ಸಂಪುಟಕ್ಕೆ ಸೂತ್ರ ಸಿದ್ಧ
Team Udayavani, Dec 14, 2018, 6:00 AM IST
ಬೆಳಗಾವಿ: ಸಂಪುಟ ವಿಸ್ತರಣೆಗೆ ಕಸರತ್ತು ಆರಂಭಿಸಿರುವ ರಾಜ್ಯ ಸಮ್ಮಿಶ್ರ ಸರ್ಕಾರದ ನಾಯಕರು ಆಕಾಂಕ್ಷಿಗಳನ್ನು ಸಮಾಧಾನ ಪಡಿಸಲು ಸರಳ ಸೂತ್ರ ಸಿದ್ದಪಡಿಸಿಕೊಂಡಿದ್ದು, ಡಿಸೆಂಬರ್ 21ರಂದು ಕಾಂಗ್ರೆಸ್ ಹೈಕಮಾಂಡ್ ಮುಂದೆ ಈ ಸೂತ್ರವನ್ನು ಇಡಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ನಲ್ಲಿ ಖಾಲಿ ಇರುವ 6 ಸಚಿವ ಸ್ಥಾನಗಳನ್ನು ಜಾತಿವಾರು ರೀತಿಯಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಲಿಂಗಾಯತ, ಒಕ್ಕಲಿಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತ ಎಡಗೈ ಸಮುದಾಯ, ವಾಲ್ಮೀಕಿ ಸಮುದಾಯದ ಒಬ್ಬರನ್ನು ಸಚಿವರನ್ನಾಗಿ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಅದರ ಜತೆಗೆ 10 ಜನ ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲು ನಿರ್ಧರಿಸಿದ್ದು, 6 ಜನ ಕಾಂಗ್ರೆಸ್ಗೆ 3 ಜನ ಜೆಡಿಎಸ್ನಿಂದ ನೇಮಕ ಮಾಡುವ ಆಲೋಚನೆ ವರಿಷ್ಠರದ್ದು. ಜತೆಗೆ ಕಾಂಗ್ರೆಸ್ನ ಒಬ್ಬರು ಹಿರಿಯ ಶಾಸಕರನ್ನು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನ ನೀಡಬೇಕೆಂಬ ಸೂತ್ರವನ್ನು ಮೈತ್ರಿ ಸರ್ಕಾರದ ನಾಯಕರು ಹೆಣೆದಿದ್ದಾರೆ ಎನ್ನಲಾಗಿದೆ.
ಯಾರಿಗೂ ಕೊಕ್ ಇಲ್ಲ: ಸದ್ಯದ ಪರಿಸ್ಥಿತಿಯಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದರೂ, ಹಾಲಿ ಸಚಿವರನ್ನು ಕೈಬಿಡದಿರಲು ರಾಜ್ಯ ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಖಾಲಿ ಇರುವ 6 ಸ್ಥಾನಗಳನ್ನು ಮಾತ್ರ ಭರ್ತಿ ಮಾಡಿ, ಎರಡು ವರ್ಷದ ನಂತರವೇ ಬದಲಾವಣೆ ಮಾಡುವ ಲೆಕ್ಕಾಚಾರ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆವರೆಗೂ ಸಂಪುಟ ವಿಸ್ತರಣೆ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ಮಾತುಕತೆ: ಮಲೇಶಿಯಾ ಪ್ರವಾಸ ಮೊಟಕುಗೊಳಿಸಿ ಬಂದಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಜತೆ ಕೆಲವು ಶಾಸಕರು ಹಾಗೂ ಸಚಿವರು ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಸಭಾಪತಿ ಆಯ್ಕೆ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿರುವ ಬಗ್ಗೆಯೂ ಪ್ರಸ್ತಾಪಿಸಿದರು. ಜತೆಗೆ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಇನ್ನೂ ಹೆಚ್ಚಿನ ಅವಕಾಶ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ಸೋಮವಾರದಿಂದ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ಡಿ.18ರ ಶಾಸಕಾಂಗ ಪಕ್ಷದ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಶುಕ್ರವಾರ ಇಲ್ಲವೇ
ಶನಿವಾರ ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿ ಜತೆ ರಾಹುಲ್ ಭೇಟಿಗಾಗಿ ದೆಹಲಿಗೆ ತೆರಳಲಿದ್ದಾರೆ.
ನಿಗಮ ಮಂಡಳಿ ನೇಮಕ
ಸಂಪುಟ ವಿಸ್ತರಣೆಯ ಜತೆಗೆ 30 ನಿಗಮ ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಲೆಕ್ಕಾಚಾರ ಇದೆ. ಕಾಂಗ್ರೆಸ್ನಿಂದ 20 ಶಾಸಕರು, ಜೆಡಿಎಸ್ನಿಂದ 10 ಜನ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನ ನೀಡಿ ಸಮಾಧಾನ ಪಡಿಸುವ ಸರಳ ಸೂತ್ರವನ್ನು ನಾಯಕರುಗಳು ರೂಪಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗಿದ್ದು, ಮಾಜಿ ಪ್ರಧಾನಿ ದೇವೇಗೌಡರ ಜತೆಗೂ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.21 ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದು, ರಾಹುಲ್ ಅವಕಾಶ ನೀಡಿದರೆ ಆಗ ಚರ್ಚಿಸಿ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ