Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
ಒಗ್ಗಟ್ಟಿನ ಮಂತ್ರ ಜಪಿಸಿದ ಕಾಂಗ್ರೆಸ್ ನಾಯಕರು
Team Udayavani, Apr 18, 2024, 2:20 PM IST
ಚಿಕ್ಕೋಡಿ: ಹೈವೋಲ್ಟೇಜ್ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗುರುವಾರ ಚುನಾವಣಾಧಿಕಾರಿಗಳಾದ ರಾಹುಲ್ ಶಿಂಧೆ ಅವರಿಗೆ ಅತ್ಯಂತ ಸರಳವಾಗಿ ನಾಮಪತ್ರ ಸಲ್ಲಿಸಿದರು.
ತಂದೆ, ಸಚಿವರಾದ ಸತೀಶ್ ಜಾರಕಿಹೊಳಿಯವರ ಹಾದಿಯಲ್ಲಿ ಸಾಗುತ್ತಿರುವ ಪ್ರಿಯಂಕಾ ಜಾರಕಿಹೊಳಿ ಅವರು ಅವರು ಯಾವುದೇ ಮೆರವಣಿಗೆ, ಆಡಂಬರ ಇಲ್ಲದೇ ಸರಳವಾಗಿಯೇ ನಾಮಪತ್ರ ಸಲ್ಲಿಸುವ ಮೂಲಕ ಸರಳತೆ ಮೆರೆದರು.
ನಾಮಪತ್ರ ಸಲ್ಲಿಸುವಾಗ ಪ್ರಿಯಂಕಾಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ, ದೆಹಲಿಯ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಶಾಸಕರಾದ ಲಕ್ಷ್ಮಣ್ ಸವದಿ, ಗಣೇಶ್ ಹುಕ್ಕೇರಿ, ರಾಜು ಕಾಗೆ, ಮಹೇಂದ್ರ ತಮ್ಮಣ್ಣವರ್, ವಿಶ್ವಾಸ ವೈದ್ಯ, ಆಸೀಫ್ (ರಾಜು) ಸೇಠ್, ಮಹಾಂತೇಶ ಕೌಜಲಗಿ, ಬಾಬಾ ಸಾಹೇವ್ ಪಾಟೀಲ್ ಸಾಥ್ ನೀಡಿದರು.
ಅಲ್ಲದೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿಯುವ ತನಕ ಮಾಜಿ ಸಚಿವರಾದ ವೀರಕುಮಾರ ಪಾಟೀಲ್, ಎ.ಬಿ.ಪಾಟೀಲ್, ಮಾಜಿ ಶಾಸಕರಾದ ಕಾಕಾ ಸಾಹೇಬ್ ಪಾಟೀಲ್, ಶ್ಯಾಮ್ ಘಾಟಗೆ, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಉತ್ತಮ ಪಾಟೀಲ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಉತ್ತಮ ಪಾಟೀಲ್. ಕುರುಬ ಸಮಾಜ ಮುಖಂಡ ಸಿದ್ದಪ್ಪ ಮರ್ಯಾಯಿ ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ: Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ