ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Dec 4, 2019, 4:58 PM IST
ಬೆಳಗಾವಿ: ತಾಲೂಕಿನ ಅರಳಿಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂಲಿಕಟ್ಟಿ ಜನತಾ ಕಾಲೋನಿಗೆ ಮೂಲ ಸೌಲಭ್ಯ ಕಲ್ಪಿಸಬೇಕುಎಂದು ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಗ್ರಾಮದ ಬಡವರಿಗೆ ಸರ್ಕಾರ ಮಂಜೂರು ಮಾಡಿದ ಆಶ್ರಯ ಮನೆಗಳಲ್ಲಿ ಸುಮಾರು 25ವರ್ಷಗಳಿಂದ 40 ಕುಟುಂಬಗಳು ಬದುಕು ಸಾಗಿಸುತ್ತಿವೆ. ಗ್ರಾಮದಿಂದ ಜನತಾ ಕಾಲೋನಿ 3 ಕಿಮೀ ಅಂತರದಲ್ಲಿದೆ. ಈ ಕುಟುಂಬಗಳು ಕುಡಿಯುವ ನೀರು, ರಸ್ತೆ, ವಿದ್ಯುತ್ ಇಲ್ಲದೇ ನಿತ್ಯ ಸಮಸ್ಯೆ ಅನುಭವಿಸುತ್ತಿವೆ ಎಂದು ದೂರಿದರು.
ಜನತಾ ಕಾಲೋನಿ ಭಾಗದಲ್ಲಿ ನಿರಂತರ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಕಲ್ಲುಗಳನ್ನು ಬ್ಲಾಸ್ಟ್ ಮಾಡುವುದರಿಂ ಮನೆ ಗೋಡೆಗಳು ಬಿರುಕು ಬಿಡುತ್ತಿವೆ.ಕೆಲ ಮನೆಗಳಂತೂ ಬೀಳುವ ಸ್ಥಿತಿಯಲ್ಲಿವೆ.
ಹೀಗಾಗಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕಲ್ಲು ಗಣಿಗಾರಿಕೆ ಬಂದ್ ಮಾಡಿ ಗಣಿಗಾರಿಕೆ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಜತನಾ ಕಾಲೋನಿಗೆ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅವರ ಗಮನಕ್ಕೆ ತರಲಾಗಿತ್ತು. ಆದರೆ ಇದು ಇನ್ನೂವರೆಗೆ ಸಮಸ್ಯೆಯಾಗಿಯೇ ಉಳಿದಿದೆ. ಇನ್ನೂವರೆಗೆ ರಸ್ತೆ ದುರಸ್ತಿ ಮಾಡಿಲ್ಲ. ಸರ್ಕಾರದಿಂದ ಬಂದ ಹಣ ಎಲ್ಲಿಗೆ ಹೋಯಿತು ಎಂದು ಗ್ರಾಮಸ್ಥರು ಪ್ರಶ್ನಿಸಿದರು.
ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ಛಾವಣಿ ಬಿರುಕು ಬಿಟ್ಟಿದೆ. ಇಲ್ಲಿಯ ಮಕ್ಕಳು ಜೀವ ಕೈಯಲ್ಲಿ ಹಿಡಿದು ಕಲಿಯುತ್ತಿದ್ದಾರೆ. ಯಾವ ಸಂದರ್ಭದಲ್ಲಾದರೂ ಕಟ್ಟಡ ಕುಸಿದು ಬೀಳುವ ಸ್ಥಿತಿಯಲ್ಲಿದ್ದರಿಂದ ಶಾಲೆಯನ್ನು ಮುಚ್ಚಲಾಗಿದೆ. ಕೂಡಲೇ ಶಾಲೆ ದುರಸ್ತಿಗೊಳಿಸಿ ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮಸ್ಥರಾದ ಸವರಾಜ ಸುಲಕುಂಪಿ, ಮಂಜುನಾಥ ಸಂಕಣ್ಣವರ, ಬಸವರಾಜ ರೊಟ್ಟಿ, ಬಾಳೇಶ ಮಂಗಣ್ಣವರ, ನಿಲವ್ವ ದೊಡ್ಡಗೌಡ್ರ, ರತ್ನವ್ವ ಬೇಟಗೇರಿ, ರುದ್ರಪ್ಪ ಹುಬ್ಬಳ್ಳಿ, ಗಂಗವ್ವ ಅವರೊಳ್ಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ