ಪ್ರಾದೇಶಿಕ ಆಯುಕ್ತರ ಕಚೇರಿಗಳ ರದ್ಧತಿ ವಿರೋಧಿಸಿ ಶುಕ್ರವಾರ ಪ್ರತಿಭಟನೆ
Team Udayavani, Jul 13, 2021, 3:19 PM IST
ಬೆಳಗಾವಿ: ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ಒಂದೇ ಕಂದಾಯ ಸಚಿವಾಲಯವನ್ನು ಸ್ಥಾಪಿಸುವ ಸಂಬಂಧ ಆಡಳಿತ ಸುಧಾರಣೆ ಆಯೋಗ ಮಾಡಿದ ಶಿಫಾರಸನ್ನು ಅಂಗೀಕರಿಸುವ ಸರಕಾರದ ಚಿಂತನೆಯನ್ನು ವಿರೋಧಿಸಿ ಜುಲೈ 16 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
ಬೆಳಗಾವಿಯಲ್ಲಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಕಾರ್ಯಾಲಯದಲ್ಲಿ ನಡೆದ ಕನ್ನಡ ಹೋರಾಟಗಾರರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಆಯೋಗದ ಶಿಫಾರಸನ್ನು ಅಂಗೀಕರಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು ಪ್ರಾದೇಶಿಕ ಆಯುಕ್ತರ ಕಚೇರಿಗಳು ಬಿಳಿಯಾನೆಗಳಾಗಿವೆ ಎಂಬ ಕಂದಾಯ ಸಚಿವ ಆರ್.ಅಶೋಕ ಅವರ ಹೇಳಿಕೆಯನ್ನು ಸಭೆ ಖಂಡಿಸಿತಲ್ಲದೇ ಬೆಂಗಳೂರಿನ ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿರುವ ಬಿಳಿಯಾನೆಗಳ ಪಟ್ಟಿಯನ್ನು ಸಚಿವರು ಮೊದಲು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿತು.
ಇದನ್ನೂ ಓದಿ:ಶೃಂಗೇರಿ ಬ್ಯೂಟಿಪಾರ್ಲರ್ ಯುವತಿ ಮೇಲೆ ಆ್ಯಸಿಡ್ ದಾಳಿ ಕೇಸ್: 4 ಆರೋಪಿಗಳು ದೋಷಿಯೆಂದು ತೀರ್ಪು
ಈ ಹಿಂದೆ ಅಸ್ತಿತ್ವದಲ್ಲಿದ್ದ ವಿಭಾಗಾಧಿಕಾರಿಗಳ ಕಚೇರಿಗಳನ್ನು ರದ್ದುಗೊಳಿಸಲಾಗಿತ್ತು.ನಂತರ ಉದ್ಭವಿಸಿದ ಸಮಸ್ಯೆಗಳ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ಅಸ್ತಿತ್ವಕ್ಕೆ ತರಲಾಗಿತ್ತು.ಈಗ ಮತ್ತೆ ಇವುಗಳನ್ನು ರದ್ದುಗೊಳಿಸುವ ಚಿಂತನೆ ನಡೆಸಿರುವದು ಜನವಿರೋಧಿ ಕ್ರಮವಾಗಿದೆ ಎಂದು ಹೋರಾಟಗಾರರು ಆಕ್ಷೇಪಿಸಿದರು.
ಪ್ರಾದೇಶಿಕ ಆಯುಕ್ತರಿಗೆ ಭೂಸ್ವಾಧೀನ, ಪುನರ್ವಸತಿ, ಪ್ರವಾಹ, ಬರಗಾಲ ನಿರ್ವಹಣೆ, ಜಿಲ್ಲಾ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರ ಹಾಗೂ ಮಹಾನಗರ ಪಾಲಿಕೆಗಳ ಮೇಯರ್ ಉಪಮೇಯರ ಚುನಾವಣೆ ನಿರ್ವಹಣೆ, ಆಣೆಕಟ್ಟುಗಳಿಂದ ನೀರು ಬಿಡುಗಡೆ, ತಾಲೂಕಾ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ, ಸರಕಾರಿ ಸಿಬ್ಬಂದಿಗೆ ವಸತಿ ಗೃಹಗಳ ಹಂಚಿಕೆ ಹಾಗೂ ಇನ್ನಿತರ ಅಧಿಕಾರಗಳಿವೆ. ಕಚೇರಿಗಳು ರದ್ದಾಗುವದರಿಂದ ಸಾಮಾನ್ಯ ಜನರು ಬೆಂಗಳೂರಿಗೆ ದೌಡಾಯಿಸುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಜನವಿರೋಧಿ ನಿರ್ಧಾರವನ್ನು ರಾಜ್ಯ ಸರಕಾರ ಕೈಕೊಳ್ಳಬಾರದೆಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ