ಪರಂಪರೆ ಉಳಿಸಿ-ಬೆಳೆಸುತ್ತಿರುವ ಸರ್ಕಾರ

ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವಗುರುವಾಗುತ್ತಿದೆ ಭಾರತ

Team Udayavani, Apr 4, 2022, 4:47 PM IST

18

ಸವದತ್ತಿ: ವಿವಿಧ ಇಲಾಖೆಗಳಿಗೆ 125 ಕೋಟಿ ಅನುದಾನ ಮಂಜೂರಾಗಿದ್ದು, ಕ್ಷೇತ್ರದ ಅಭಿವೃದ್ಧಿ ನಡೆಸಲಾಗುವುದು. ಬಹುದಿನಗಳ ಬೇಡಿಕೆಯಾದ 24×7 ಕುಡಿಯುವ ನೀರು ಯೋಜನೆ ಶೀಘ್ರದಲ್ಲಿ ಆರಂಭಿಸಲಾಗುವುದೆಂದು ವಿಧಾನಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.

ರಾಮಾಪೂರ ಸೈಟಿನಲ್ಲಿರುವ ತಾಲೂಕಾ ಕ್ರೀಡಾಂಗಣದಲ್ಲಿ ಜರುಗಿದ ಯುಗಾದಿ ಸಂಭ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಉದ್ದಗಲಕ್ಕೂ ಧಾರ್ಮಿಕ ಪರಂಪರೆ ಉಳಿಸಿ, ಧರ್ಮವನ್ನು ಬೆಳಸಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಿದೆ. ಸ್ವಾತಂತ್ರ್ಯ ಹೋರಾಟಗಾರರು, ಸಮಾಜ ಸುಧಾಕರರು ಹಾಗೂ ಸಂತ ಮಹಾತ್ಮರ ದಿನಾಚರಣೆಗಳಿಂದ ಅವರ ತತ್ವಾದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ನಡೆದಿದೆ. ಡಾ| ಬಾಬಾಸಾಹೇಬ ಅಂಬೇಡ್ಕರರಿಂದ ರಚಿತ ಭಾರತ ಸಂವಿಧಾನವನ್ನು ಭಾರತೀಯರಾದ ನಾವು ಅಷ್ಟೇ ಅಲ್ಲದೆ ಇಡೀ ಜಗತ್ತೇ ಒಪ್ಪಿಕೊಂಡಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ ವಿಶ್ವ ಗುರುವಾಗಿ ಹೊಮ್ಮಿದೆ. ಭಾರತೀಯ ಕ್ಯಾಲೆಂಡರ್‌ನಂತೆ ಯುಗಾದಿಯಂದು ಹೊಸ ವರ್ಷಾರಂಭ. ಪ್ರಕೃತಿಯಲ್ಲಿ ಬದಲಾವಣೆಯನ್ನು ಹೊಸ ವರ್ಷವಾಗಿ ಆಚರಿಸುವ ಸಂಸ್ಕೃತಿ ನಮ್ಮದು ಎಂದ ಅವರು, ನರೇಗಾದಡಿ 289 ಇದ್ದ ದಿನಗೂಲಿಯನ್ನು 309 ಕ್ಕೆ ಏರಿಕೆ ಮಾಡಿದೆ. ಸಕಾಲಕ್ಕೆ ಮಳೆ ಸುರಿದು ಅನ್ನದಾತ ನಗುಮೊಗದಿಂದರಲು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಆರ್‌ಎಸ್‌ಎಸ್‌ ಉತ್ತರ ಕರ್ನಾಟಕ ಸಹಪ್ರಾಂತ ಸೇವಾ ಪ್ರಮುಖ ಡಾ. ನರಸಿಂಹ ಕುಲಕರ್ಣಿ ಮಾತನಾಡಿ, ಪರಕೀಯರ ಆಕ್ರಮಣದಿಂದ ನಮ್ಮ ದೇಶದ ಸಂಸ್ಕೃತಿ, ಸಂಪತ್ತು ನಾಶವಾಯಿತು. 1835ರಲ್ಲಿ ಲಾರ್ಡ ಮೆಕಾಲೆ ನಮ್ಮ ಸಂಸ್ಕೃತಿಯನ್ನೇ ತಿರುಚಿ, ಹಬ್ಬವನ್ನು ಮೂಢ ನಂಬಿಕೆ ಎಂದು ಬಿಂಬಿಸಿದನು.

ಅಂದಿನ ಬುದ್ದಿ ಜೀವಿಗಳು ಬ್ರಿಟಿಷರ ಹೇಳಿಕೆ ಒಪ್ಪಿ, ಸ್ವಾತಂತ್ರ್ಯಾ ನಂತರದ ಕಾಂಗ್ರೆಸ್ಸಿಗರು ಅದನ್ನೇ ಅನುಸರಿಸಿದರು. ಜ.1 ರಂದು ಹೊಸ ವರ್ಷಾಚರಣೆ ಮಾಡುವ ಬದಲು ಸಂಸ್ಕೃತಿ ಉಳಿಸುವ ಕಾರ್ಯಕ್ಕೆ ಸ್ವಯಂಪ್ರೇರಿತರಾಗಿ ಇಂದಿನ ಪೀಳಿಗೆ ಮುಂದೆ ಬರಬೇಕಿದೆ. ನಮ್ಮ ಆಚರಣೆಗೆ ವೈಜ್ಞಾನಿಕ ಕಾರಣಗಳಿವೆ ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರಿಗಳು ಆಧುನಿಕ ಬದಲಾವಣೆಗಳಿಂದ ಹಳೆ ಸಂಸ್ಕೃತಿಗೆ ಕುಂದು ಬಂದಿದೆ ಎಂದರು.

ಯುಗಾದಿ ಸಂಭ್ರಮದಲ್ಲಿ ನಡೆದ ಮನರಂಜನೆಗಳು ಜನರನ್ನು ರಂಜಿಸಿದವು. ಈ ವೇಳೆ ಸ್ವಾದಿಮಠದ ಶಿವಬಸವ ಶ್ರೀ, ಕಲ್ಮಠದ ಶಿವಲಿಂಗ ಶ್ರೀ, ಮುನವಳ್ಳಿ ಮುರಘೇಂದ್ರ ಶ್ರೀ, ಬೈಲಹೊಂಗಲ ಆರಾದ್ರಿಮಠದ ಮಹಾಂತಯ್ಯ ಶಾಸ್ತ್ರಿಗಳು ಸೇರಿ ಪ್ರಮುಖ ಶ್ರೀಗಳು ಇದ್ದರು. ತಾಪಂ ಇಓ ಯಶವಂತಕುಮಾರ, ತಹಶೀಲ್ದಾರ್‌ ಪ್ರಶಾಂತ ಪಾಟೀಲ, ಶಿವಾನಂದ ಹೂಗಾರ, ಲಕ್ಷ್ಮಣರಾವ ಕುಲಕರ್ಣಿ, ಜಿ.ಎಸ್‌. ಶಿಂತ್ರಿ ಇದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.