12ರಿಂದ ರಾಯಣ್ಣ ಉತ್ಸವ


Team Udayavani, Dec 25, 2019, 12:10 PM IST

bg-tdy-2

ಬೈಲಹೊಂಗಲ: ಜ.12, 13 ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ಅದ್ಧೂರಿಯಿಂದ ಆಚರಿಸಲಾಗುವುದು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ಮಂಗಳವಾರ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ಉತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ವತಿಯಿಂದ ಜರುಗಿದ ಪೂರ್ವಭಾವಿ ಸಭೆಯಲ್ಲಿ ಯನ್ನುದ್ದೇಶಿಸಿ ಮಾತನಾಡಿ, ಉತ್ಸವವನ್ನು ಅದ್ದೂರಿಯಾಗಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೆಚ್ಚಿನ ಅನುದಾನ ನೀಡಲು ಒತ್ತಾಯಿಸಲಾಗುವುದು ಎಂದರು.

ಈಗಾಗಲೇ 20 ಲಕ್ಷ ರೂ ಬಿಡುಗಡೆಯಾಗಿದೆ. ಇನ್ನೂ 10 ಲಕ್ಷ ರೂ. ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು. ಕಾರ್ಯಕ್ರಮಕ್ಕೆ ಇನ್ಫೋಸಿಸ್‌ ಮುಖ್ಯಸ್ಥೆ ಸುಧಾಮೂರ್ತಿ, ಸಚಿವರು, ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.

ಉತ್ಸವದ ಕಾರ್ಯಕ್ರಮಗಳಲ್ಲಿ ಮ್ಯಾಜಿಕ ಹಾಗೂ ಗ್ರಾಮೀಣ ಕಲೆಗೆ ಹೆಚ್ಚಿನ ಒತ್ತು ನೀಡಿ, ಕಲಾ ವಾಹಿನಿ ತಂಡಗಳ, ಸಾಂಸ್ಕೃತಿಕ ಕಾರ್ಯಕ್ರಮ, ವಾಲಿಬಾಲ್‌, ಕುಸ್ತಿ, ಕಬಡ್ಡಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗುವುದು. ಗ್ರಾಮಸ್ಥರು ಗ್ರಾಮವನ್ನು ನಿರಂತರವಾಗಿ ಸ್ವತ್ಛವಾಗಿಟ್ಟುಕೊಳ್ಳಬೇಕು ಎಂದರು.

ಮುಂಬರುವ ದಿನಗಳಲ್ಲಿ ಗ್ರಾಮದ ರಸ್ತೆ, ಚರಂಡಿ, ಕುಡಿಯುವ ನೀರು ಹಾಗೂ ಇನ್ನೀತರ ಅಭಿವೃದ್ಧಿ ಕಾಮಗಾರಿಗಳಿಗಾಗಿ ಗ್ರಾಪಂ ಕ್ರಮ ಕೈಗೊಳ್ಳಬೇಕು. ಉತ್ಸವಕ್ಕೆ ಗ್ರಾಮಸ್ಥರು ಹೆಚ್ಚಿನ ಸಹಕಾರ ನೀಡಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ವಿನಂತಿಸಿಕೊಂಡರು.

ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮಾತನಾಡಿ, ಉತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಉತ್ಸವದ ಕಾರ್ಯಕ್ರಮ ಅದ್ಧೂರಿಯಿಂದ ನಡೆಯಲು ಉಪ ಸಮಿತಿ ರಚಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಹೆಸರು ನೋಂದಾಯಿಸಬೇಕು. ಉತ್ಸವದ ನಿಮಿತ್ತ ಗ್ರಾಮಸ್ಥರು ತಳಿರು ತೊರಣಗಳಿಂದ ಗ್ರಾಮವನ್ನು ಶೃಂಗರಿಸಬೇಕು ಎಂದರು. ಸಂಗೊಳ್ಳಿ ರಾಯಣ್ಣ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು. ಸ್ಥಳೀಯ, ತಾಲೂಕಿನ ಯೋಧರನ್ನು ಗೌರವಿಸಬೇಕು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಬೇಕು. ಉತ್ಸವದ ದಿನಗಳಲ್ಲಿ ಗ್ರಾಮಕ್ಕೆ ಹೆಚ್ಚಿನ ಬಸ್‌ ಸೌಕರ್ಯ ನೀಡಬೇಕು. ರಾಯಣ್ಣ ಅಭಿಮಾನಿಗಳನ್ನು ಗುರುತಿಸಿ ಸನ್ಮಾನಿಸಬೇಕು. ಕಲಾವಿದರಿಗೆ ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಬೇಕು. ಹಿಂದಿನ ವರ್ಷ ಉತ್ಸವಕ್ಕೆ ಪೆಂಡಾಲ್‌, ಇತರ ವ್ಯವಸ್ಥೆ ಕಲ್ಪಿಸಿದವರ ಬಾಕಿ ಹಣ ಸಂದಾಯ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದರು.

ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ತಹಶೀಲ್ದಾರ್‌ ಡಾ.ದೊಡ್ಡಪ್ಪ ಹೂಗಾರ, ಜಿಪಂ ಸದಸ್ಯ ಅನಿಲ ಮೆಕಲಮರ್ಡಿ, ಸದಸ್ಯ ಗೌಸಸಾಬ ಬುಡ್ಡೆಮುಲ್ಲಾ, ಇಒ ಸಮೀರ ಮುಲ್ಲಾ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಹಳೆಮನಿ, ಉಪಾಧ್ಯಕ್ಷ ಬಸವರಾಜ ಕೊಡ್ಲಿ, ಅರುಣ ಯಲಿಗಾರ, ಬಸವರಾಜ ಡೊಳ್ಳಿನ, ಸುನೀಲ ಕುಲಕರ್ಣಿ ಇತರರು ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.