ಗೋಕಾಕ್ ತಹಶೀಲ್ದಾರ ಕಚೇರಿಗೆ ಎಮ್ಮೆ-ಎತ್ತು ನುಗ್ಗಿಸಿ ನೆರೆ ಸಂತ್ರಸ್ತರ ಆಕ್ರೋಶ
Team Udayavani, Jun 16, 2020, 3:10 PM IST
ಬೆಳಗಾವಿ/ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕ್ಷೇತ್ರದಲ್ಲಿ ಪರಿಹಾರಕ್ಕೆ ಆಗ್ರಹಿಸಿ ನೆರೆ ಸಂತ್ರಸ್ತರು ಬೀದಿಗಿಳಿದು ತಹಶೀಲ್ದಾರ ಕಚೇರಿ ಆವರಣದಲ್ಲಿ ಮಂಗಳವಾರ ದನ-ಕರು, ಎಮ್ಮೆ-ಎತ್ತುಗಳೊಂದಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಗೋಕಾಕ ತಹಶೀಲ್ದಾರರ ಕಚೇರಿಗೆ ನೆರೆ ಸಂತ್ರಸ್ತರು ಮುತ್ತಿಗೆ ಹಾಕಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆ ಹಾಕಿದರು. ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ನೂರಾರು ನೆರೆ ಸಂತ್ರಸ್ತರು ಬಂದು ದನ, ಎತ್ತು, ಕರುಗಳೊಂದಿಗೆ ಗೋಕಾಕ್ ತಹಶೀಲ್ದಾರ್ ಕಚೇರಿ ಒಳಗೆ ಹೋಗಲು ಯತ್ನಿಸಿದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗೋಕಾಕ ಹಾಗೂ ಮೂಡಲಗಿಯ ನೂರಾರು ನೆರೆ ಸಂತ್ರಸ್ತರು ಜಮಾಯಿಸಿದ್ದರು. ಬೊಬ್ಬೆ ಹೊಡೆದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪುಟ್ಟ ಪುಟ್ಟ ಮಕ್ಕಳನ್ನು ಕರೆದುಕೊಂಡು ಬಂದು ನೆರೆ ಸಂತ್ರಸ್ತರು ಪ್ರತಿಭಟನೆ ನಡೆಸಿದರು. ನಂತರ ಮಧ್ಯಾಹ್ನ ಅಲ್ಲಿಯೇ ಒಲೆ ಹೊತ್ತಿಸಿ ಅಡುಗೆ ತಯಾರಿಸಿ ಊಟ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ