ಜಾರಿ ಬೀಳದಂತೆ ನಡೆವವನೇ ಜಾಣ!

| ನಗರ ಬಸ್‌ ನಿಲ್ದಾಣದ ಶೋಚನೀಯ ಸ್ಥಿತಿ |ನಿಧಾನ ಕಾಮಗಾರಿ-ಮಳೆ ನೀರಿನಿಂದ ಸಮಸ್ಯೆ

Team Udayavani, Jul 30, 2019, 10:15 AM IST

bg-tdy-1

ಬೆಳಗಾವಿ: ನೆಲಕ್ಕೆ ಹೆಜ್ಜೆ ಇಡಲಾರದಷ್ಟು ರಾಡಿ; ರಭಸದಿಂದ ವಾಹನ ಬಂದರೆ ಮೈಗೆಲ್ಲ ಕೆಂಪು ನೀರಿನ ಸಿಂಚನ; ಮಳೆ ಜೋರಾದರೆ ಆಸರೆಗೂ ಏನಿಲ್ಲ; ಎದ್ನೋ ಬಿದ್ನೋ ಎಂಬಂತೆ ಓಡೋಡಿ ಬಸ್‌ ಹತ್ತಲು ಹರಸಾಹಸ.

ಇದು ಸ್ಮಾರ್ಟ್‌ ಸಿಟಿ ಹೆಗ್ಗಳಿಕೆಯ ನಗರ ಬಸ್‌ ನಿಲ್ದಾಣ ಬಳಿ ಕಂಡು ಬರುವ ದೃಶ್ಯ. ಇಲ್ಲಿಯ ನಗರ ಬಸ್‌ ನಿಲ್ದಾಣ ಕಾಮಗಾರಿ ಆರಂಭವಾಗುತ್ತಿದ್ದಂತೆ ಪಕ್ಕದಲ್ಲಿಯೇ ಸಿಕ್ಕ ಜಾಗದಲ್ಲಿ ನಗರ ಹಾಗೂ ಗ್ರಾಮೀಣ ಬಸ್‌ಗಳನ್ನು ನಿಲ್ಲಿಸಲಾಗುತ್ತಿದ್ದು, ಆದರೆ ಮಳೆಗಾಲ ಶುರು ಆದಾಗಿನಿಂದ ಈ ನಿಲ್ದಾಣ ಸಂಪೂರ್ಣ ಗಲೀಜಿನಿಂದ ಕೂಡಿ ಪ್ರಯಾಣಿಕರ ಸ್ಥಿತಿ ಶೋಚನೀಯವಾಗಿದೆ. ಈ ಸ್ಥಳದಲ್ಲಿ ಸ್ವಲ್ಪ ಎಚ್ಚರ ತಪ್ಪಿ ನಡೆದರೆ ಜಾರಿ ಬೀಳುವುದು ಖಚಿತ.

ಕೇಂದ್ರ ಬಸ್‌ ನಿಲ್ದಾಣ ಮುಂಭಾಗದಲ್ಲಿಯೇ ನೂತನ ಸಿಬಿಟಿ ಕಾಮಗಾರಿ ನಡೆದಿದೆ. ಕಳೆದ ಏಳೆಂಟು ತಿಂಗಳಿಂದ ಇಲ್ಲಿ ಕೆಲಸ ಶುರುವಾಗಿದೆ. ಪರ್ಯಾಯವಾಗಿ ಸದ್ಯ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ಪಕ್ಕದಲ್ಲಿ ಲಭ್ಯವಾದ ಸ್ಥಳದಲ್ಲಿಯೇ ತಾತ್ಕಾಲಿಕ ಬಸ್‌ ನಿಲ್ದಾಣ ಮಾಡಲಾಗಿದೆ. ನಿತ್ಯ ಸಾವಿರಾರು ಜನ ಬೆಳಗಾವಿ ನಗರಕ್ಕೆ ಬಂದು ಹೋಗುತ್ತಾರೆ. ಇಲ್ಲಿರುವ ಇಕ್ಕಟ್ಟಾದ ಬಸ್‌ ನಿಲ್ದಾಣದಿಂದಾಗಿ ಜನರು ನಿತ್ಯ ಸಮಸ್ಯೆ ಅನುಭವಿಸುವಂತಾಗಿದೆ.

ಕೆಂಪು ಮಣ್ಣಿನ ರಾಡಿ: ಜಿಟಿ ಜಿಟಿ ಮಳೆ ಆದಾಗಲಂತೂ ಇಲ್ಲಿ ನಡೆದಾಡುವುದೇ ಸಾಹಸಮಯ. ಸಾಂಬ್ರಾ ಮಾರ್ಗವಾಗಿ ಹೋಗುವ ಊರುಗಳಿಗಾಗಿ ಇರುವ ಬಸ್‌ ನಿಲ್ದಾಣದ ಈ ಸ್ಥಿತಿ ಹೇಳತೀರದಾಗಿದೆ. ಕೆಂಪು ಮಣ್ಣಿನಿಂದ ಕೂಡಿರುವ ಈ ತಾತ್ಕಾಲಿಕ ಬಸ್‌ ನಿಲ್ದಾಣ ಸಂಪೂರ್ಣ ರಾಡಿಯಿಂದ ಕೂಡಿದೆ. ತೆಗ್ಗು ಗುಂಡಿಗಳಿಂದಾಗಿ ನೀರು ನಿಂತು ಜನರು ಸಂಚರಿಸುವುದೇ ಕಷ್ಟಕರವಾಗಿದೆ. ಜೋರಾಗಿ ಬಸ್‌ ಬಂದರೆ ಗಲೀಜು ನೀರು ಮೈಮೇಲೆ ಸಿಡಿಯುವುದಂತೂ ಗ್ಯಾರಂಟಿ. ಅನೇಕ ಸಮಸ್ಯೆಗಳಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ.

ಕಾಲಿಟ್ಟಲ್ಲೆಲ್ಲ ಗಲೀಜು: ಇಕ್ಕಟ್ಟಾದ ಬಸ್‌ ನಿಲ್ದಾಣದಲ್ಲಿ ಸುಳೇಭಾವಿ, ಮಾವಿನಕಟ್ಟಿ, ಬಸರೀಕಟ್ಟಿ, ಶಿಂಧೋಳ್ಳಿ, ಪಂತ ಬಾಳೇಕುಂದ್ರಿ, ಕರಡಿಗುದ್ದಿ ಬಸ್‌ಗಳು ನಿಲ್ಲುತ್ತವೆ. ಈ ಮಾರ್ಗದ ಬಸ್‌ ನಿಲ್ಲುವ ಜಾಗ ಸಂಪೂರ್ಣ ಹದಗೆಟ್ಟಿದ್ದರಿಂದ ಜನರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಸಮವಸ್ತ್ರಗಳು, ಚಪ್ಪಲಿ, ಶೂಗಳನ್ನು ರಾಡಿಮಯ ಮಾಡಿಕೊಂಡೇ ಹೋಗಬೇಕಾದ ಸ್ಥಿತಿ ಇದೆ.

ಒಮ್ಮೆ ಏನಿಲ್ಲವೆಂದರೂ 20ಕ್ಕೂ ಹೆಚ್ಚುಗಳು ಇಲ್ಲಿಗೆ ಬಸ್‌ ಆಗಮಿಸುತ್ತವೆ. ಜನದಟ್ಟಣೆಯೂ ಹೆಚ್ಚಾಗುತ್ತಿರುವುದರಿಂದ ಜನರಿಗೆ ನಿಲ್ಲಲೂ ಸ್ಥಳಾವಕಾಶ ಇಲ್ಲದಂತಾಗಿದೆ. ನೂತನ ಸಿಬಿಟಿ ಕಾಮಗಾರಿ ನಡೆಯುತ್ತಿರುವ ಸುತ್ತಲೂ ತಗಡಿನ ಶೆಡ್‌ ಆವರಣ ಹಾಕಲಾಗಿದೆ. ಅದರ ಪಕ್ಕದಲ್ಲಿಯೇ ಮಳೆ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛಾವಣಿ ಹಾಗೂ ಕೆಲವು ಕಡೆ ತಗಡಿನ ಶೆಡ್‌ನ‌ ವ್ಯವಸ್ಥೆ ಮಾಡಲಾಗಿದೆ. ತಗಡಿನ ಶೆಡ್‌ನ‌ ಮೇಲ್ಛಾವಣಿ ಕಡಿಮೆ ಇರುವುದರಿಂದ ಜನರಿಗೆ ನಿಲ್ಲಲೂ ಆಗುತ್ತಿಲ್ಲ. ಜಾಗ ಬಹಳ ಇಕ್ಕಟ್ಟಾಗಿದ್ದೇ ಇದಕ್ಕೆಲ್ಲ ಮುಖ್ಯ ಕಾರಣ.

ಶೌಚಾಲಯ ಇಲ್ಲದೇ ಕಿರಿಕಿರಿ: ಸಾವಿರಾರು ಜನ ನಗರಕ್ಕೆ ಬರುತ್ತಿದ್ದರೂ ಇಲ್ಲಿ ಶೌಚಾಲಯದ ವ್ಯವಸ್ಥೆ ಇಲ್ಲ. ಶೌಚಾಲಯ ಇಲ್ಲದ್ದಕ್ಕೆ ಮಹಿಳೆಯರು ಅಲ್ಲಿಯೇ ಪಕ್ಕದಲ್ಲಿ ಕುಳಿತುಕೊಳ್ಳುತ್ತಿರುವುದು ನಾಚಿಕೆ ತರುವ ಸಂಗತಿಯಾಗಿದೆ. ಕೂಡಲೇ ಸಂಚಾರಿ ಶೌಚಾಲಯದ ವ್ಯವಸ್ಥೆ ಮಾಡಿ ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಯಾಣಿಕರು ಮನವಿ ಮಾಡಿದ್ದಾರೆ.

ಕೇಂದ್ರ ಬಸ್‌ ನಿಲ್ದಾಣ ಬಳಿಯ ತಾತ್ಕಾಲಿಕ ಬಸ್‌ ನಿಲ್ದಾಣದ ಪಕ್ಕದಲ್ಲಿಯೇ ಆಟೋ ನಿಲ್ಲಿಸಲಾಗುತ್ತಿದೆ. ನಿಲ್ದಾಣದೊಳಗೆ ಬಸ್‌ ಬರಬೇಕಾದರೆ ಆಟೋಗಳು ಹೆಚ್ಚಾಗಿ ನಿಂತಿದ್ದರಿಂದ ಕೆಲಹೊತ್ತು ಇಲ್ಲಿ ಸಂಚಾರ ದಟ್ಟಣೆ ಆಗುವುದು ಸಹಜವಾಗಿದೆ. ಸಾರಿಗೆ ಸಂಸ್ಥೆಯವರಿಗೆ ಈ ಅವ್ಯವಸ್ಥೆ ಕಾಣುತ್ತಿಲ್ಲವೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಸ್ಮಾರ್ಟ್‌ ಸಿಟಿ ಬೆಳಗಾವಿಯ ತಾತ್ಕಾಲಿಕ ಸಿಬಿಟಿ ದುಸ್ಥಿತಿ ಹೇಳತೀರದಾಗಿದೆ. ಸುಳೇಭಾವಿ ಮಾರ್ಗದ ಬಸ್‌ಗಳು ನಿಲ್ಲುವ ಜಾಗದಲ್ಲಿ ಕಾಲಿಡಲಾರದಂತಾಗಿದೆ. ಕೂಡಲೇ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಯಾಣಿಕರ ಸಮಸ್ಯೆ ಏನೆಂಬುದು ಅರ್ಥ ಮಾಡಿಕೊಳ್ಳಲಿ.•ಪ್ರಭು ಕವಾಶಿ,ಪ್ರಯಾಣಿಕರು

 

•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.