HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ
Team Udayavani, Apr 15, 2024, 11:10 PM IST
ಬೆಳಗಾವಿ: ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎನ್ನುತ್ತಿರುವ ಕುಮಾರಸ್ವಾಮಿ ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆಗೆ ಕರೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಹೆಣ್ಣು ಮಕ್ಕಳು ದಡ್ಡರಾ? ಎಲ್ಲ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ ಇದು. ನಿಮ್ಮ ಬದುಕಿನಲ್ಲಿ ನಿಮ್ಮ ಬದಲಾವಣೆಗೆ ಶಕ್ತಿ ಕೊಡಲು ಪಂಚ ಗ್ಯಾರಂಟಿ ನೀಡಿದ್ದೇವೆ. ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸಿ ಎಲ್ಲ ಮಹಿಳೆ ಯರು ಪಕ್ಷಭೇದ ಮರೆತು ಪ್ರತಿಭಟನೆ ನಡೆಸಲು ಕರೆ ನೀಡುತ್ತೇನೆ. ಎಲ್ಲ ಮಹಿಳಾ ಸಂಘಟನೆಗಳು ಪ್ರತಿ ತಾಲೂಕಿನಲ್ಲಿ ಹೋರಾಟ ಮಾಡಬೇಕು ಎಂದರು.
ಸಮಾನತೆ ಇದ್ದವರ ಬಗ್ಗೆ ಮಾತ್ರ ಮಾತನಾಡುವೆ: ಜಾರಕಿಹೊಳಿಗೆ ಟಾಂಗ್
ಚುನಾವಣೆ ಬಳಿಕ ಡಬಲ್ ಎಂಜಿನ್ ಸರಕಾರ ರಚನೆ ಮಾಡುತ್ತೇವೆ ಎಂದ ರಮೇಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನ ಲೆವೆಲ್ಗೆ ಯಾರಾದರೂ ಮಾತನಾಡಿದರೆ ಮಾತನಾಡುತ್ತೇನೆ. ನಮಗೆ ಹೊಂದಾಣಿಕೆ ಆಗದವರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ