ಬೆಳಗಾವಿ: ಉಪಸಮರದ ಮತಎಣಿಕೆಗೆ ಸರ್ವ ಸಿದ್ದತೆ


Team Udayavani, Dec 8, 2019, 1:20 PM IST

belgavi

ಬೆಳಗಾವಿ: ಜಿಲ್ಲೆಯ ಮೂರು ಮತ ಕ್ಷೇತ್ರಗಳ ಮತ ಎಣಿಕೆ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ನಾಳೆ ಸೋಮವಾರ ನಡೆಯಲಿದ್ದು, ಭದ್ರತೆ ಸೇರಿದಂತೆ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ಮತ ಎಣಿಕೆ ಸಿದ್ಧತೆ ಕುರಿತು ಭಾನುವಾರ ಮತ ಎಣಿಕೆ ಕೇಂದ್ರದ ಆವರಣದ ಮಾಧ್ಯಮ ಕೇಂದ್ರದಲ್ಲಿ ನಡೆದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭದ್ರತೆ, ಪಾರ್ಕಿಂಗ್, ಮತ ಎಣಿಕೆ ಸಿಬ್ಬಂದಿ ಗುರುತಿನಚೀಟಿ, ಅಂತರ್ಜಾಲ ಸಂಪರ್ಕ, ಅಗತ್ಯ ಉಪಕರಣಗಳನ್ನು ಒದಗಿಸುವಿಕೆ, ಅಂಚೆ ಮತ ಎಣಿಕೆ, ಚುನಾವಣಾ ವೀಕ್ಷಕರ ಕೊಠಡಿ, ಮಾಹಿತಿ ಕೇಂದ್ರ ವ್ಯವಸ್ಥೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಸಾರ್ವಜನಿಕರಿಗೆ ಮತ ಎಣಿಕೆ ಮಾಹಿತಿಯನ್ನು ನೀಡಲು ಆರ್.ಪಿ.ಡಿ. ಮುಖ್ಯದ್ವಾರ ಅಥವಾ ಕ್ರಾಸ್ ಹಾಗೂ ಪಾರ್ಕಿಂಗ್ ಸ್ಥಳದಲ್ಲಿ ಧ್ವನಿವರ್ಧಕ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಪ್ರತಿ ಮತಕ್ಷೇತ್ರದ ಮತ ಎಣಿಕೆಗೆ 14 ಟೇಬಲ್ ವ್ಯವಸ್ಥೆ ಮಾಡಲಾಗಿರುತ್ತದೆ. ಆಯಾ ಮತಕ್ಷೇತ್ರಗಳ ಮತಗಟ್ಟೆ ಸಂಖ್ಯೆ ಆಧಾರದಲ್ಲಿ ಗರಿಷ್ಠ 21 ಸುತ್ತಿನಲ್ಲಿ ಮತ ಎಣಿಕೆ ಪೂರ್ಣಗೊಳ್ಳಲಿದೆ. ಚುನಾವಣಾ ಆಯೋಗದ ಅನುಮತಿಯ ನಂತರವೇ ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಡಾ.ಬೊಮ್ಮನಹಳ್ಳಿ ಅವರು ಹೇಳಿದರು.

8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಈ ಬಗ್ಗೆ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದ್ದು, ಅವರು ಕೂಡ ಏಜೆಂಟರನ್ನು ನಿಯೋಜಿಸಿರುತ್ತಾರೆ. ಮತ ಎಣಿಕೆ ಕುರಿತು ಚುನಾವಣಾಧಿಕಾರಿ ನೀಡುವ ವಿವರವನ್ನು ಆಯಾ ಕ್ಷೇತ್ರದ ಸಾಮಾನ್ಯ ವೀಕ್ಷಕರು ದೃಢೀಕರಿಸಿದ ಬಳಿಕ ಪ್ರತಿ ಸುತ್ತಿನ ಎಣಿಕೆ ವಿವರವನ್ನು ಪ್ರಕಟಿಸಲಾಗುತ್ತದೆ ಎಂದರು.

ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಯಾರೂ ಮೊಬೈಲ್ ಫೋನ್ ಗಳನ್ನು ತರಬಾರದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಾಧ್ಯಮದವರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಲಾಗಿದ್ದು, ಅವರು ಮಾಧ್ಯಮ ಕೇಂದ್ರಗಳಲ್ಲಿ ಮಾತ್ರ ಮೊಬೈಲ್ ಬಳಸಲು ಅವಕಾಶವಿದೆ. ಯಾವುದೇ ಕಾರಣಕ್ಕೂ ಮತ ಎಣಿಕೆ ಕೊಠಡಿಗಳಿಗೆ ಮೊಬೈಲ್ ಫೋನ್ ಕೊಂಡೊಯ್ಯಲು ಅವಕಾಶವಿಲ್ಲ ಎಂದು ಡಾ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದರು.

ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ಮಾತನಾಡಿ ಮತ ಎಣಿಕೆ ಕೇಂದ್ರಕ್ಕೆ ಮೂರು ಹಂತದ ಭದ್ರತೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಅಧಿಕಾರಿಗಳು ಸೇರಿದಂತೆ ಒಟ್ಟಾರೆ 750 ಜನರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಬೆಳಗಾವಿ ತಾಲ್ಲೂಕಿನಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ. ಒಟ್ಟಾರೆ ಶಾಂತಿಯುತ ಮತ ಎಣಿಕೆಗೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಸಿಪಿ ಸೀಮಾ ಲಾಟ್ಕರ್, ಯಶೋಧಾ ಒಂಟಗೋಡಿ, ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಗೋಕಾಕ ಮತಕ್ಷೇತ್ರದ ಚುನಾವಣಾಧಿಕಾರಿ ಭೂಬಾಲನ್, ಅಥಣಿ ಮತಕ್ಷೇತ್ರದ ಜಿಲಾನಿ ಮೊಖಾಶಿ, ಕಾಗವಾಡ ಚುನಾವಣಾಧಿಕಾರಿ ಗೋಪಾಲಕೃಷ್ಣ ಸಣ್ಣತಂಗಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.