ಪ್ರಾದೇಶಿಕ ಭಾಷೆಯಾಗಿ ರೈಲ್ವೇ ಇಲಾಖೆಯಲ್ಲಿ ಕನ್ನಡ ಜಾರಿಗೆ ಅಗತ್ಯ ಕ್ರಮ: ಅಂಗಡಿ
Team Udayavani, Oct 29, 2019, 2:21 PM IST
ಬೆಳಗಾವಿ: ಪ್ರಾದೇಶಿಕ ಭಾಷೆಯಾಗಿ ರೈಲ್ವೆ ಇಲಾಖೆಯಲ್ಲಿ ಕರ್ನಾಟಕದಲ್ಲಿ ಕನ್ನಡ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈಗಾಗಲೇ ರೈಲು ನಿಲ್ದಾಣದಲ್ಲಿ ಕನ್ನಡದಲ್ಲೇ ಮಾಹಿತಿ ನೀಡಲಾಗುತ್ತಿದೆ. ಕನ್ನಡದಲ್ಲೇ ಪತ್ರಿಕಾ ಹೇಳಿಕೆಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ. ಕನ್ನಡ ಭಾಷೆ ಬಲ್ಲ ಅಧಿಕಾರಿಗಳು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಕನ್ನಡ ಬಳಕೆಗೆ ಇನ್ನಷ್ಟು ಒತ್ತು ನೀಡುತ್ತೇವೆ. ಕನ್ನಡದಲ್ಲಿ ವ್ಯವಹರಿಸಬಲ್ಲ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದರು.
ದೇಶದಲ್ಲಿರುವ ರೈಲು ನಿಲ್ದಾಣಗಳಿಗೆ ವಿದೇಶಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಾಗಾಗಿ, ರಾಷ್ಟ್ರೀಯ ಭಾಷೆ ಹಿಂದಿ ಮತ್ತು ಇದಕ್ಕೆ ಪೂರಕವಾಗಿ ಇಂಗ್ಲಿಷ್ ಬಳಸಲಾಗುತ್ತಿದೆ. ಕರ್ನಾಟಕದ ಮಟ್ಟಿಗೆ, ಕನ್ನಡ ಬಳಕೆಗೆ ಆದ್ಯತೆ ನೀಡುವ ನಿಯಮಗಳನ್ನು ರೂಪಿಸಲಾಗುವುದು ಎಂದು ಹೇಳಿದರು.
ಬಿಜೆಪಿಗೆ ಬೆಂಬಲಿಸುವ ರೀತಿಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿರುವ ಬಗ್ಗೆ ಪ್ರಸ್ತಾಪಿಸಿದ ಅವರು ರಾಜಕಾರಣದಲ್ಲಿ ಯಾರು ಶತ್ರುಗಳು ಅಲ್ಲ ಮಿತ್ರರೂ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ