ಸವದತ್ತಿ: ಕಂದಮ್ಮಗಳ ಶಿಕ್ಷಣಕ್ಕೆ ಸಂಗೀತ ಸ್ಪರ್ಶ ನೀಡಿದ ಪಿಎಸ್‌ಐ.!


Team Udayavani, Jan 26, 2022, 12:48 PM IST

ಸವದತ್ತಿ: ಕಂದಮ್ಮಗಳ ಶಿಕ್ಷಣಕ್ಕೆ ಸಂಗೀತ ಸ್ಪರ್ಶ ನೀಡಿದ ಪಿಎಸ್‌ಐ.!

ಸವದತ್ತಿ: ಪೊಲೀಸ್ ಅರ್ಥ ರಕ್ಷಕ ಮತ್ತು ಕಾನೂನು ಪಾಲಕ. ಇವೆರಡರ ಜೊತೆಗೂ ಇಲ್ಲೊಂದು ಸಮಾಜಮುಖಿ ಕಾರ್ಯ ನಡೆದಿದೆ. ಸವದತ್ತಿ ಠಾಣೆಯ ಪೊಲೀಸ್ ಅಧಿಕಾರಿ ಕಾನೂನು ಪಾಲನೆ ಜೊತೆಗೆ ಸಂಗೀತ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ತಾವೂ ಸಹ ಮುಂದಿದ್ದೇವೆಂದು ನಿಖರವಾಗಿ ತೋರಿಸಿ ಸಾರ್ವಜನಿಕ ವಲಯದಲ್ಲಿ ಅತೀವ ಪ್ರಂಶಸೆಗೆ ಪಾತ್ರರಾಗಿದ್ದಾರೆ.

ಸೂಕ್ಷ್ಮ ಸ್ವಭಾವದ ವ್ಯಕ್ತಿತ್ವವುಳ್ಳ ಇಲ್ಲಿನ ಪಿಎಸ್‌ಐ ಶಿವಾನಂದ ಗುಡಗನಟ್ಟಿ, ಶಿಕ್ಷಣ ಹಾಗೂ ಸಂಗೀತ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಬೆತ್ತದ ಜೊತೆಗೆ ಬಳಪ ಬಳಸುವ ಕಲೆಯನ್ನು ಇತರರಿಗೆ ಮಾದರಿಯಾಗಿರಿಸಿದ್ದಾರೆ.

ಪ್ರಕರಣದ ತನಿಖೆಗೆಂದು ಸೋಮವಾರ ತಾಲೂಕಿನ ಕುರುವಿನಕೊಪ್ಪ ತೆರಳಿದಾಗ ಆಕಸ್ಮಿಕ ಅಲ್ಲಿನ ಸರಕಾರಿ ಶಾಲಾ ಮಕ್ಕಳಿಗೆ ಜಾನಪದ ಹಾಡಿನೊಂದಿಗೆ ಪಾಠ ತಿಳಿಸಿ, ಕುಣಿದು ಮಕ್ಕಳನ್ನು ರಂಜಿಸಿದ್ದಾರೆ. ನುರಿತ ಶಿಕ್ಷಕರು ಹೇಳುವ ಪಾಠ ಒಂದೊಮ್ಮೆ ಮಕ್ಕಳಿಗೆ ಗೀಳೆನಿಸಬಹುದು. ಆದರೆ ಅಲ್ಪ ವೇಳೆಯಲ್ಲಿ ಕಂದಮ್ಮಗಳಿಗೆ ಸಂಗೀತಕ್ಕೆ ಭಾವನಾತ್ಮಕ ಸ್ಪರ್ಶ ನೀಡಿ ಹಾಡಿನ ಪ್ರತಿ ಪಾತ್ರವನ್ನು ಅಭಿನಯಿಸುವ ಮೂಲಕ ಮಕ್ಕಳನ್ನು ಸೆಳೆಯುವ ಕಾರ್ಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿ ಎಲ್ಲೆಡೆ ಇವರಿಗೆ ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ.

ಮೊದಲು ಹುಕ್ಕೇರಿ ಠಾಣೆಯಲ್ಲಿನ ಸೇವೆ ಗಮನಿಸಿ ಪ್ರತಿಷ್ಠಿತ ಮುಖ್ಯಮಂತ್ರಿಗಳ ಪದಕ ಮುಡಿಗೇರಿಸಿಕೊಂಡಿದ್ದಾರೆ. ಅಪ್ಪಟ ಸಂಗೀತಪ್ರೀಯರಾದ ಇವರು ತಮ್ಮ ಪೇಸ್‌ಬುಕ್ ನಲ್ಲಿ ಹಲವಾರು ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಸಂಗೀತದ ಸದಭಿರುಚಿಯನ್ನು ಜನತೆಯೊಂದಿಗೆ ಹಂಚಿಕೊಂಡು ಸಾಧಕರ ಸಾಧನೆಗೆ ಮೆಟ್ಟಿಲನ್ನಾಗಿಸಿದ್ದಾರೆ.

ಮೂಲತಃ ತಾಲೂಕಿನ ಇಂಚಲ ಗ್ರಾಮದವರಾದ ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸ್ವಗ್ರಾಮದಲ್ಲಿಯೇ ಪೂರ್ಣಗೊಳಿಸಿದ್ದಾರೆ. ಶಾಲಾವಧಿಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವು ಬಹುಮಾನಗಳನ್ನು ಬಾಚಿಕೊಂಡಿದ್ದಾರೆ. ಬಿ.ಎ ಪದವಿಧರರಾದ ಇವರು ಜಾನಪದ, ಭಾವಗೀತೆಗಳಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಹಲವು ವಾದ್ಯಗಳನ್ನು ಕರಗತ ಮಾಡಿಕೊಂಡಿರುವ ಇವರು ಬಿಡುವಿನ ಸಮಯದಲ್ಲಿ ಸಂಗೀತ ಮತ್ತು ಶಿಕ್ಷಣದಲ್ಲಿ ತಲ್ಲೀಣರಾಗುತ್ತಾರೆ. ಇವರು ಹಾಡಿದ ಮತ್ತು ನುಡಿಸಿದ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಕುರಿತು ಇಲಾಖಾಧಿಕಾರಿಗಳ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಪೊಲೀಸ್ ವ್ಯವಸ್ಥೆಯನ್ನು ಮಕ್ಕಳಿಗೆ ತಿಳಿಸಿ ಭಯದ ಬದಲಾಗಿ ಇಲಾಖೆ ರಕ್ಷಣೆಗಿದೆ ಎಂದು ತಿಳಿಸುವ ಉದ್ದೇಶ ನಮ್ಮದಾಗಿದೆ. ಜನಸ್ನೇಹಿ ವ್ಯವಸ್ಥೆ ಕಲ್ಪಿಸುವದಾಗಿದೆ. ಒತ್ತಡದ ಸಮಯದಲ್ಲೂ ಸಹ ಚಿಣ್ಣರ ಜೊತೆ ನಲಿದ ಸಂದರ್ಭ ಮರೆಯುವಂತಿಲ್ಲ.-ಶಿವಾನಂದ ಗುಡಗನಟ್ಟಿ, ಪಿಎಸ್‌ಐ, ಸವದತ್ತಿ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

Chikkodi; ಕಾರ್ಯಕರ್ತರ ಅಭಿಪ್ರಾಯ ಪಡೆದ ಸತೀಶ ಪುತ್ರಿ ಪ್ರಿಯಾಂಕಾ

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

ಎಲ್ಲ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಹೇಳಲ್ಲ, ಆದರೆ… ಸತೀಶ ಜಾರಕಿಹೋಳಿ ಹೇಳಿದ್ದೇನು?

Chikkodi ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಘೋಷಣೆ: ಸತೀಶ ಜಾರಕಿಹೊಳಿ 

Chikkodi ಮುಖಂಡರ ಅಭಿಪ್ರಾಯ ಪಡೆದು ಅಭ್ಯರ್ಥಿ ಫೈನಲ್‌: ಸಚಿವ ಸತೀಶ ಜಾರಕಿಹೊಳಿ 

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

ರಾಜ್ಯದ ಬಿಜೆಪಿ ಸಂಸದರು ಶೋಕೇಸ್‌ ಪೀಸ್‌ಗಳು: ಲಕ್ಷ್ಮಣ ಸವದಿ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

Belagavi ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಕ್ಷ್ಮಣರಾವ್ ಚಿಂಗಳೆ ನೇಮಕ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.