ಪರಿಹಾರ ಕಲ್ಪಿಸಿ-ಇಲ್ಲವಾದ್ರೆ ವಿಷ ಕೊಡಿ
Team Udayavani, Oct 23, 2019, 8:59 AM IST
ರಾಮದುರ್ಗ: ತಾಲೂಕಿನಲ್ಲಿ ಸುರಿದ ಮೆಳೆಯಿಂದಾಗಿ ಹಾಗೂ ಮತ್ತೆ ಉಂಟಾದ ಮಲಪ್ರಭಾ ನದಿ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ಪರಿಶೀಲನೆ ಸೇರಿದಂತೆ ತಾಲೂಕಿನ ಸುರೇಬಾನ ಹಾಗೂ ರೇವಡಿಕೊಪ್ಪ ಗ್ರಾಮದಲ್ಲಿ ನಿರಾಶ್ರಿತರಿಗೆ ತೆರೆಯಲಾದ ಕಾಳಜಿ ಕೇಂದ್ರಗಳಿಗೆ ಮಂಗಳವಾರ ಶಾಸಕ ಮಹದೇವಪ್ಪ ಯಾದವಾಡ ಭೇಟಿ ನೀಡಿ ಸಂತ್ರಸ್ತರ ಕುಂದು ಕೊರತೆಗಳನ್ನು ವಿಚಾರಿಸಿದರು.
ಸುರೇಬಾನ ಎಪಿಎಂಸಿ ಆವರಣದಲ್ಲಿ ಹಂಪಿಹೋಳಿ ಗ್ರಾಮದ ಸಂತ್ರಸ್ಥರಿಗೆ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಶಾಸಕರು ಭೇಟಿ ನೀಡುತ್ತಿದ್ದಂತೆ ಅಲ್ಲಿನ ಸಂತ್ರಸ್ತರು ಮೂರು ತಿಂಗಳಲ್ಲಿ ಮೂರು ಬಾರಿ ಪ್ರವಾಹ ಉಂಟಾಗಿ ಚಿಕ್ಕ ಮಕ್ಕಳು, ವಯೋವೃದ್ಧರೊಂದಿಗೆ ಬೀದಿಯಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ. ಹೀಗಾದರೆ ನಮ್ಮ ಬದುಕು ಕಟ್ಟಿಕೊಳ್ಳುವುದು ಹೇಗೆ? ನಮಗೆ ಶೀಘ್ರ ಪರಿಹಾರ ಕಲ್ಪಿಸಿ, ಇಲ್ಲವಾದಲ್ಲಿ ವಿಷ ಕೊಡಿ ಎಂದು ಸಂತ್ರಸ್ತರು ಶಾಸಕ ಮಹದೇವಪ್ಪ ಯಾದವಾಡ ಎದುರು ತಮ್ಮ ಅಳಲು ತೊಡಿಕೊಂಡರು.
ಶಾಸಕ ಮಹದೇವಪ್ಪ ಯಾದವಾಡ ಮಾತನಾಡಿ, ಪ್ರವಾಹಕ್ಕೆ ತುತ್ತಾದ ಪ್ರದೇಶಗಳ ಜನತೆಗೆ ನೆರವಾಗಲು ಸರ್ಕಾರ ಸ್ಪಂದಿಸಿದೆ. ಸಂತ್ರಸ್ತರ ಬೆನ್ನಿಗೆ ರಾಜ್ಯ ಸರಕಾರವಿದೆ. ನಿರಾಶ್ರಿತರು ಭಯಪಡುವುದು ಬೇಡ ಎಂದರು. ಈ ವೇಳೆ ಜಿಪಂ ಸದಸ್ಯ ರೇಣಪ್ಪ ಸೋಮಗೊಂಡ,ದ್ಯಾವಪ್ಪ ಬೆಳವಡಿ, ಶಿವಪ್ಪ ಮೇಟಿ, ಸುರೇಬಾನ ಗ್ರಾಪಂ ಅಧ್ಯಕ್ಷ ಮಹಾದೇವಪ್ಪ ಮದಕಟ್ಟಿ, ಸಂಗನಗೌಡ ಪಾಟೀಲ, ತಹಶೀಲ್ದಾರ್ ಗಿರೀಶ ಸ್ವಾ ಧಿ, ತಾಪಂ ಇಒ ಬಸಪ್ಪ ಕುರ್ತಕೋಟಿ, ಪಶು ವೈದ್ಯಾಧಿ ಕಾರಿ ಗಿರೀಶ ಪಾಟೀಲ, ಪಿಎಸ್ಐ ಆನಂದ ಡೋಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ