ಭರದಿಂದ ಸಾಗಿದೆ ಸಸಿ ನೆಡುವ ಕಾರ್ಯ
•ರಸ್ತೆ ಎರಡೂ ಬದಿಯಲ್ಲಿ 15 ಸಾವಿರ ಸಸಿ ನೆಟ್ಟ ಅರಣ್ಯ ಇಲಾಖೆ
Team Udayavani, Jul 1, 2019, 9:59 AM IST
ಬೆಟಗೇರಿ: ಹೂಲಿಕಟ್ಟಿ ಸಸಿ ಪಾಲನಾ ಕೇಂದ್ರದಲ್ಲಿ ಬೆಳೆಸಲಾದ ವಿವಿಧ ಜಾತಿಯ ಸಸಿಗಳು.
ಬೆಟಗೇರಿ: ಪ್ರಸಕ್ತ ವರ್ಷ ಮುಂಗಾರು ಮಳೆ ಆರಂಭವಾಗುತ್ತಿದಂತೆ ಗೋಕಾಕ ವಲಯ ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಗೋಕಾಕ ತಾಲೂಕಿನ ಹಳ್ಳಿಗಳಿಗೆ ಹೋಗುವ ಮುಖ್ಯ ರಸ್ತೆಗಳ ಎರಡೂ ಬದಿಗೆ ಹಾಗೂ ಶಾಲಾ ಕಾಲೇಜುಗಳ ಆವರಣಗಳಲ್ಲಿ ಸಸಿ ನೆಡುವ ಕಾರ್ಯ ಭರದಿಂದ ಸಾಗಿದೆ.
ಗೋಕಾಕ ತಾಲೂಕಿನ ಮಮದಾಪುರ ಕ್ರಾಸ್-ಹೂಲಿಕಟ್ಟಿ, ಮೆಳವಂಕಿ-ಬಿಲಕುಂದಿ ದಂಡಿನ ಮಾರ್ಗ ಹಾಗೂ ಕಳ್ಳಿಗುದ್ದಿ, ವೆಂಕಟಾಪುರ, ಗೋಸಬಾಳ ಸೇರಿದಂತೆ ಹಲವು ಹಳ್ಳಿಗಳ ಮುಖ್ಯ ರಸ್ತೆಗಳ ಎರಡೂ ಬದಿಗೆ ಪ್ರಸಕ್ತ ವರ್ಷ ಗೋಕಾಕ ಸಾಮಾಜಿಕ ಅರಣ್ಯ ವಲಯ ಸಸಿಗಳೆನ್ನಟ್ಟು ಪರಿಸರ ಬೆಳೆಸುವ ಮತ್ತು ಪ್ರಯಾಣಿಕರಿಗೆ ರಸ್ತೆಯ ಪಕ್ಕ ಬೇಸಿಗೆ ದಿನಗಳಲ್ಲಿ ನೆರಳು ನೀಡಲು ಮುಂದಾಗಿದೆ. ಈಗ 15 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವುದರಿಂದ ಪರಿಸರ ಪ್ರೇಮಿಗಳಿಗೆ ಸಂತಸ ತಂದಿದೆ.
ಗೋಕಾಕ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದ ಹೂಲಿಕಟ್ಟಿ ಮತ್ತು ಶಿಂಗಾಳಾಪುರ ಸಸಿ ಪಾಲನಾ ಕೇಂದ್ರದಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಸಸಿಗಳನ್ನು ಪೋಷಣೆ ಮಾಡಿ ಬೆಳಸಲಾಗಿದೆ. ಅದರಲ್ಲೂ ಒಂದು ಲಕ್ಷದಷ್ಟು ರೇಷ್ಮೆ ಸಸಿಗಳನ್ನು ಬೆಳಸಲಾಗಿದೆ. ರೇಷ್ಮೆ ಸೇರಿದಂತೆ ರಕ್ತ ಚಂದನ, ಸಾಗವಾಣಿ, ಶ್ರೀಗಂಧ, ಸಸಿಗಳನ್ನು ರೈತರಿಗೆ ಉಚಿತವಾಗಿ ನೀಡಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಗಿರೀಶ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಗೋಕಾಕ ತಾಲೂಕಿನ ಹಲವು ಮುಖ್ಯ ರಸ್ತೆಗಳ ಎರಡೂ ಬದಿಗೆ, ಅರಣ್ಯ ಪ್ರದೇಶದಲ್ಲಿ ಇನ್ನೂ 15 ಸಾವಿರಕ್ಕೂ ಹೆಚ್ಚು ಸಸಿಗಳನ್ನೆಡಲು ಪ್ರಯತ್ನಿಸಲಾಗುವುದು.• ಗಿರೀಶ ಸಂಕರಿ, ಗೋಕಾಕ ಅರಣ್ಯ ವಲಯ ಅರಣ್ಯಾಧಿಕಾರಿ.
•ಅಡಿವೇಶ ಮುಧೋಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ