ಚುನಾವಣೆ ಯಶಸ್ಸಿಗೆ ಸಕಲ ಸಿದ್ಧತೆ
Team Udayavani, Apr 23, 2019, 12:55 PM IST
ಬೈಲಹೊಂಗಲ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಹಾಜರಾದ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸೋಮವಾರ ತರಬೇತಿ ನೀಡಿ ಮತಗಟ್ಟೆಗಳಿಗೆ ಬೀಳ್ಕೊಡಲಾಯಿತು.
ಪಟ್ಟಣದ ಧಾರವಾಡ ಬೈಪಾಸ್ ರಸ್ತೆಯಲ್ಲಿರುವ ನೀಲಕಂಠೇಶ್ವರ ವಿದ್ಯಾವರ್ಧಕ ಸಂಸ್ಥೆಯ ಐಟಿಐ ಕಾಲೇಜು ಆವರಣದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಚುನಾವಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪವಿಭಾಗಾಧಿಕಾರಿ ಎಂ.ಪಿ. ಮಾರುತಿ ನೇತೃತ್ವದಲ್ಲಿ ತರಬೇತಿ ನೀಡಲಾಯಿತು.
ನಂತರ ಉಪವಿಭಾಗಾಧಿಕಾರಿ ಎಂ.ಪಿ. ಮಾರುತಿ ಮಾತನಾಡಿ, ಬೈಲಹೊಂಗಲ ಮತಕ್ಷೇತ್ರದಲ್ಲಿ 224 ಮತಗಟ್ಟೆಗಳಿದ್ದು, 19 ಸೂಕ್ಷ್ಮ, 5 ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. 1 ಡಿವೈಎಸ್ಪಿ, 3 ಸಿಪಿಐ, 6 ಪಿಎಸ್ಐ, 376 ಪೊಲೀಸ್ ಸಿಬ್ಬಂದಿ, ಅರೇಸೇನಾ ಪಡೆ, 1ಕೆಎಸ್ಆರ್ಪಿ, 102 ಗೃಹ ರಕ್ಷಕ, 73 ಜನ ವೀಕ್ಷಕರು, 1012 ಮತದಾನ ಸಿಬ್ಬಂದಿ 244 ಸಹಾಯಕರು, 20 ವಿಡಿಯೋಗ್ರಾಫರ್, 24 ಕೆಎಸ್ಆರ್ಟಿಸಿ ಬಸ್, 4 ಮಿನಿ ಬಸ್, 12 ಟ್ರ್ಯಾಕ್ಸ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿಗೆ ಊಟ, ಉಪಹಾರ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಮಾಡಲಾಗಿದೆ. ಒಟ್ಟಾರೆ ಚುನಾವಣೆ ಯಶಸ್ವಿಗೊಳಿಸಲು ತಾಲೂಕಾಡಳಿತದಿಂದ ಎಲ್ಲ ಸಿದ್ಧತೆಗಳನ್ನು ಮಾಡಿರುವುದಾಗಿ ಉದಯವಾಣಿಗೆ ತಿಳಿಸಿದರು.
ತಹಶೀಲ್ದಾರ್ ಡಾ| ದೊಡ್ಡಪ್ಪ ಹೂಗಾರ, ತಾಪಂ ಇಒ ಸಮೀರ್ ಮುಲ್ಲಾ, ತಾಪಂ ಸಹಾಯಕ ನಿರ್ದೇಶಕ ಸುಭಾಷ ಸಂಪಗಾಂವಿ, ಸಮಾಜ ಕಲ್ಯಾಣಾಧಿಕಾರಿ ಎಂ.ಜಿ.ಉಣ್ಣಿ, ಪುರಸಭೆ ಮುಖ್ಯಾಧಿಕಾರಿ ಶಿವಪ್ಪ ಅಂಬಿಗೇರ, ಬಿಇಒ ಪಾರ್ವತಿ ವಸ್ತ್ರದ, ಅಕ್ಷರ ಶ್ರೀದೇವಿ ನಾಗನೂರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ