ಚಳಿಗಾಲ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ

65ಕ್ಕೂ ಹೆಚ್ಚು ಸಂಘಟನೆಗಳಿಂದ ಪ್ರತಿಭಟನೆಗೆ ಮನವಿ; ಎರಡು ಕಡೆ ಪ್ರತಿಭಟನೆಗಳಿಗೆ ವ್ಯವಸ್ಥೆ

Team Udayavani, Dec 19, 2022, 8:25 AM IST

2

ಬೆಳಗಾವಿ: ಚುಮು ಚುಮು ಚಳಿಯ ಮಧ್ಯೆ ನಡೆಯಲಿರುವ ವಿಧಾನಮಂಡಲ ಚಳಿಗಾಲ ಅಧಿವೇಶನ ವೇಳೆ ಸರ್ಕಾರವನ್ನು ಕಟ್ಟಿ ಹಾಕಲು ಒಂದೆಡೆ ವಿಪಕ್ಷಗಳು ತೊಡೆ ತಟ್ಟಿ ನಿಂತರೆ, ಇನ್ನೊಂದೆಡೆ ವಿವಿಧ ಸಂಘ-ಸಂಸ್ಥೆಗಳು ಸರ್ಕಾರದ ವಿರುದ್ಧ ಅಖಾಡಕ್ಕಿಳಿದು ಪ್ರತಿಭಟನೆ ನಡೆಸಲು ಸಜ್ಜಾಗಿವೆ.

ಪ್ರತಿವರ್ಷ ಸುವರ್ಣ ವಿಧಾನಸೌಧದದಲ್ಲಿ ನಡೆಯುವ ಚಳಿಗಾಲ ಅಧಿ ವೇಶನ ವೇಳೆ ಅತಿ ಹೆಚ್ಚಿನ ಸಂಖ್ಯೆಯ ಪ್ರತಿಭಟನೆ, ಹೋರಾಟ, ಧರಣಿ ಸತ್ಯಾಗ್ರಹಗಳು ನಡೆಯುವುದು ಸಹಜ. ಅದರಂತೆ ಈ ಸಲವೂ ಡಿ.19ರಿಂದ ನಡೆಯಲಿರುವ ಅಧಿ ವೇಶನ ವೇಳೆ 65ಕ್ಕೂ ಹೆಚ್ಚು ವಿವಿಧ ಸಂಘ-ಸಂಸ್ಥೆಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ರಣತಂತ್ರ ಹೆಣೆಯುತ್ತಿವೆ.

ಸದನದ ಒಳಗೆ ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಟಕ್ಕಿಳಿಯುತ್ತಿದ್ದರೆ, ಇತ್ತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. 10 ದಿನಗಳ ಕಾಲ ನಡೆಯುವ ಅಧಿವೇಶನ ವೇಳೆ ಪ್ರತಿಭಟನೆ ನಡೆಸಲು 65ಕ್ಕೂ ಹೆಚ್ಚು ಪ್ರತಿಭಟನೆಗಾಗಿ ಅನುಮತಿ ನೀಡಲಾಗಿದೆ. ರಾಜ್ಯ ಹಾಗೂ ವಿವಿಧ ಜಿಲ್ಲಾ ಮಟ್ಟದ ಸಂಘ-ಸಂಸ್ಥೆಗಳು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಿವೆ. ನೇರವಾಗಿ ಮನವಿ ನೀಡಲು 9 ಅರ್ಜಿಗಳು ಬಂದಿವೆ.

ಎರಡು ಕಡೆ ಪ್ರತಿಭಟನೆಗೆ ಅವಕಾಶ: ಸುವರ್ಣ ವಿಧಾನಸೌಧ ಸುತ್ತಲೂ ಈಗಾಗಲೇ ಪ್ರತಿಭಟನೆಗಾಗಿಯೇ ಟೆಂಟ್‌ಗಳನ್ನು ಹಾಕಲಾಗಿದೆ. ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಸಂಘ-ಸಂಸ್ಥೆಗಳಿಗೆ ಸಂಖ್ಯೆಯ ಅನುಸಾರವಾಗಿ ಟೆಂಟ್‌ಗಳ ಹಂಚಿಕೆ ಮಾಡಲಾಗಿದೆ. ಪ್ರತಿ ವರ್ಷ ಹಲಗಾದ ಸುವರ್ಣ ಉದ್ಯಾನ ಬಳಿಯ ಕೃಷಿ ಭೂಮಿಯಲ್ಲಿ ಪ್ರತಿಭಟನೆಗೆ ಟೆಂಟ್‌ ಹಾಕಿ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಬೆಳೆ ಬೆಳೆದಿರುವುದರಿಂದ ಈ ಸಲ ಅಲ್ಲಿಯ ರೈತರು ಜಮೀನು ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬಸ್ತವಾಡದಲ್ಲಿರುವ 6 ಎಕರೆ ಜಾಗವನ್ನು ಬಳಸಿಕೊಳ್ಳಲಾಗಿದೆ. ಇಲ್ಲಿ 9 ಸಾವಿರವರೆಗೆ ಪ್ರತಿಭಟನಾಕಾರರು ಸೇರಬಹುದಾಗಿದೆ. ಜತೆಗೆ ಕೊಂಡಸಕೊಪ್ಪ ಗುಡ್ಡದಲ್ಲಿ ಒಂದೂವರೆ ಎಕರೆ ಜಾಗದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇಲ್ಲಿ 5 ಸಾವಿರಕ್ಕೂ ಹೆಚ್ಚು ಜನರಿಗೆ ಅವಕಾಶ ಇದೆ.

ಮಾಡು ಇಲ್ಲವೇ ಮಡಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಯಲಿರುವ ವಿರಾಟ್‌ ಪಂಚಶಕ್ತಿ ಸಮಾವೇಶ ಸರ್ಕಾರದ ಬುಡಕ್ಕೇ ಕೈ ಹಾಕಲಿದೆ. ಲಕ್ಷ ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ನಡೆಸಲು ಪಂಚಮಸಾಲಿ ಸಮಾಜದವರು ನಿರ್ಧರಿಸಿದ್ದಾರೆ. ಪಾದಯಾತ್ರೆ ಮೂಲಕ ಬೆಳಗಾವಿಗೆ ಆಗಮಿಸಿ ಹಕ್ಕೊತ್ತಾಯ ಮಂಡಿಸಲಿದ್ದು, ಮಾಡು ಇಲ್ಲವೇ ಮಡಿ ಎಂಬ ಧ್ಯೇಯವಾಕ್ಯದೊಂದಿಗೆ ಹೋರಾಟ ನಡೆಸಲಿದ್ದಾರೆ.

ವಿವಿಧ ಸಂಘಟನೆಗಳ ಪ್ರತಿಭಟನೆ: ಕಬ್ಬಿಗೆ ಸೂಕ್ತ ಬೆಲೆ ನಿಗದಿಗಾಗಿ ಕಬ್ಬು ಬೆಳೆಗಾರರು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು, ಶುಶ್ರೂಷಾ ಧಿಕಾರಿಗಳು, ಎನ್‌ಪಿಎಸ್‌ ರದ್ದತಿಗಾಗಿ ಸರ್ಕಾರಿ ನೌಕರರು, ಮಾದಿಗ ಸಂಘಟನೆಗಳ ಹೋರಾಟ, ಕ್ಷತ್ರೀಯ ಮರಾಠಾ ಸಂಘ, ಗ್ರಾಪಂ ನೌಕರರು, ಅನುದಾನ ರಹಿತ ಶಾಲಾ, ಕಾಲೇಜುಗಳ ಆಡಳಿತ ಮಂಡಳಿ, ನೇಕಾರರು, ಪೌರ ಸೇವಾ ನೌಕರರು, ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ, ಸಫಾಯಿ ಕರ್ಮಚಾರಿಗಳು, ಉಪ್ಪಾರ ಸಮಾಜದವರು ಸೇರಿದಂತೆ ವಿವಿಧ ಸಂಘಟನೆಗಳ ಹೋರಾಟ ನಡೆಯಲಿದೆ. ಶಕ್ತಿ ಪ್ರದರ್ಶನಕ್ಕಾಗಿ ಮರಾಠಿ ಮೇಳಾವ್‌ ಚಳಿಗಾಲ ಅಧಿವೇಶನದ ಮೊದಲ ದಿನವೇ ಡಿ.19ರಂದು ಎಂಇಎಸ್‌ ವತಿಯಿಂದ ಮರಾಠಿ ಮಹಾ ಮೇಳಾವ್‌ ನಡೆಯಲಿದೆ.

ಶಕ್ತಿ ಪ್ರದರ್ಶನಕ್ಕಾಗಿ ಮರಾಠಿ ಮೇಳಾವ್‌

ಚಳಿಗಾಲ ಅಧಿವೇಶನದ ಮೊದಲ ದಿನವೇ ಡಿ.19ರಂದು ಎಂಇಎಸ್‌ ವತಿಯಿಂದ ಮರಾಠಿ ಮಹಾ ಮೇಳಾವ್‌ ನಡೆಯಲಿದೆ. ಬೆಳಗಾವಿ ಗಡಿ ವಿವಾದವನ್ನು ಮತ್ತೆ ಕೆಣಕುತ್ತಿರುವ ಎಂಇಎಸ್‌ ಪ್ರತಿಭಟನೆಗೆ ಮುಂದಾಗಿದೆ. ನಗರದ ವ್ಯಾಕ್ಸಿನ್‌ ಡಿಪೋ ಮೈದಾನದಲ್ಲಿ ಮಹಾ ಮೇಳಾವ್‌ ನಡೆಯಲಿದ್ದು, ಮರಾಠಿ ಭಾಷಿಕರನ್ನು ಸೇರಿಸಿ ಶಕ್ತಿ ಪ್ರದರ್ಶಿಸಲು ಎಂಇಎಸ್‌ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಎಂಇಎಸ್‌ ನಾಯಕರು ಸುತ್ತಾಡಿ ಮೇಳಾವ್‌ ಬಗ್ಗೆ ಜನಜಾಗೃತಿ ಮೂಡಿಸುತ್ತಿದ್ದಾರೆ. ಮಹಾರಾಷ್ಟ್ರದ ನಾಯಕರನ್ನೂ ಮೇಳಾವ್‌ಕ್ಕೆ ಆಹ್ವಾನಿಸಿದೆ. ಇದುವರೆಗೆ ನಗರ ಪೊಲೀಸ್‌ ಆಯುಕ್ತರು ಮೇಳಾವ್‌ಕ್ಕೆ ಅನುಮತಿ ನೀಡಿಲ್ಲ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಪ್ರತಿಭಟನೆಗಳು ನಡೆಯಲಿವೆ. ಪ್ರತಿಭಟನಾಕಾರರಿಗೆ ಸ್ಥಳ ನಿಗದಿಪಡಿಸಲಾಗಿದೆ. ಎಲ್ಲರಿಗೂ ಶುದ್ಧ ಕುಡಿಯುವ ನೀರು, ಶೌಚಗೃಹ, ವೈದ್ಯಕೀಯ ಸೌಕರ್ಯ ಒದಗಿಸಲಾಗಿದೆ. ಬಸ್ತವಾಡ ಮತ್ತು ಕೊಂಡಸಕೊಪ್ಪ ಗ್ರಾಮಗಳಲ್ಲಿ ಪ್ರತ್ಯೇಕವಾಗಿ 15 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಬಹುದಾಗಿದೆ. ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ.  -ಡಾ|ಎಂ.ಬಿ.ಬೋರಲಿಂಗಯ್ಯ, ಪೊಲೀಸ್‌ ಕಮಿಷನರ್‌

„ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.