ಇಟ್ಟಿಗೆ ಭಟ್ಟಿ ಬಂದ್‌ಗೆ ತಹಶೀಲ್ದಾರ್‌ ಆದೇಶ

ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರಿಂದ ಮನವಿ  ಭಟ್ಟಿ ಧೂಳಿನಿಂದ ಆರೋಗ್ಯದಲ್ಲಿ ಸಮಸ್ಯೆ: ಭಜಂತ್ರಿ

Team Udayavani, Mar 5, 2020, 3:41 PM IST

5-March-16

ರಾಯಬಾಗ: ತಾಲೂಕಿನ ಜಲಾಲಪುರ ಗ್ರಾಮದ ಜನವಸತಿ ಪ್ರದೇಶದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಇಟ್ಟಂಗಿ ಭಟ್ಟಿಗೆ ತಹಶೀಲ್ದಾರ್‌ ಚಂದ್ರಕಾಂತ ಭಜಂತ್ರಿ ಭೇಟಿ ನೀಡಿ ಇಟ್ಟಿಗೆ ತಯಾರಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿಲು ಆದೇಶಿಸಿದರು.

ಈ ವೇಳೆ ಮಾತನಾಡಿದ ಅವರು, ಜನಪ್ರದೇಶದಲ್ಲಿರುವ ಈ ಇಟ್ಟಂಗಿ ಭಟ್ಟಿಯಿಂದ ಸ್ಥಳೀಯರಿಗೆ ಚರ್ಮ ರೋಗ ಮತ್ತು ಉಸಿರಾಟದ ತೊಂದರೆಗಳಿಂದ ಬಳಲುವಂತಾಗಿದೆ. ಸುತ್ತಮುತ್ತ ಇರುವ ಬೆಳೆಗಳ ಮೇಲೆ ಬೂದಿ ಕೂಡುವದರಿಂದ ಬೆಳೆ ಸರಿಯಾಗಿ ಬರುತ್ತಿಲ್ಲ. ಕೊಳವೆ ಬಾವಿ ನೀರು ಕಲುಷತಗೊಂಡಿದ್ದರಿಂದ ನೀರು ಕುಡಿಯಲು ಯೋಗ್ಯವಾಗಿರುವುದಿಲ್ಲವೆಂದು ಆರೋಪಿಸಿದ ಸ್ಥಳೀಯರು, ಕೂಡಲೇ ಇಟ್ಟಿಗೆ ಭಟ್ಟಿಯನ್ನು ಬಂದ್‌ ಮಾಡಿಸಬೇಕು ಎಂದರು.

ಪ್ರಕರಣ ಹಿನ್ನಲೆ: ತಾಲೂಕಿನ ಜಲಾಲಪುರ ಗ್ರಾಮದಲ್ಲಿ ಕಲ್ಲಪ್ಪ ಕಾಡಾಪೂರೆ ಎಂಬುವರು ತಮ್ಮ ಜಮೀನದಲ್ಲಿ ಅನಧಿಕೃತವಾಗಿ ಇಟ್ಟಂಗಿ ಭಟ್ಟಿ ನಡೆಸುತ್ತಿದ್ದರು. ಇದು ಜನವಸತಿ ಪ್ರದೇಶವಾಗಿದ್ದರಿಂದ ಮತ್ತು ಸುತ್ತಮುತ್ತ ಸುಮಾರು 40 ಕುಟುಂಬಗಳು ವಾಸಿಸುತ್ತಿರುವುದರಿಂದ, ಇಟ್ಟಿಂಗಿ ಭಟ್ಟಿಯಿಂದ ಹಾರುವ ಧೂಳು ಮತ್ತು ಹೊಗೆಯಿಂದ ಇಲ್ಲಿನ ನಿವಾಸಿಗಳಿಗೆ ನೀರಿನ ಮತ್ತು ಆರೋಗ್ಯ ಸಮಸ್ಯೆ ಸೇರಿದಂತೆ ನಾನಾ ರೀತಿಯ ತೊಂದರೆ ಅನುಭವಿಸುತ್ತಿದ್ದರು. ಇಟ್ಟಂಗಿ ಭಟ್ಟಿ ನಡೆಸುತ್ತಿದ್ದ ಮಾಲೀಕರ ವಿರುದ್ಧ ಗ್ರಾಮದ ಸರ್ಜೇರಾವ್‌ ಕಾಂಬಳೆ ಹಾಗೂ ಸ್ಥಳೀಯರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ, ಜಿಲ್ಲಾ ಧಿಕಾರಿಗಳಿಗೆ ಮತ್ತು ತಹಶೀಲ್ದಾರ್‌ಗೆ ಲಿಖೀತವಾಗಿ ಮನವಿ ಸಲ್ಲಿಸಿದ್ದರು.

ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಕಂದಾಯ ಇಲಾಖೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದ್ದರಿಂದ ಕಳೆದ ವಾರ ರಾಯಬಾಗ ಕಂದಾಯ ನಿರೀಕ್ಷಕರು ಮತ್ತು ಸಿಬ್ಬಂದಿ ಭೇಟಿ ನೀಡಿ ಇಟ್ಟಂಗಿ ಭಟ್ಟಿ ಸ್ಥಗಿತಗೊಳಿಸುವಂತೆ ತಿಳಿಸಿದ್ದರು. ಆದರೆ ಇದಕ್ಕೆ ಜಗ್ಗದ ಅದರ ಮಾಲೀಕ ನಿರಂತರವಾಗಿ ಇಟ್ಟಿಗೆ ತಯಾರಿಕೆ ಮಾಡುವುದನ್ನು ಮುಂದುವರೆಸಿದ್ದರು.

ಬುಧವಾರ ರಾಯಬಾಗ ತಹಶೀಲ್ದಾರ್‌ ಚಂದ್ರಕಾಂತ ಭಜಂತ್ರಿ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಸ್ಥಳೀಯರ ದೂರುಗಳನ್ನು ಆಲಿಸಿ, ಅನಧಿ ಕೃತವಾಗಿ ನಡೆಸುತ್ತಿರುವ ಇಟ್ಟಂಗಿ ಭಟ್ಟಿಯನ್ನು ಕೂಡಲೇ ಸ್ಥಗೀತಗೊಳಿಸುವಂತೆ ಆದೇಶಿಸಿದರು. ಈ ವೇಳೆ ಕಂದಾಯ ನಿರೀಕ್ಷಕ ಆರ್‌.ಎಂ. ಡಬ್ಬಗೋಳ, ಗ್ರಾಮಲೆಕ್ಕಾಧಿಕಾರಿ ಪದ್ಮಾಚಲೇಕರ, ಸರ್ಜೇರಾವ ಕಾಂಬಳೆ, ದಿನಕರ ಪೋಕಳೆ, ಸದಾಶಿವ ಕಾಂಬಳೆ, ಮಹಾವೀರ ಕಾಂಬಳೆ, ದಯಾನಂದ ಕಾಂಬಳೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.