ಡಿಕೆಶಿ ಬಂಧನ: ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ
Team Udayavani, Sep 4, 2019, 9:39 AM IST
ಬೆಳಗಾವಿ: ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ ಬಂಧನ ಆಗುತ್ತಿದ್ದಂತೆ ರಾಜ್ಯಾದ್ಯಂತ ಅವರ ಬೆಂಬಲಿಗರು ಪ್ರತಿಭಟನೆಗೆ ಮುಂದಾಗಿದ್ದು, ಗಡಿ ಜಿಲ್ಲೆಯ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು ಬುಧವಾರ ಬೆಳಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿ ಮೇಲೆ ಟೈರ್ ಗೆ ಬೆಂಕಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ರಸ್ತೆ ಮೇಲೆ ಚಕ್ಕಡಿ ಇಟ್ಟು ರಸ್ತೆ ಬಂದ್ ಮಾಡಿ, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ಕೆಲ ಹೊತ್ತು ಈ ಮಾರ್ಗದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತ ಆಯಿತು.
ತಾಲೂಕು ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬೆಂಬಲಿಗರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮೀತ್ ಶಾ ದ್ವೇಷದ ರಾಜಕಾರಣ ಮಾಡಿ ಡಿ.ಕೆ. ಶಿವಕುಮಾರ ಅವರನ್ನು ಬಂಧಿಸಲಾಗಿದೆ ಎಂದು ಟೀಕಾ ಪ್ರಹಾರ ನಡೆಸಿದರು.