ಮಳೆ ಅವಾಂತರ: ಮನೆಗೆ ನುಗ್ಗಿದ ನೀರು
•ಜಿಲ್ಲಾಸ್ಪತ್ರೆ ಆವರಣದಲ್ಲಿ ಧರೆಗುರುಳಿದ ಮರ•ಕೋನವಾಳ ಗಲ್ಲಿಗೆ ಶಾಸಕ ಬೆನಕೆ ಭೇಟಿ
Team Udayavani, Aug 3, 2019, 11:09 AM IST
ಬೆಳಗಾವಿ: ಕೋನವಾಳ ಗಲ್ಲಿಯ ನಾಲಾ ಕಾಂಪೌಂಡ್ ಒಡೆದು ಮನೆಗಳಿಗೆ ನೀರು ನುಗ್ಗಿದ ಸ್ಥಳಕ್ಕೆ ಶಾಸಕ ಅಣಿಲ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿ: ಒಂದು ದಿನದ ಮಟ್ಟಿಗೆ ತುಸು ಶಾಂತವಾಗಿದ್ದ ವರುಣರಾಯ ಶುಕ್ರವಾರ ಮತ್ತೆ ಅಬ್ಬರಿಸಿದ್ದು, ಬೆಳಗಿನ ಜಾವದಿಂದಲೂ ಎಡೆಬಿಡದೇ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ರಭಸದ ಗಾಳಿ-ಮಳೆಯಿಂದಾಗಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಬೃಹತ್ ಮರವೊಂದು ಧರೆಗುರುಳಿದೆ.
ಶುಕ್ರವಾರ ಬೆಳಗ್ಗೆಯಿಂದ ಸ್ವಲ್ಪವೂ ನಿಲ್ಲದೇ ಧಾರಾಕಾರ ಮಳೆ ಸುರಿಯಿತು. ಎಂದಿನಂತೆ ನಗರದ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಮಳೆ ಅವಾಂತರ ಸೃಷ್ಟಿಸಿತು. ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಮರ ನೆಲಕ್ಕುರುಳಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಳೆಯಿಂದ ನಗರದ ಮರಾಠಾ ಕಾಲೋನಿ, ಸಮರ್ಥ ನಗರ, ಚೌಗುಲೆವಾಡಿ, ದ್ವಾರಕಾ ನಗರ, ವಡಗಾಂವಿಯ ಮಲಪ್ರಭಾ ನಗರ, ಪರಮೇಶ್ವರ ನಗರ, ಕಪಿಲೇಶ್ವರ ಕಾಲೋನಿ, ಮಾರುತಿ ನಗರ, ನಾನಾವಾಡಿ. ಅನಗೋಳದ ಕುರುಬರ ಗಲ್ಲಿ ಸೇರಿದಂತೆ ಬಹುತೇಕ ಪ್ರದೇಶ ಹಾಗೂ ಬಡಾವಣೆಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಯಿತು. ಬೆಳಗ್ಗೆಯಿಂದ ಈ ಭಾಗದ ನಿವಾಸಿಗಳು ಮನೆಗೆ ನುಗ್ಗಿದ ನೀರು ಹೊರ ಚೆಲ್ಲುವುದರಲ್ಲಿಯೇ ನಿರತರಾಗಿದ್ದರು.
ನಗರದಲ್ಲಿ ಸುರಿಯುತ್ತಿರುವ ಅತಿ ಮಳೆಯಿಂದಾಗಿ ಕೋನವಾಳ ಗಲ್ಲಿಯಲ್ಲಿನ ನಾಲಾ ಕೌಂಪೌಂಡ್ ಕುಸಿದು ಬಿದ್ದು ನಾಲಾದಲ್ಲಿನ ನೀರು ಹತ್ತಿರದ ಮನೆಗಳಿಗೆ ನುಗ್ಗಿದೆ. ಸ್ಥಳಕ್ಕೆ ಶಾಸಕ ಅನಿಲ ಬೆನಕೆ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕ ಅನಿಲ ಬೆನಕೆ ಮಾತನಾಡಿ, ಕಳೆದ 10 ವರ್ಷಗಳ ಅವಧಿಯಲ್ಲಿ ಆಡಳಿತ ವೈಫಲ್ಯದಿಂದಾಗಿ ನಗರದ ಪ್ರಮುಖ ನಾಲೆಗಳಲ್ಲಿ ಒಂದಾದ ಕೋನವಾಳ ಗಲ್ಲಿ ನಾಲಾ ಕಾಮಗಾರಿ ನಿರ್ಲಕ್ಷಿಸಲಾಗಿದೆ. ಹೀಗಾಗಿ ನಾಲಾ ಕೌಂಪೌಂಡ್ ಕುಸಿದು ಬಿದ್ದಿದೆ. ಇದರ ನೀರು ಕೋನವಾಳ ಗಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನುಗ್ಗಿದೆ ಎಂದರು.
ಬಳಿಕ ಸ್ಥಳಕ್ಕೆ ಬಂದ ಹಾಗೂ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಅವರು ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಮಾಹಿತಿ ಪಡೆದುಕೊಂಡು ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಹೇಳಿದರು. ಮಾಜಿ ಮೇಯರ್ ಸರಿತಾ ಪಾಟೀಲ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ