ಜನರ ಜೀವನಾಡಿಯಾಗಿ ರೈಲ್ವೆ ಇಲಾಖೆ ಕಾರ್ಯ: ಸಚಿವ ಅಂಗಡಿ
Team Udayavani, Jul 25, 2020, 8:39 AM IST
ಬೆಳಗಾವಿ: ರೈಲ್ವೆ ಇಲಾಖೆಯು ಜನರ ಜೀವನಾಡಿಯಾಗಿ ಕೆಲಸ ಮಾಡುತ್ತಿದ್ದು ಕೋವಿಡ್-19 ಸಮಯದಲ್ಲಿ ವಲಸೆ ಕಾರ್ಮಿಕರಿಗೆ ವಿವಿಧ ರಾಜ್ಯಗಳಲ್ಲಿ ಪ್ರಯಾಣಿಸಲು ಅನುಕೂಲತೆ ಕಲ್ಪಿಸಿ ಅವರಿಗೆ ನರೇಗಾ ಯೋಜನೆಯಡಿ ಉದ್ಯೋಗಾವಕಾಶ ಒದಗಿಸಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೇಜ್ (ಸಿಐಐ) ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ನ್ಯೂ ಏಜ್ ಕನೇಕ್ಟಿವಿಟಿ ಮತ್ತು ಲಾಜಿಸ್ಟಿಕ್ಸ್ ವಿಷಯದ ಕುರಿತು ವೀಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಭಾರತ ಯೋಜನೆಯಡಿ ದೇಶವನ್ನು ಅಭಿವೃದ್ಧಿ ಪಥದತ್ತ ಕರೆದೊಯ್ಯಬಹುದಾಗಿದೆ. ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಲಭಿಸಲಿದೆ ಎಂದರು.
ಕಾರ್ಮಿಕರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗಿದೆ. ವೋಕಲ್ ಫಾರ್ ಲೋಕಲ್ ಅಡಿ ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸುವುದು ಇಂದಿನ ದಿನದಲ್ಲಿ ಅವಶ್ಯಕವಾಗಿದೆ. ಕೃಷಿ , ಜವಳಿ , ಆಹಾರ ಸಂಸ್ಕರಣ ಘಟಕ ಉದ್ಯಮಗಳನ್ನು ಸ್ಥಾಪಿಸಲು ಯುವಕರು ಮುಂದೆ ಬರಬೇಕು ಎಂದು ಸಚಿವರು ಪ್ರತಿಪಾದಿಸಿದರು . ಮೇಕ್ ಇನ್ ಇಂಡಿಯಾ ಅಡಿ ದೇಶವನ್ನು ಸದೃಡಪಡಿಸಲು ಅನುಕೂಲವಾಗುತ್ತಿದೆ ಎಂದು ರೇಲ್ವೆ ಸಚಿವರು ಪ್ರಸ್ತಾಪಿಸಿದರು. ಅಶೋಕ ಐರನ್ ವರ್ಕ್ಸ್ ಎಂ.ಡಿ ಜಯಂತ ಹುಂಬರವಾಡಿ, ಬೆಳಗಾವಿ ವಿಮಾನ ನಿಲ್ದಾಣದ ನಿರ್ದೇಶಕ ರಾಜೇಶ ಕುಮಾರ ಮೌರ್ಯ, ಸಿಐಐನ ಮಹಿಂದರ ಸಂವಾದದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ