ಕೇಂದ್ರದ ವಿರುದ್ಧ ಎಐಟಿಯುಸಿ ಪ್ರತಿಭಟನೆ
ಕೋವಿಡ್ ಸಂಕಷ್ಟದ ನೆಪದಲ್ಲಿ ರೈತ-ಕಾರ್ಮಿಕ ಕಾನೂನುಗಳ ತಿದ್ದುಪಡಿ ಜನವಿರೋಧಿ ನೀತಿ: ಆರೋಪ
Team Udayavani, Nov 27, 2020, 4:31 PM IST
ಬೆಳಗಾವಿ: ಕೇಂದ್ರದ ರೈತ ವಿರೋಧಿ ಹಾಗೂ ಜನ ವಿರೋಧಿ ನೀತಿ ವಿರುದ್ಧ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗುರುವಾರ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರು ಪ್ರತಿಭಟನೆ ನಡೆಸಿ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ 10,000 ಹಾಗೂ ಸಹಾಯಕರಿಗೆ 5 ಸಾವಿರ ಪಿಂಚಣಿ ನೀಡಬೇಕು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಬೇಕು. ಕೇಂದ್ರ ಸರ್ಕಾರ 7ನೇ ವೇತನ ಆಯೋಗದಲ್ಲಿರುವ 21 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋ ಧಿ ನೀತಿ, ಕೆಲಸದ ಅವಧಿ ಹೆಚ್ಚಳ ಹಾಗೂ ಕಾರ್ಮಿಕ ಕಾನೂನುಗಳ ಜಾರಿಯಿಂದ ಮಾಲೀಕರಿಗೆ ವಿನಾಯಿತಿ ನೀಡಲು ತರಲು ಉದ್ದೇಶಿಸಿರುವ ಸುಗ್ರೀವಾಜ್ಞೆಗೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು.
ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳಾದ ಇಎಸ್ಐ, ಭವಿಷ್ಯ ನಿಧಿ , ಗ್ರ್ಯಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್ಕೆಜಿ ಹಾಗೂ ಯುಕೆಜಿ ಪ್ರಾರಂಭಿಸಲು ಸರ್ಕಾರ ಆದೇಶ ಹೊರಡಿಸಬೇಕು. ಬೆಳಗಾವಿ ಗ್ರಾಮೀಣ ಪ್ರದೇಶದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಜುಲೈ 2019ರ ಗೌರವ ಧನ ವಿತರಿಸಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ:ಏಕದಿನದ ಯಶಸ್ವಿ ಚೇಸಿಂಗ್ ದಾಖಲೆ: ಅಂತಿಮ ಓವರ್ನಲ್ಲಿ ಅತ್ಯಧಿಕ ರನ್ ಚೇಸ್
ಕಾರ್ಮಿಕ ವಿರೋಧಿ ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಶಿಕ್ಷಣ ಮತ್ತು ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸಬಾರದು. ಗ್ರಾಮ ಪಂಚಾಯಿತಿ ನೌಕರರ ವಾರ್ಷಿಕ 382 ಕೋಟಿ ರೂ. ಬಾಕಿ ಬಿಡುಗಡೆ ಮಾಡಬೇಕು. 21 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಎಲ್ಲರಿಗೂ ಪಿಂಚಣಿ ನೀಡಬೇಕು. ಪಂಚಾಯತ್ ರಾಜ್ ಸಂಸ್ಥೆಗಳಿಗೆ ಅನುದಾನ ಕಡಿತಗೊಳಿಸಬಾರದು. ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಕೇಂದ್ರ ಸರ್ಕಾರ ಕಡಿತ ಮಾಡಿರುವ ಹಣ ವಾಪಸ್ ಕೊಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಮುಖಂಡ ಜಿ.ವಿ. ಕುಲಕರ್ಣಿ ಮಾತನಾಡಿ, ಸರ್ಕಾರ ಕೋವಿಡ್ ಸಂಕಷ್ಟದ ನೆಪ ಮಾಡಿಕೊಂಡು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಹೊರಟಿದೆ. ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಲು ಮುಂದಾಗಿದೆ. ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಬರುತ್ತಿಲ್ಲ. ಮೋದಿ ಸರ್ಕಾರ ಕಾರ್ಮಿಕ, ರೈತ ಮತ್ತು ಜನಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದ್ದು, ಕೂಡಲೇ ಇಂತಹ ನೀತಿಯಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಮುಖಂಡ ನಾಗೇಶ ಸಾತೇರಿ ಮಾತನಾಡಿದರು. ಮುಖಂಡರಾದ ವೈ.ಬಿ. ಶೀಗಿಹಳ್ಳಿ, ಮೀನಾಕ್ಷಿ ಕೊಟಗಿ, ಸುಜಾತಾ ಬೆಳಗಾವಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ