ಸವದತ್ತಿ: ಕಂದಮ್ಮಗಳ ಶಿಕ್ಷಣಕ್ಕೆ ಸಂಗೀತ ಸ್ಪರ್ಶ ನೀಡಿದ ಪಿಎಸ್ಐ.!
Team Udayavani, Jan 26, 2022, 12:48 PM IST
ಸವದತ್ತಿ: ಪೊಲೀಸ್ ಅರ್ಥ ರಕ್ಷಕ ಮತ್ತು ಕಾನೂನು ಪಾಲಕ. ಇವೆರಡರ ಜೊತೆಗೂ ಇಲ್ಲೊಂದು ಸಮಾಜಮುಖಿ ಕಾರ್ಯ ನಡೆದಿದೆ. ಸವದತ್ತಿ ಠಾಣೆಯ ಪೊಲೀಸ್ ಅಧಿಕಾರಿ ಕಾನೂನು ಪಾಲನೆ ಜೊತೆಗೆ ಸಂಗೀತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಾವೂ ಸಹ ಮುಂದಿದ್ದೇವೆಂದು ನಿಖರವಾಗಿ ತೋರಿಸಿ ಸಾರ್ವಜನಿಕ ವಲಯದಲ್ಲಿ ಅತೀವ ಪ್ರಂಶಸೆಗೆ ಪಾತ್ರರಾಗಿದ್ದಾರೆ.
ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಬೆತ್ತದ ಜೊತೆಗೆ ಬಳಪ ಬಳಸುವ ಕಲೆಯನ್ನು ಇತರರಿಗೆ ಮಾದರಿಯಾಗಿರಿಸಿದ್ದಾರೆ.
ಪ್ರಕರಣದ ತನಿಖೆಗೆಂದು ಸೋಮವಾರ ತಾಲೂಕಿನ ಕುರುವಿನಕೊಪ್ಪ ತೆರಳಿದಾಗ ಆಕಸ್ಮಿಕ ಅಲ್ಲಿನ ಸರಕಾರಿ ಶಾಲಾ ಮಕ್ಕಳಿಗೆ ಜಾನಪದ ಹಾಡಿನೊಂದಿಗೆ ಪಾಠ ತಿಳಿಸಿ, ಕುಣಿದು ಮಕ್ಕಳನ್ನು ರಂಜಿಸಿದ್ದಾರೆ. ನುರಿತ ಶಿಕ್ಷಕರು ಹೇಳುವ ಪಾಠ ಒಂದೊಮ್ಮೆ ಮಕ್ಕಳಿಗೆ ಗೀಳೆನಿಸಬಹುದು. ಆದರೆ ಅಲ್ಪ ವೇಳೆಯಲ್ಲಿ ಕಂದಮ್ಮಗಳಿಗೆ ಸಂಗೀತಕ್ಕೆ ಭಾವನಾತ್ಮಕ ಸ್ಪರ್ಶ ನೀಡಿ ಹಾಡಿನ ಪ್ರತಿ ಪಾತ್ರವನ್ನು ಅಭಿನಯಿಸುವ ಮೂಲಕ ಮಕ್ಕಳನ್ನು ಸೆಳೆಯುವ ಕಾರ್ಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿ ಎಲ್ಲೆಡೆ ಇವರಿಗೆ ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ.
ಮೊದಲು ಹುಕ್ಕೇರಿ ಠಾಣೆಯಲ್ಲಿನ ಸೇವೆ ಗಮನಿಸಿ ಪ್ರತಿಷ್ಠಿತ ಮುಖ್ಯಮಂತ್ರಿಗಳ ಪದಕ ಮುಡಿಗೇರಿಸಿಕೊಂಡಿದ್ದಾರೆ. ಅಪ್ಪಟ ಸಂಗೀತಪ್ರೀಯರಾದ ಇವರು ತಮ್ಮ ಪೇಸ್ಬುಕ್ ನಲ್ಲಿ ಹಲವಾರು ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಸಂಗೀತದ ಸದಭಿರುಚಿಯನ್ನು ಜನತೆಯೊಂದಿಗೆ ಹಂಚಿಕೊಂಡು ಸಾಧಕರ ಸಾಧನೆಗೆ ಮೆಟ್ಟಿಲನ್ನಾಗಿಸಿದ್ದಾರೆ.
ಮೂಲತಃ ತಾಲೂಕಿನ ಇಂಚಲ ಗ್ರಾಮದವರಾದ ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸ್ವಗ್ರಾಮದಲ್ಲಿಯೇ ಪೂರ್ಣಗೊಳಿಸಿದ್ದಾರೆ. ಶಾಲಾವಧಿಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಬಾಚಿಕೊಂಡಿದ್ದಾರೆ. ಬಿ.ಎ ಪದವಿಧರರಾದ ಇವರು ಜಾನಪದ, ಭಾವಗೀತೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಹಲವು ವಾದ್ಯಗಳನ್ನು ಕರಗತ ಮಾಡಿಕೊಂಡಿರುವ ಇವರು ಬಿಡುವಿನ ಸಮಯದಲ್ಲಿ ಸಂಗೀತ ಮತ್ತು ಶಿಕ್ಷಣದಲ್ಲಿ ತಲ್ಲೀಣರಾಗುತ್ತಾರೆ. ಇವರು ಹಾಡಿದ ಮತ್ತು ನುಡಿಸಿದ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಇಲಾಖಾಧಿಕಾರಿಗಳ ಶ್ಲಾಘನೆಗೆ ಪಾತ್ರರಾಗಿದ್ದಾರೆ.
ಪೊಲೀಸ್ ವ್ಯವಸ್ಥೆಯನ್ನು ಮಕ್ಕಳಿಗೆ ತಿಳಿಸಿ ಭಯದ ಬದಲಾಗಿ ಇಲಾಖೆ ರಕ್ಷಣೆಗಿದೆ ಎಂದು ತಿಳಿಸುವ ಉದ್ದೇಶ ನಮ್ಮದಾಗಿದೆ. ಜನಸ್ನೇಹಿ ವ್ಯವಸ್ಥೆ ಕಲ್ಪಿಸುವದಾಗಿದೆ. ಒತ್ತಡದ ಸಮಯದಲ್ಲೂ ಸಹ ಚಿಣ್ಣರ ಜೊತೆ ನಲಿದ ಸಂದರ್ಭ ಮರೆಯುವಂತಿಲ್ಲ.-ಶಿವಾನಂದ ಗುಡಗನಟ್ಟಿ, ಪಿಎಸ್ಐ, ಸವದತ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ