ಅಕಾಲಿಕ ಮಳೆ: ಸಿಡಿಲು ಬಡಿದು ಗಿಡಕ್ಕೆ ಬೆಂಕಿ
Team Udayavani, Feb 19, 2021, 3:56 PM IST
ಬೆಳಗಾವಿ: ನಗರ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ಸಂಜೆ ಅಕಾಲಿಕ ಮಳೆ ಸುರಿದಿದ್ದು, ನಗರದ ಲಕ್ಷ್ಮೀ ಗಲ್ಲಿಯಲ್ಲಿ ಟೆಂಗಿನ ಗಿಡಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಗುರುವಾರ ಬೆಳಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಮಧ್ಯಾಹ್ನ ನಂತರ ತಂಪು ಗಾಳಿಬೀಸುವುದರ ಜೊತೆಗೆ ತುಂತುರು ಮಳೆ ಶುರುವಾಯಿತು. ಸುಮಾರು ಒಂದು ತಾಸಿಗೂ ಹೆಚ್ಚು ಮಳೆಯಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ನಗರದ ಲಕ್ಷ್ಮೀ ಗಲ್ಲಿಯ ರಮೇಶ ರೇಡೇಕರ ಎಂಬವರ ಮನೆ ಎದುರಿನ ಟೆಂಗಿನ ಗಿಡಕ್ಕೆ ಸಿಡಿಲು ಬಡಿದಿದೆ. ಸಿಡಿಲಿನಿಂದ ಗಿಡಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಗೆ ಗಿಡ ಸುಟ್ಟು ಕರಕಲಾಗಿದೆ. ಜೊತೆಗೆ ಪಕ್ಕದ ಟ್ರಾನ್ಸಫಾರ್ಮ್ ಕೂಡ ಸುಟ್ಟಿದೆ.
ನಗರದ ಹಲವೆಡೆ ಸುರಿದ ಭಾರೀ ಮಳೆಯಿಂದ ಕೆಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿದೆ. ತಾಲೂಕಿನಾದ್ಯಂತ ಮಳೆಯಾಗಿದ್ದಿರಿಂದ ಜನರು ಪರದಾಡುವಂತಾಯಿತು.