ಸರ್ಕಾರಿ ಶಾಲೆಗಳಿಗಿಲ್ಲ ಸೂರಿನ ಸುರಕ್ಷತೆ

•ಶೈಕ್ಷಣಿಕ ಜಿಲ್ಲೆಯಲ್ಲಿ 2082 ಕೊಠಡಿಗಳ ಕೊರತೆ•ಜೀವ ಭಯದಲ್ಲೇ ನಿತ್ಯ ಮಕ್ಕಳ ಅಧ್ಯಯನ

Team Udayavani, Jul 13, 2019, 2:13 PM IST

bg-tdy-4..

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಕನ್ನಡ ಶಾಲಾ ಕೊಠಡಿಗಳ ಮೇಲ್ಛಾವಣೆ ಕಿತ್ತು ಹೋಗಿರುವುದು.

ಚಿಕ್ಕೋಡಿ: ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಾಂತರ ಅನುದಾನ ಖರ್ಚು ಮಾಡುತ್ತಿದೆ. ಆದರೆ ಮಕ್ಕಳ ಭವಿಷ್ಯ ರೂಪಿಸುವ ಸರ್ಕಾರಿ ಪ್ರಾಥಮಿಕ ಕನ್ನಡ ಶಾಲೆಗಳಿಗೆ ಸಮರ್ಪಕ ಕೊಠಡಿ ನಿರ್ಮಿಸದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 2082 ಕೊಠಡಿಗಳ ಕೊರತೆಯಿಂದ ಪ್ರಾಥಮಿಕ ಶಾಲೆಗಳ ಸ್ಥಿತಿ ಅಯೋಮಯವಾಗಿದ್ದು, ಪ್ರಾಥಮಿಕ ಶಾಲೆಗಳು ಮುಚ್ಚುವ ಸ್ಥಿತಿ ಗಡಿ ಭಾಗದಲ್ಲಿ ನಿರ್ಮಾಣವಾಗಿದೆ. ಭೌಗೋಳಿಕವಾಗಿ ದೊಡ್ಡ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಹೊಂದಿರುವ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಬಹುತೇಕ ಶಾಲಾ ಕೊಠಡಿಗಳು ಶಿಥಿಲಾವಸ್ಥೆ ಕಂಡಿದ್ದು, ಮಕ್ಕಳು ಜೀವ ಭಯದಲ್ಲಿ ಅಧ್ಯಯನ ಮಾಡುವ ಪ್ರಸಂಗ ಎದುರಾಗಿದೆ.

ಶೈಕ್ಷಣಿಕ ಜಿಲ್ಲೆಯ ಚಿಕ್ಕೋಡಿ, ಅಥಣಿ, ನಿಪ್ಪಾಣಿ, ಕಾಗವಾಡ, ರಾಯಬಾಗ,ಹುಕ್ಕೇರಿ, ಮೂಡಲಗಿ ಮತ್ತು ಗೋಕಾಕ ವಲಯಗಳ ವ್ಯಾಪ್ತಿಯಲ್ಲಿ 1158 ಕೊಠಡಿಗಳು ಸಂಪೂರ್ಣವಾಗಿ ಶಿಥಿಲಾವಸ್ಥೆ ಕಂಡಿವೆ. ಅವುಗಳನ್ನು ನೆಲಸಮಗೊಳಿಸಿ ಮರು ನಿರ್ಮಾಣದ ಬೇಡಿಕೆ ಸರ್ಕಾರದ ಮುಂದಿದೆ. ಮಕ್ಕಳು ಸಂಖ್ಯೆ ಹೆಚ್ಚಿರುವ ಶಾಲೆಗಳಲ್ಲಿ 924 ಬೋಧನೆಗಾಗಿ ಹೆಚ್ಚುವರಿ ಶಾಲಾ ಕೊಠಡಿ ನಿರ್ಮಾಣ ಮಾಡುವ ಬೇಡಿಕೆ ಇದೆ. ಅದರಂತೆ ಶೈಕ್ಷಣಿಕ ಜಿಲ್ಲೆಯ 1337 ಶಾಲಾ ಕೊಠಡಿಗಳು ದುರಸ್ತಿಗೆ ಒಳಪಟ್ಟಿವೆ.

ಎಲ್ಲೆಲ್ಲಿ ಎಷ್ಟು ಕೊಠಡಿ: ಶೈಕ್ಷಣಿಕ ಜಿಲ್ಲೆಯ ಚಿಕ್ಕೋಡಿ ವಲಯ ವ್ಯಾಪ್ತಿಯಲ್ಲಿ 215 ಶಾಲಾ ಕೊಠಡಿಗಳನ್ನು ನೆಲಸಮಗೊಳಿಸಿ ಹೊಸ ಕೊಠಡಿ ನಿರ್ಮಾಣ ಮಾಡುವುದು ಮತ್ತು 180 ಹೆಚ್ಚುವರಿ ಶಾಲಾ ಕೊಠಡಿ ಸೇರಿ 395 ಶಾಲಾ ಕೊಠಡಿ ನಿರ್ಮಾಣದ ಅವಶ್ಯಕವಿದೆ. ಕಾಗವಾಡ ವಲಯದಲ್ಲಿ 100 ಕೊಠಡಿ, ನಿಪ್ಪಾಣಿ ವಲಯದಲ್ಲಿ 175 ಕೊಠಡಿ, ಗೋಕಾಕ ವಲಯದಲ್ಲಿ 209 ಕೊಠಡಿ, ಮೂಡಲಗಿ ವಲಯದಲ್ಲಿ 437 ಕೊಠಡಿ, ರಾಯಬಾಗ ವಲಯದಲ್ಲಿ 362 ಕೊಠಡಿ, ಅಥಣಿ ವಲಯದಲ್ಲಿ 69 ಕೊಠಡಿ ನಿರ್ಮಾಣವಾಗುವುದು ಅವಶ್ಯಕವಾಗಿದೆ.

ಗಡಿ ಭಾಗದಲ್ಲಿ ಕನ್ನಡ ಶಾಲೆಗಳಿಗೆ ಕುತ್ತು: ಶೈಕ್ಷಣಿಕ ಜಿಲ್ಲೆಯು ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿದ್ದು, ಗಡಿ ಭಾಗದಲ್ಲಿ ಮರಾಠಿ ಅಳಿಸಿ ಕನ್ನಡ ಗಟ್ಟಿತನವಾಗಲು ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಗಳನ್ನು ತೆರೆದಿದೆ. ಲಕ್ಷಾಂತರ ಮಕ್ಕಳು ಕನ್ನಡ ಶಾಲೆಯಲ್ಲಿ ಅಧ್ಯಯನ ಮಾಡಲು ದಾಖಲಾತಿ ಪಡೆದುಕೊಂಡಿದ್ದಾರೆ. ಆದರೆ ಸಮರ್ಪಕ ಶಾಲಾ ಕೊಠಡಿ ಇಲ್ಲದೆ ಕನ್ನಡ ಪ್ರಾಥಮಿಕ ಶಾಲೆಗಳು ಸೊರಗುತ್ತಿವೆ.

ಖಾಸಗಿ ಶಾಲೆಗಳತ್ತ ಮಕ್ಕಳ ಮುಖ: ಮೂಲಸೌಲಭ್ಯಗಳಿಂದ ವಂಚಿತವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ಬಿಟ್ಟು ಖಾಸಗಿ ಶಾಲೆಗಳತ್ತ ಮಕ್ಕಳು ಮುಖ ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವೇ ನಿರ್ಲಕ್ಷ ಭಾವನೆ ತೋರುತ್ತಿದೆ. ಹೀಗಾಗಿ ಗಡಿ ಭಾಗದಲ್ಲಿ ಮಕ್ಕಳು ಸರ್ಕಾರಿ ಶಾಲೆ ಬಿಟ್ಟು ಖಾಸಗಿ ಶಾಲೆ ಸೇರುತ್ತಿರುವುದು ಅನಿವಾರ್ಯವಾಗಿದೆ.

ಜನಪ್ರತಿನಿಧಿಗಳ ನಿರಾಸಕ್ತಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಶಾಲೆಗಳಿಗೆ 2082 ಶಾಲಾ ಕೊಠಡಿ ಅವಶ್ಯಕವಾಗಿ ಬೇಕಾಗಿದ್ದರೂ, ಕೂಡಾ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮುಂದೆ ಪ್ರಸ್ತಾವಣೆ ಇಟ್ಟು ಮಂಜೂರು ಪಡೆಯಲು ಯಾವ ಜನಪ್ರತಿನಿಧಿಯು ಮನಸ್ಸು ಮಾಡದಿರುವುದು ದುರ್ದೈವದ ಸಂಗತಿ.

 

•ಮಹಾದೇವ ಪೂಜೇರಿ

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.