ಖಾಲಿ ಕೊಡ ಹಿಡಿದು ಪ್ರತಿಭಟನೆ
•ಸಮರ್ಪಕ ಟ್ಯಾಂಕರ್ ನೀರು ಪೂರೈಕೆಗೆ ಗ್ರಾಮಸ್ಥರ ಆಗ್ರಹ •ಅಧಿಕಾರಿಗಳಿಗೆ ಎಚ್ಚರಿಕೆ; ಪ್ರತಿಭಟನೆ ಹಿಂದಕ್ಕೆ
Team Udayavani, May 18, 2019, 12:07 PM IST
ರಾಯಬಾಗ: ಹುಬ್ಬರವಾಡಿ ಗ್ರಾಮ ಪಂಚಾಯ್ತಿ ಮುಂದೆ ಗ್ರಾಮಸ್ಥರು ಕುಡಿಯುವ ನೀರಿಗೆ ಆಗ್ರಹಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ ಮಾಡಿದರು
ರಾಯಬಾಗ : ಕುಡಿಯುವ ನೀರಿಗಾಗಿ ಮಹಿಳೆಯರು ಹಾಗೂ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯ್ತಿ ಎದುರು ಪ್ರತಿಭಟನೆ ಮಾಡಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ ಘಟನೆ ಶುಕ್ರವಾರ ತಾಲೂಕಿನ ಹುಬ್ಬರವಾಡಿ ಗ್ರಾಮದಲ್ಲಿ ನಡೆದಿದೆ.
ಹುಬ್ಬರವಾಡಿ ಗ್ರಾಮಕ್ಕೆ ಕಳೆದ ನಾಲ್ಕು ತಿಂಗಳಿಂದ ತಾಲೂಕಾಡಳಿತದಿಂದ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿದ್ದರೂ ಸಮರ್ಪಕ ನೀರು ಪೂರೈಕೆಯಾಗುತ್ತಿಲ್ಲ. ಮೂರು ನಾಲ್ಕು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮ ಪಂಚಾಯ್ತಿಯ ಮುಂದೆ ಪ್ರತಿಭಟನೆ ಮಾಡಿ ಪಿಡಿಒ ದಶರಥ ಭೋಸಲೆ ಅವರನ್ನು ತರಾಟೆಗೆ ತೆಗೆದುಕೊಂಡರು ಈ ಮಧ್ಯೆ ಪಿಡಿಒ ಮಾತನಾಡಿ, ಗ್ರಾಮಕ್ಕೆ ಸಾಕಾಗುವಷ್ಟು ಸ್ಥಳೀಯವಾಗಿ ನೀರು ಲಭ್ಯವಾಗುತ್ತಿಲ್ಲ ಎನ್ನುವ ಅವರ ಉತ್ತರಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.
ಹುಬ್ಬರವಾಡಿ ಗ್ರಾಮಕ್ಕೆ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ದಿನನಿತ್ಯ ಕುಡಿಯುವ ನೀರು ಪೂರೈಕೆಯಾಗುತ್ತಿತ್ತು ಕಳೆದ ಎರಡು ತಿಂಗಳಿಂದ ಕೃಷ್ಣಾ ನದಿ ಬತ್ತಿ ಹೊಗಿದ್ದರಿಂದ ಇಲ್ಲಿಂದ ಪೂರೈಕೆಯಾಗುವ ಕುಡಿಯುವ ನೀರು ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಗ್ರಾಮಸ್ಥರು ಹಾಗೂ ತೋಟಪಟ್ಟಿಗಳ ಜನ ಹಾಗೂ ಜಾನವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದೆ. ರಾಯಬಾಗ ತಾಲೂಕಾ ಆಡಳಿತದಿಂದ ಟ್ಯಾಂಕರ್ ಮೂಲಕ ಪೂರೈಕೆ ಮಾಡುವ ಕುಡಿಯುವ ನೀರು ಸರಿಯಾಗಿ ವಿತರಣೆಯಾಗುತ್ತಿಲ್ಲ. ಮೂರು ನಾಲ್ಕು ದಿನಗಳಿಗೊಮ್ಮೆ ಪೂರೈಸಿದರೂ ಸಾಕಾಗುವಷ್ಟು ನೀರು ಕೊಡುತ್ತಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.
ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಸರಿಯಾಗಿ ನೀರು ಪೂರೈಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡಲಾಗುವುದೆಂದು ಗ್ರಾಮಸ್ಥರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.
ಈ ಸಂದರ್ಭದಲ್ಲಿ ಧರೆಪ್ಪ ಬಿರನಾಳೆ, ಲಗಮವ್ವಾ ಡಬ್ಬನ್ನವರ, ಪ್ರಕಾಶ ಭಜಂತ್ರಿ, ಸಿದ್ದಪ್ಪ ಕೊಂಕಣಿ, ಕುಮಾರ ಸುತಾರ, ಬೀರಪ್ಪ ಹಿಡಕಲ್ಲ, ನಿಂಗಪ್ಪ ಪಾಟೀಲ, ಶ್ರೀಶೈಲ ಡಬ್ಬನ್ನವರ, ಪಾಂಡುರಂಗ ತಳವಾರ, ಅಮರ ಡಬ್ಬನ್ನವರ, ಪುತಳಾ ಬಡೋದೆ, ಹೀರಾಬಾಯಿ ಕಾಂಬಳೆ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ