ಅವಹೇಳನಕಾರಿ ಹೇಳಿಕೆ: ಶಾಸಕ ಅರಗ ಜ್ಞಾನೇಂದ್ರ ವಿರುದ್ದ ದಲಿತರ, ಕಾಂಗ್ರೆಸ್ಸಿಗರ ಪ್ರತಿಭಟನೆ
ಶಾಸಕ ಅರಗ ಜ್ಞಾನೇಂದ್ರ ಭಾವಚಿತ್ರಕ್ಕೆ ಬೆಂಕಿ
Team Udayavani, Aug 3, 2023, 2:38 PM IST
ಸಂಕೇಶ್ವರ: ಎಐಸಿಸಿ ಅಧ್ಯಕ್ಷ ಹಾಗೂ ಸಂಸತ್ನ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಈಶ್ಬರ ಖಂಡ್ರೆ ಅವರ ಚರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಅರಗ ಜ್ಞಾನೇಂದ್ರ ವಿರುದ್ದ ದಲಿತ ಸಂಘಟನೆ ಮತ್ತು ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಪಟ್ಟಣದಲ್ಲಿ ಆ.3ರ ಗುರುವಾರ ಪ್ರತಿಭಟನೆ ನಡೆಸುವ ಮೂಲಕ ಜ್ಞಾನೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ವಿ ಆಕ್ರೋಶ ವ್ಯಕ್ತಪಡಿಸಿದರು.
ಗುರುವಾರ ಮುಂಜಾನೆ ನಗರದ ಶಿವಾಜಿ ವೃತ್ತದಲ್ಲಿ ಜಮಾವಣೆಗೊಂಡ ದಲಿತ ಸಂಘಟನೆ ಪದಾಧಿಕಾರಿಗಳು ಮತ್ತು ಕೆಲ ಕಾಂಗ್ರೆಸ್ ಪದಾಧಿಕಾರಿಗಳು ಸಂಕೇಶ್ವರ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸಂತೋಷ ಮುಡಸಿ ಅವರ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರಲ್ಲದೆ ಶಾಸಕ ಅರಗ ಜ್ಞಾನೇಂದ್ರ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಈ ಸಂದರ್ಭದಲ್ಲಿ ದಿಲೀಪ ಹೊಸಮನಿ, ಅವಿನಾಶ ನಲವಡೆ, ಮಹೇಶ ಹಟ್ಟಿಹೊಳಿ, ಬಸವರಾಜ ಕೋಳಿ, ಚಿದಾನಂದ ಕರ್ದನ್ನವರ, ವಿನಾಯಕ ಕೋಳಿ, ಕುಮಾರ ಕಬ್ಬೂರಿ, ಮುಭಾರಕ್ ಕಮತೆ, ರಿಯಾಜ್ ಫನಿಬಂಧ, ಪ್ರವೀಣ ನೇಸರಿ, ಮಹಾದೇವ ಕೇಸರಕರ್, ಸುಭಾಶ ಕಾಸಾರ, ಗಣೇಶ ಪಾಟೀಲ, ಶಾಂತು, ರಾಹುಲ್ ಜಯಕರ್, ಶಂಕರ ಭೋಸಲೆ ಸೇರಿದಂತೆ ಅನೇಕರು ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ