ಬೆಳಗಾವಿಯ 12 ಜನ ಪತ್ರಕರ್ತರಿಗೆ ಪಾಸಿಟಿವ್
Team Udayavani, May 1, 2021, 7:02 PM IST
ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಳಗಾವಿಯ ಸುಮಾರು 70 ಜನ ಮಾಧ್ಯಮ ಪ್ರತಿನಿಧಿಗಳ ಕೋವಿಡ್ ಪರೀಕ್ಷೆ (ಆರ್.ಟಿ-ಪಿಸಿಆರ್) ಮಾಡಿದಾಗ ಅದರಲ್ಲಿ 12 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಮಾಧ್ಯಮ ವಲಯದಲ್ಲಿ ಆತಂಕ ಸೃಷ್ಟಿಸಿದೆ.
12 ಜನರ ಪೈಕಿ 11 ಜನರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಈ 12 ಜನರಲ್ಲಿ ಪತ್ರಕರ್ತರು ಹಾಗೂ ಕ್ಯಾಮರಾಮೆನ್ಗಳೂ ಇದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರು ಹೋಮ್ ಐಸೋಲೇಷನ್ ಇರಬೇಕಾಗುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಇವರನ್ನು ಸಂಪರ್ಕಿಸಿ ಔಷೋಧಪಚಾರ ಮಾಡುತ್ತಿದ್ದಾರೆ. ವಾರ್ತಾ ಇಲಾಖೆಯ ವಾಚ್ಮನ್ಗೂ ಸೋಂಕು ದೃಢಪಟ್ಟಿದೆ.
ಇದನ್ನೂ ಓದಿ : ಕಾರ್ಗೋ ವಿಮಾನದಲ್ಲಿ ಹೈದರಾಬಾದ್ ಗೆ ಬಂದಿಳಿದ ರಷ್ಯಾದ ಸ್ಫುಟ್ನಿಕ-v ಲಸಿಕೆ
ಈಗಾಗಲೇ ಈ ವಿಷಯವನ್ನು ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಚಿಕಿತ್ಸೆಗೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲದವರಿಗೆ ಖಾಸಗಿ ಹೋಟೆಲ್ನಲ್ಲಿ ಐಸೋಲೇಷನ್ಗೆ ವ್ಯವಸ್ಥೆ ಕಲ್ಪಿಸಲು ಪಬ್ಲಿಕ್ ಟಿವಿಯ ವರದಿಗಾರ ದಿಲೀಪ್ ಕುರಂದವಾಡೆ ಮುಂದಾಗಿದ್ದಾರೆ. ಕೆಲವರು ಮನೆಯಲ್ಲಿಯೇ ಇದ್ದುಕೊಂಡು ಔಷಧೋಪಚಾರ ಪಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆಗಳಿಗೆ ತೆರಳಿ ಔಷಧ ಸಾಮಗ್ರಿಗಳನ್ನು ನೀಡಲಿದ್ದಾರೆ.
ಸಮಾಜದ ಹಿತರಕ್ಷಣೆಗೆ ಹಗಲಿರುಳು ದುಡಿಯುವ, ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಮುನ್ನುಗ್ಗುವ ಮಾಧ್ಯಮ ಸ್ನೇಹಿತರು ಈಗ ಸೋಂಕಿಗೆ ತುತ್ತಾಗಿರುವುದು ಎಲ್ಲರಿಗೂ ಬೇಸರದ ಸಂಗತಿಯಾಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವೆಲ್ಲರೂ ಅವರ ನೆರವಿಗೆ ನಿಲ್ಲೋಣ. ಎಲ್ಲರ ಕುಟುಂಬದ ಪರಿಸ್ಥಿತಿ ಒಂದೇ ತೆರನಾಗಿರುವುದಿಲ್ಳ. ಅನೇಕ ಜನರು ತಮ್ಮ ನೋವು ನುಂಗಿಕೊಂಡು ನಗುತ್ತಿರುತ್ತಾರೆ. ಅಂಥವರಿಗೆ ನಿಮ್ಮ ಜತೆ ನಾವಿದ್ದೇವೆ ಎಂದು ಭರವಸೆ ಮೂಡಿಸಿ ಅವರಿಗೆ ಸೂಕ್ತ ಔಷಧೋಪಚಾರ ಒದಗಿಸಿ ಅವರ ಆತ್ಮಸ್ಥೈರ್ಯವನ್ನು ಹೆಚ್ವಿಸೋಣ ಎಂದು ಗುರುನಾಥ ಕಡಬೂರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ