ಮಳೆ ಆರ್ಭಟ: ಮನೆಗಳಿಗೆ ನೀರು

|ಹೊಲಗದ್ದೆಗಳಲ್ಲಿ ನೀರೋನೀರು-ಜನಜೀವನ ಅಸ್ತವ್ಯಸ್ತ |ತುಂಬಿ ಹರಿಯುತ್ತಿದೆ ಬಳ್ಳಾರಿ ನಾಲಾ

Team Udayavani, Jul 1, 2019, 9:53 AM IST

bg-tdy-1..

ಬೆಳಗಾವಿ: ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರನ್ನು ಹೊರ ಚೆಲ್ಲುತ್ತಿರುವ ಜನ.

ಬೆಳಗಾವಿ: ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ರವಿವಾರವೂ ಮುಂದುವರಿದಿದ್ದು, ನಗರದ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಯಿತು. ಜತೆಗೆ ಜಿಲ್ಲಾಸ್ಪತ್ರೆಯಲ್ಲಿ ನೀರು ನುಗ್ಗಿ ರೋಗಿಗಳು ಪರದಾಡುವಂತಾಯಿತು.

ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದ ರೈತರು ಮೊಗದಲ್ಲಿ ಸಂತಸ ಮೂಡಿದ್ದು, ಹೊಲಕ್ಕೂ ಕಾಲಿಡದಂಥ ಸ್ಥಿತಿ ನಿರ್ಮಾಣವಾಗಿದೆ. ಶನಿವಾರ ಮಧ್ಯರಾತ್ರಿಯಿಂದಲೂ ಮಳೆ ಶುರುವಾಗಿದ್ದು, ಎಡೆಬಿಡದೇ ಮಳೆ ಆಗುತ್ತಿದೆ. ಜಿಲ್ಲೆಯ ಬಹುತೇಕ ಹಳ್ಳಿಗಳಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ.

ನಗರದ ಜಿಲ್ಲಾಸ್ಪತ್ತೆಯ ಹೊರ ರೋಗಿಗಳ ವಿಭಾಗದಲ್ಲಿ ನೀರು ನುಗ್ಗಿ ರೋಗಿಗಳು ಪರದಾಡುವಂತಾಯಿತು. ನೀರು ನುಗ್ಗಿದ್ದರಿಂದ ರೋಗಿಗಳು ಹಾಗೂ ವೈದ್ಯರು ಒಳ ಹೋಗಲು ಕಸರತ್ತು ನಡೆಸಬೇಕಾಗಿದೆ. ಒಳ ಭಾಗದಲ್ಲಿ ನೀರು ನಿಂತಿದ್ದರಿಂದ ರೋಗಿಗಳ ಸಂಬಂಧಿಕರು ಹಾಗೂ ಸಿಬ್ಬಂದಿ ಕೆಲವು ಕಲ್ಲುಗಳನ್ನು ಇಟ್ಟಿದ್ದಾರೆ. ಅದರ ಮೇಲೆಯೇ ನಡೆದುಕೊಂಡು ಒಳ ಹೋಗುತ್ತಿದ್ದಾರೆ.

ಮನೆಗಳಿಗೆ ನುಗ್ಗಿದ ನೀರು: ನಗರದ ಬಹುತೇಕ ತಗ್ಗು ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿ ತೊಂದರೆಯನ್ನುಂಟು ಮಾಡಿದೆ. ಮಳೆ ನೀರು ಒಳಗೆ ಬಂದಿದ್ದರಿಂದ ಜನರು ನೀರು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಗಾಂಧೀ ನಗರ, ಮಾರುತಿ ನಗರ, ಎಸ್‌ಸಿ ಮೋಟರ್ ಹಿಂಭಾಗ ಸೇರಿದಂತೆ ಅನೇಕ ಕಡೆಗೆ ನೀರು ನಿಂತಿದೆ. ಮುಖ್ಯ ರಸ್ತೆಯಿಂದ ಮನೆಗಳಿಗೆ ಹೋಗುವ ಮಾಗ್‌ದಲ್ಲಿಯೂ ನೀರು ನಿಂತಿದೆ. ಮಲಪ್ರಭಾ ನಗರ, ಶಾಸ್ತ್ರಿ ನಗರದ ಮನೆಗಳಿಗೂ ನೀರು ನುಗ್ಗಿದೆ.

ಧರೆಗುರುಳಿದ ಮರಗಳು: ಟಿಳಕವಾಡಿಯಲ್ಲಿರುವ ಜ್ಞಾನೇಶ ಕಾಮತ ಅವರಿಗೆ ಸೇರಿದ ಶಾಂತಾದುರ್ಗ ಟ್ರೇಡರ್ ಅಂಗಡಿ ಮೇಲೆ ಮರ ಬಿದ್ದಿದೆ. ಹೀಗಾಗಿ ಅಂಗಡಿಯ ಬಿಡಿ ಭಾಗಗಳು, ಗಾಜು ಒಡೆದು ತೊಂದರೆಯಾಗಿದೆ. ಜತೆಗೆ ಕ್ಲಬ್‌ ರಸ್ತೆಯಲ್ಲಿರುವ ಗಿರಿಯಾಜ್‌ ಮಳಿಗೆ ಎದುರಿನ ಬೃಹತ್‌ ಮರ ಧರೆಗುರುಳಿದೆ.

ಬೆಳಗಾವಿ ತಾಲೂಕಿನ ಬಸವನ ಕುಡಚಿ, ಸಾಂಬ್ರಾ, ನಿಲಜಿ, ಬಾಳೇಕುಂದ್ರಿ, ಮಾರಿಹಾಳ, ಸುಳೇಭಾವಿ, ಮೋದಗಾ, ಮುಚ್ಚಂಡಿ, ಕಣಬರ್ಗಿ, ಚಂದಗಡ, ಕಣಬರ್ಗಿ, ಚಂದೂರ, ಕಬಲಾಪುರ, ತುಮ್ಮರಗುದ್ದಿ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಎರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಬಳ್ಳಾರಿ ನಾಲಾ ತುಂಬಿ ಹರಿಯುತ್ತಿದೆ. ಖಾನಾಪುರ ತಾಲೂಕಿನಲ್ಲಿಯೂ ಎರಡು ದಿನದಿಂದ ಸತತ ಮಳೆ ಆಗುತ್ತಿದೆ. ಮಲಪ್ರಭಾ ನದಿ ತುಂಬಿ ಹರಿಯುತ್ತಿದ್ದು, ತಾಲೂಕಿನ ಹಳ್ಳ-ಕೊಳ್ಳಗಳಲ್ಲಿಯೂ ನೀರು ತುಂಬಿಕೊಂಡಿದೆ. ಹೊರಗೆ ಬರಲಾರದಷ್ಟು ಮಲೆ ಆಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಶಿಥಿಲಗೊಂಡಿರುವ ಮನೆಗಳ ಗೋಡೆಗೂ ಕುಸಿದಿರುವ ವರದಿಯಾಗಿದೆ.

 

ನೀರು ಹೊರ ಚೆಲ್ಲುವುದೇ ಸಾಹಸ:

ನಗರದ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿದ್ದರಿಂದ ಹೊರ ಚೆಲ್ಲಲು ಸಾಹಸ ಮಾಡಬೇಕಾಗಿದೆ. ತಂಬಿಗೆ, ಬಕೆಟ್ದಿಂದ ನೀರನ್ನು ಹೊರ ಚೆಲ್ಲುತ್ತಿದ್ದಾರೆ. ರವಿವಾರ ಬೆಳಗಿನ ಜಾವ ಜೋರಾಗಿ ಮಳೆ ಬಂದಿದ್ದರಿಂದ ಮನೆಗಳಿಗೆ ನೀರು ನುಗ್ಗಿದೆ. ಹೀಗಾಗಿ ಮನೆ ಮಂದಿಯೆಲ್ಲ ರಾತ್ರಿ ಇಡೀ ಜಾಗರಣೆ ಮಾಡಬೇಕಾದ ಸ್ಥಿತಿಯೂ ನಿರ್ಮಾಣವಾಗಿತ್ತು. ಶಾಸ್ತ್ರಿ ನಗರ, ಮಾರುತಿ ನಗರದ ಸುತ್ತಲೂ ಅನೇಕ ಮನೆಗಳು ಜಲಾವೃತಗೊಂಡಿದ್ದವು.
ಮಳೆಗೆ ಮುರಿದು ಬಿದ್ದ ಕೊಟ್ಟಿಗೆ:

ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ನಗರದ ವಡಗಾಂವಿಯ ರೈತ ಗಲ್ಲಿಯಲ್ಲಿ ಜಾನುವಾರು ಕಟ್ಟುವ ಕೊಟ್ಟಿಗೆ ಮುರಿದು ಬಿದ್ದು ದನ ಗಾಯಗೊಂಡಿದೆ. ರೈತ ಗಲ್ಲಿಯ ಗಜಾನನ ಕಲ್ಲಪ್ಪ ಬಿರ್ಜೆ ಎಂಬವರಿಗೆ ಸೇರಿದ ಈ ಕೊಟ್ಟಿಗೆ ಕುಸಿದು ಬಿದ್ದಿದ್ದರಿಂದ ಕೊಟ್ಟಿಗೆ ಒಳಗೆ ಕಟ್ಟಿದ್ದ ಏಳು ತಿಂಗಳ ಗರ್ಭಿಣಿ ದನದ ಕಾಲು ಹಾಗೂ ತಲೆಗೆ ಭಾರೀ ಪೆಟ್ಟಾಗಿದೆ. ಸಂಪೂರ್ಣ ಕೊಟ್ಟಿಗೆ ಮುರಿದು ಬಿದ್ದಿದ್ದರಿಂದ ಸಾವಿರಾರು ರೂ. ಹಾನಿ ಸಂಭವಿಸಿದೆ.
ಹೊಲ-ಗದ್ದೆಗಳೆಲ್ಲ ಜಲಾವೃತ:

ಧಾರಾಕಾರ ಮಳೆ ಸುರಿದಿದ್ದರಿಂದ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಹೊಲ-ಗದ್ದೆಗಳೆಲ್ಲ ಜಲಾವೃತಗೊಂಡಿವೆ. ಬಳ್ಳಾರಿ ನಾಲಾ ಸುತ್ತಲಿನ ಹೊಲಗಳಲ್ಲಿ ನೀರು ನಿಂತಿದೆ. ಬಿಸಿಲನ ಬೇಗೆಯಿಂದ ಬೆಂದಿದ್ದ ರೈತರ ಮೊಗದಲ್ಲಿ ಸಂತಸ ಮೂಡಿದೆ. ಮುಂಗಾರು ಮಳೆ ಎಡೆಬಿಡದೇ ಸುರಿಯುತ್ತಿರುವುದರಿಂದ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.