ನಿಲ್ಲದ ವರುಣನ ಅಬ್ಬರ: ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಳ; ಕುಡಚಿ ಸೇತುವೆ ಮುಳುಗಡೆ
Team Udayavani, Aug 7, 2020, 9:06 AM IST
ಚಿಕ್ಕೋಡಿ: ರಾಜ್ಯದ ಗಡಿ ಭಾಗದಲ್ಲಿ ಮಳೆರಾಯನ ರೌದ್ರನರ್ತನ ಕಡಿಯಾಗಿದೆ. ಆದರೆ ಕೊಂಕಣ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಿದ್ದು. ಹೀಗಾಗಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಗುರುವಾರದಿಂದ 8 ಅಡಿಯಷ್ಟು ಹೆಚ್ಚಳವಾಗಿದೆ.
ರಾಯಬಾಗ ತಾಲೂಕಿನ ಕುಡಚಿ ಸೇತುವೆ ಮುಳುಗಡೆಗೊಂಡಿದೆ. ಇದರಿಂದ ಮಹಾರಾಷ್ಟ್ರ ಕರ್ನಾಟಕ ಸಂಪರ್ಕ ಕಲ್ಪಿಸುವ ಸಾಂಗ್ಲಿ- ಬಾಗಲಕೋಟ ರಾಜ್ಯ ಹೆದ್ದಾರಿ ಬಂದ್ ಆಗಿದೆ.
ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳಿಗೆ ಮಹಾ ಮಳೆಯಿಂದ ರಾಜ್ಯಕ್ಕೆ 1.60 ಲಕ್ಷ ಕ್ಯೂಸೆಕ್ ಹೆಚ್ಚಿನ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರ ರಾಜಾಪುರ ಬ್ಯಾರೇಜದಿಂದ ಕೃಷ್ಣಾ ನದಿಗೆ 1.21 ಲಕ್ಷ ಕ್ಯೂಸೆಕ್ ನೀರು ಹರಿದು ಬರಲಾರಂಭಿಸಿದೆ. ದೂಧಗಂಗಾ ಹಾಗೂ ವೇದಗಂಗಾ ನದಿಗಳಿಂದ 38 ಸಾವಿರ ಕ್ಯೂಸೆಕ್ ನೀರು ಬರುತ್ತಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಒಟ್ಟಾರೆ 1.55 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಬರುವ ನೀರಿನಷ್ಟೇ ಹಿಪ್ಪರಗಿ ಬ್ಯಾರೇಜ ಮೂಲಕ ಆಲಮಟ್ಟಿ ಜಲಾಶಯಕ್ಕೆ ಹೋಗುತ್ತಿದೆ.
ಇದನ್ನೂ ಓದಿ: ಮಲೆನಾಡಿನಲ್ಲಿ ಮಳೆಯ ಆರ್ಭಟ: ಪ್ರವಾಹಕ್ಕೆ ಮುಳುಗಿದ ಕಾರು, ಮಂಗಳೂರು ಶೃಂಗೇರಿ ಹೆದ್ದಾರಿ ಬಂದ್
ಮಹಾರಾಷ್ಟ್ರದ ಕೋಯ್ನಾ 142 ಮಿಮೀ. ಮಹಾಬಳೇಶ್ವರ 237 ಮಿಮೀ. ನವಜಾ 95 ಮಿಮೀ. ವಸರಣಾ 100 ಮಿಮೀ ಮಳೆಯಾಗಿದೆ ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ತಿಳಿಸಿದರು.
ಇದನ್ನೂ ಓದಿ:ಚಾರ್ಮಾಡಿಯಲ್ಲಿ ಮತ್ತೆ ಕುಸಿಯುತ್ತಿರುವ ಗುಡ್ಡ: ಸಂಚಾರಕ್ಕೆ ತಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು