇಡಿಕೆ ಸಹ ಇದೆ.

ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈಗ ಗ್ರಾಪಂ ಬಂದಿರುವುದರಿಂದ ಎಲ್ಲವೂ ವಿಳಂಬವಾಗಿದೆ. ಚುನಾವಣೆ ಮುಗಿದ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹಣ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು. ಹಣ ಬಂದ ಕೂಡಲೇ ಅಗತ್ಯ ಕಾಮಗಾರಿಗೆ ಕ್ರಮ ವಹಿಸಲಾಗುತ್ತದೆ

ದುರ್ಯೋಧನ ಐಹೊಳೆ, ಶಾಸಕರು, ರಾಯಬಾಗ

ಕೇಶವ ಆದಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.