ಮಳೆ ಕೊರತೆಗೆ ಕೃಷಿ ಚಟುವಟಿಕೆಗೆ ಗರ

•ಶೇ.78 ಮಳೆ ಕೊರತೆ•ಮುಂಗಾರು ಪೂರ್ವ ಮಳೆಯೂ ಕಮ್ಮಿ ಕಮ್ಮಿ•ಸಿಗುತ್ತಿಲ್ಲ ಕುಡಿವ ನೀರು-ಮೇವು

Team Udayavani, Jun 3, 2019, 10:25 AM IST

bg-tdy-1..

ಬೆಳಗಾವಿ: ಮಳೆಕೊರತೆಯಿಂದ ಕೃಷಿ ಚಟುವಟಿಕೆಯಿಲ್ಲದೆ ಖಾಲಿ ಕಾಣುತ್ತಿರುವ ಕೃಷಿಭೂಮಿ.

ಬೆಳಗಾವಿ: ಸತತ ಭೀಕರ ಬರದಿಂದ ಕಂಗೆಟ್ಟಿರುವ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಪೂರ್ವ ಮಳೆ ಸಹ ಆತಂಕ ತಂದಿಟ್ಟಿದೆ. ವಾಡಿಕೆಗಿಂತ ಪ್ರತಿಶತ 78 ರಷ್ಟು ಮಳೆಯ ಕೊರತೆ ಉಂಟಾಗಿರುವದು ಈ ಆತಂಕಕ್ಕೆ ಕಾರಣ. ಮಳೆಯ ತೀವ್ರ ಅಭಾವದಿಂದಾಗಿ ಈ ವೇಳೆಗೆ ಅಲ್ಲಲ್ಲಿ ಕಾಣುತ್ತಿದ್ದ ಕೃಷಿ ಚಟುವಟಕೆಗಳಿಗೆ ಗರ ಬಡಿದಿದೆ.

ಮಾರ್ಚ್‌, ಏಪ್ರಿಲ್ ಹಾಗೂ ಮೇ ತಿಂಗಳು ಮುಂಗಾರು ಪೂರ್ವ ಮಳೆಯ ಅವಧಿ. ಈ ಮೂರು ತಿಂಗಳಲ್ಲಿ ಬರುವ ಮಳೆ ಕೃಷಿ ಚಟುವಟಿಕೆಗಳಿಗೆ ನೀರು ನೀಡುತ್ತದೆ. ರೈತರು ಭೂಮಿ ಹಸನು ಮಾಡಿಕೊಳ್ಳುತ್ತಾರೆ. ಆದರಲ್ಲೂ ಮೇ ಎರಡನೇ ವಾರದಲ್ಲಿ ಬೀಳುವ ಮಳೆ ಕೃಷಿ ಕಾರ್ಯ ಬಹಳ ಜೋರಾಗಿ ನಡೆಯುವಂತೆ ಮಾಡುತ್ತದೆ.

ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯ ಕೆಲ ಭಾಗಗಳಲ್ಲಿ ಬಿದ್ದ ಅಡ್ಡ ಮಳೆ ರೈತ ಸಮುದಾಯದಲ್ಲಿ ಒಂದಿಷ್ಟು ಆಶಾಭಾವನೆ ಹುಟ್ಟಿಸಿತ್ತು. ಮೇ ತಿಂಗಳಲ್ಲಿ ಸಹ ಇದೇ ರೀತಿ ಮಳೆಯಾದರೆ ನಮ್ಮ ಬಿತ್ತನೆಗೆ ಸಮಸ್ಯೆ ಇಲ್ಲ ಎಂದೇ ರೈತರು ಭಾವಿಸಿದ್ದರು. ಆದರೆ ಮೇ ತಿಂಗಳಲ್ಲಿ ಮಳೆಯೇ ಬೀಳಲಿಲ್ಲ. ಇದರಿಂದ ಮತ್ತೆ ಬರದ ಭಯ ರೈತರಲ್ಲಿ ಮೂಡಿದೆ. ಮುಂಗಾರು ಪೂರ್ವ ಮಳೆಗೂ ಬರದ ಛಾಯೆ ಆವರಿಸಿದೆ.

ಕಳೆದ ಮೂರ್‍ನಾಲ್ಕು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಮುಂಗಾರು ಪೂರ್ವ ಮಳೆ ರೈತರ ಕೈಹಿಡಿದಿಲ್ಲ. ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿದ್ದರೆ ಇನ್ನೊಂದು ಕಡೆ ನೀರಿನ ಹಾಹಾಕಾರ ಹೆಚ್ಚಿದೆ. ಜಾನುವಾರುಗಳಿಗೆ ಕುಡಿಯುವ ನೀರಿನ ಜೊತೆಗೆ ಮೇವಿನ ಸಮಸ್ಯೆ ಆರಂಭವಾಗಿದೆ. ವಾಡಿಕೆಗೆ ಹತ್ತಿರವೂ ಇಲ್ಲ

ಸಾಮಾನ್ಯವಾಗಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಅವದಿಯಲ್ಲಿ ಅಂದರೆ ಮಾರ್ಚ್‌ ದಿಂದ ಮೇ ವರೆಗೆ ವಾಡಿಕೆಯಂತೆ ಶೇ.76 ರಷ್ಟು ಮಳೆಯಾಗಬೇಕು. ಆದರೆ ಈ ವರ್ಷ ಆಗಿದ್ದು ಕೇವಲ ಶೇ.17.1 ರಷ್ಟು ಮಾತ್ರ. ಆದರೆ ಕಳೆದ ವರ್ಷ ಅಂದರೆ 2018 ರಲ್ಲಿ ವಾಡಿಕೆಗಿಂತ ಶೇ.18 ರಷ್ಟು ಹೆಚ್ಚು ಮಳೆಯಾಗಿತ್ತು. ಆಗ ಸುಮಾರು 22 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಸಹ ನಡೆದಿತ್ತು. ಈ ವರ್ಷ ಮಳೆಯೇ ಆಗದ್ದರಿಂದ ಇದುವರೆಗೆ ಎಲ್ಲಿಯೂ ಬಿತ್ತನೆ ನಡೆದಿಲ್ಲ. ಅನೇಕ ಕಡೆ ಭೂಮಿ ಹಸನು ಮಾಡಿಕೊಳ್ಳುವ ಕಾರ್ಯಕ್ಕೆ ಚಾಲನೆಯೂ ಸಿಕ್ಕಿಲ್ಲ.

ಈ ವರ್ಷ ವಾಡಿಕೆಗಿಂತ ಬಹಳ ಕಡಿಮೆ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಪ್ರತಿ ವರ್ಷ ಮೇ ಎರಡನೇ ವಾರದಲ್ಲಿ ಉತ್ತಮ ಮುಂಗಾರು ಪೂರ್ವ ಮಳೆಯಾಗಿ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿದ್ದವು. ಆದರೆ ಈಗ ಅಂತಹ ಸ್ಥಿತಿ ಇಲ್ಲ. ಈಗಲೂ ಸಮಯ ಮೀರಿಲ್ಲ. ಒಳ್ಳೆಯ ಮಳೆ ಬಿದ್ದರೆ ಸೋಯಾ, ಹೆಸರು, ಉದ್ದು, ಮೊದಲಾದ ಬೆಳೆಗಳಿಗೆ ಬಹಳ ಅನುಕೂಲವಾಗುತ್ತದೆ. ರೈತರಿಗೆ ಕೃಷಿ ಚಟುವಟಿಕೆಗಳಿಗೆ ಬೇಕಾದ ಕೃಷಿ ಪರಿಕರಗಳನ್ನು ಒದಗಿಸಲು ಇಲಾಖೆಯಿಂದ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಎಚ್ ಮೊಕಾಸಿ ಉದಯವಾಣಿಗೆ ಹೇಳಿದರು.

ಕೃಷಿ ಇಲಾಖೆಯು ಪ್ರತಿ ವರ್ಷದಂತೆ ಬಿತ್ತನೆ ಕಾರ್ಯಕ್ಕೆ ಅಗತ್ಯವಾದ ಬೀಜ ಹಾಗೂ ಗೊಬ್ಬರ ದಾಸ್ತಾನು ಮಾಡಿಟ್ಟುಕೊಂಡಿದೆ. ರೈತರ ಅನುಕೂಲಕ್ಕಾಗಿ ಇಲಾಖೆಯು ಬೀಜ ಮತ್ತು ಗೊಬ್ಬರದ ವಿರರಣೆಗೆ 122 ಕೇಂದ್ರಗಳನ್ನು ಸ್ಥಾಪಿಸಿದೆ. ಆದರೆ ಮಳೆಯೇ ಇಲ್ಲದೆ ರೈತರು ಬೀಜ ಹಾಗೂ ಗೊಬ್ಬರದ ಖರೀದಿಗೆ ಮುಂದೆ ಬರುತ್ತಿಲ್ಲ.

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.