ಹಲಗಾ-ಮಚ್ಛೆ ಬೈಪಾಸ್ ರಸ್ತೆಗೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ!
Team Udayavani, Nov 11, 2021, 12:41 PM IST
ಬೆಳಗಾವಿ: ಹಲಗಾ ಮಚ್ಛೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ರೈತರ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಬೆಳಿಗ್ಗೆ ಬೈಪಾಸ್ ಬಳಿ ನಡೆದಿದೆ.
ಆಕಾಶ ಅನಗೋಳಕರ ಎಂಬ ರೈತ ಬೆಂಕಿ ಹಚ್ಚಿಕೊಂಡಿದ್ದು, ಕೂಡಲೇ ಸ್ಥಳದಲ್ಲಿದ್ದ ರೈತರು ತಡೆದಿದ್ದಾರೆ. ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತರು ಹಾಗೂ ರೈತ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ:ಬಿಟ್ ಕಾಯಿನ್; ಆರೋಪ ಬಿಟ್ಟು ಕಾಂಗ್ರೆಸ್ ನಾಯಕರು ದಾಖಲೆ ಬಿಡುಗಡೆ ಮಾಡಲಿ: ಶೆಟ್ಟರ್ ಸವಾಲು
ಪೊಲೀಸರು ಧರಣಿ ನಿರತ ರೈತರನ್ನು ಹಾಗೂ ಮಹಿಳೆಯರನ್ನು ವಶಕ್ಕೆ ಪಡೆಯುವ ವೇಳೆ ಎಳೆದಾಡಿದ್ದಾರೆ. ಸೀರೆ ಹರಿದಿದ್ದಾರೆ ಎಂದು ಮಹಿಳೆಯರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ