ನೆರೆಗೆ ಮತ್ತೆ ತತ್ತರಿಸಿದ ರಾಮದುರ್ಗ


Team Udayavani, Sep 9, 2019, 10:26 AM IST

bg-tdy-1

ರಾಮದುರ್ಗ: ನವಿಲು ತೀರ್ಥ ಅಣೆಕಟ್ಟಿನಿಂದ ಅಧಿಕ ನೀರು ಹರಿಬಿಟ್ಟ ಕಾರಣ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಮಲಪ್ರಭೆ.

ರಾಮದುರ್ಗ: ‘ಹೋದೆಯಾ ಪಿಶಾಚಿ ಎಂದರೆ ಮತ್ತೇ ಬಂದೆಯಾ ರಾಕ್ಷಸಿ’ ಎನ್ನುವಂತಾಗಿದೆ ಪ್ರವಾಹ ಸಂತ್ರಸ್ತರ ಬದುಕು. ಪ್ರವಾಹದ ಕಹಿ ನೆನಪು ಮಾಸುವ ಮೊದಲೇ ಮತ್ತೆ ಪ್ರವಾಹದ ಕಾರ್ಮೋಡ ಕವಿದಿದೆ.

ಆಗಸ್ಟ್‌ ತಿಂಗಳ ಮೊದಲ ವಾರದಲ್ಲಿ ಉಂಟಾದ ಪ್ರವಾಹ ಈಗ ಮತ್ತೆ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಪ್ರಾರಂಭವಾಗಿದ್ದು, ಕಳೆದೊಂದು ತಿಂಗಳಿಂದ ಸಂಕಷ್ಟ ಅನುಭವಿಸಿದ ನಿರಾಶ್ರಿತರು ಮತ್ತೆ ಆತಂಕಕ್ಕೆ ಪಡುವಂತೆ ಮಾಡಿದೆ. ಮುಂದೆ ನಮ್ಮ ಗತಿ ಏನಪ್ಪಾ ಎಂದು ತಲೆ ಮೇಲೆ ಕೈ ಇಟ್ಟುಕೊಂಡು ಕುಳಿತುಕೊಳ್ಳುವಂತೆ ಮಾಡಿದೆ ‘ಮಹಾ’ ಪ್ರವಾಹ. ಖಾನಾಪುರ ವ್ಯಾಪ್ತಿಯ ಸುತ್ತಮುತ್ತ ಭಾರಿ ಮಳೆ ಬೀಳುತ್ತಿರುವ ಕಾರಣದಿಂದಾಗಿ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ನಮೀಲು ತೀರ್ಥ ಡ್ಯಾಂನಿಂದ ಈಗಾಗಲೇ 20 ಸಾವಿರ ಕ್ಯೂಸೆಕ್‌ಗಿಂತ ಅಧಿಕ ನೀರನ್ನು ಹೊರಬಿಡಲಾಗಿದೆ. ತಾಲೂಕಿನ 29 ಗ್ರಾಮಗಳ ಹಾಗೂ ಪಟ್ಟಣದ ನಾಲ್ಕೈದು ವಾರ್ಡ್‌ಗಳಲ್ಲಿನ ಜನತೆ ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳು ಸೂಚಿಸುತ್ತಿದ್ದಾರೆ.

ಸೇತುವೆಗಳು ಜಲಾವೃತ: ಪ್ರವಾಹದಿಂದಾಗಿ ಕಳೆದ 4 ದಿನಗಳಿಂದ ಪಟ್ಟಣದ ವೆಂಕಟೇಶ್ವರ ದೇವಸ್ಥಾನ ಹತ್ತಿರದ ಹಳೇ ಸೇತುವೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ. ಇನ್ನೂ ರಾಮದುರ್ಗದಿಂದ ಘಟಕನೂರಕ್ಕೆ ಸಂಪರ್ಕ ಕಲ್ಪಿಸುವ ಒಳ ರಸ್ತೆಯ ಸೇತುವೆ ಹಾಗೂ ಹಂಪಿಹೊಳಿ-ಬೆನ್ನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸೇತುವೆ ಸಂಪರ್ಕ ಕಡಿತಗೊಂಡಿವೆ.

ನೀರು ಹೆಚ್ಚಾದರೆ ರಸ್ತೆ ಸಂಚಾರ ಕಡಿತ: ಈಗ 20 ಸಾವಿರ ಕ್ಯೂಸೆಕ್‌ ನೀರು ಹರಿಬಿಟ್ಟ ಕಾರಣ ಈಗಾಗಲೇ ಗ್ರಾಮೀಣ ಪ್ರದೇಶದ ಕೆಲ ರಸ್ತೆಗಳ ಸಂಪರ್ಕ ಕಡಿತವಾಗಿದೆ. ಮಲಪ್ರಭೆ ಉಗಮ ಸ್ಥಾನವಾದ ಕಣಕುಂಬಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಒಳ ಹರಿವಿನ ಪ್ರಮಾಣ ಹೆಚ್ಚಾದಂತೆ ಅಧಿಕ ಪ್ರಮಾಣದ ನೀರನ್ನು ಬಿಟ್ಟರೆ ರಾಮದುರ್ಗದಿಂದ ತೆರಳುವ ಹುಬ್ಬಳ್ಳಿ ಹಾಗೂ ಬೆಳಗಾವಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳಲಿದೆ. ಕಳೆದ ಮೂರು ದಿನಗಳಿಂದ ನದಿಗೆ ಹರಿಬಿಡುತ್ತಿರುವ ನೀರಿನ ಪ್ರಮಾಣ ದಿನದಿಂದ-ದಿನಕ್ಕೆ ಹೆಚ್ಚುತ್ತಿದ್ದು, ಜನರಲ್ಲಿ ಇನ್ನೂ ಹೆಚ್ಚಿನ ಆತಂಕ ಮೂಡಿಸುತ್ತಿದೆ.

ನದಿ ಪಕ್ಕದ ಮನೆಗಳಿಗೆ ನುಗ್ಗಿದ ನೀರು: ಮಲಪ್ರಭಾ ನದಿಯ ಪಕ್ಕದ ಮನೆಗಳಿಗೆ ಈಗಾಗಲೇ ನೀರು ನುಗ್ಗಿದ್ದು, ಜನರೆಲ್ಲಾ ಮತ್ತೆ ಪರಿಹಾರ ಕೇಂದ್ರದತ್ತ ಮುಖ ಮಾಡಿದ್ದಾರೆ. ಇನ್ನೂ ಹೆಚ್ಚಿನ ನೀರು ಬಂದರೆ ಮನೆಗಳು ಸಂಪೂರ್ಣ ಜಲಾವೃತಗೊಂಡು ಅಳಿದುಳಿದ ಅವಶೇಷಗಳು ನೀರು ಪಾಲಾಗುವ ಸ್ಥಿತಿ ಬರಲಿದೆ.

ಆತಂಕದಲ್ಲಿ ನಿರಾಶ್ರಿತರು: ಕಳೆದ ತಿಂಗಳು ಉಂಟಾದ ಪ್ರವಾಹದಲ್ಲಿ ಮನೆ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿರುವ ನಿರಾಶ್ರಿತರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಶೆಡ್‌ ವ್ಯವಸ್ಥೆ ಮಾಡುವದಾಗಿ ಹೇಳಿರುವ ಮಾತು ಭರವಸೆಯಾಗಿದೆ ಹೊರತು ಕಾರ್ಯಗತವಾಗಿಲ್ಲ. ಹೀಗಿರುವಾಗಲೇ ಮತ್ತೆ ಪ್ರವಾಹ ಬಂದಿದ್ದು, ನಮ್ಮ ಗತಿ ಏನು? ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿನ ಜನತೆಗೆ ಈಗಾಗಲೇ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಮುನ್ನಚ್ಚೆರಿಕೆಯಾಗಿ ಒಂದು ಎನ್‌ಡಿಆರ್‌ಎಫ್‌ ತಂಡವನ್ನು ಕರೆಸಲಾಗಿದೆ. ನದಿಗೆ ಹೊಂದಿಕೊಂಡ ಕಿಲಬನೂರ, ಸುನ್ನಾಳ, ಹಂಪಿಹೊಳಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ನೀರು ಆವರಿಸಿಕೊಂಡಿದೆ. ಹೆಚ್ಚಿನ ನೀರು ಬಂದರೂ ಮುಂದೆ ಜನತೆಗೆ ಯಾವುದೇ ಸಮಸ್ಯೆಯಾಗದಂತೆ ತಾಲೂಕಾಡಳಿತದಿಂದ ಎಲ್ಲ ಸಿದ್ಧತೆ ಮಾಡಲಾಗಿದೆ. • ಬಸನಗೌಡ ಕೋಟುರ, ತಹಶೀಲ್ದಾರ್‌, ರಾಮದುರ್ಗ
ಈಗಾಗಲೇ ಪ್ರವಾಹ ಪೀಡಿತ 30 ಗ್ರಾಮಗಳ ಹಾಗೂ ಪಟ್ಟಣದಲ್ಲಿನ ವಿವಿಧ ವಾರ್ಡ್‌ಗಳಲ್ಲಿನ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಹೇಳಲಾಗಿದೆ. ಜನತೆಗೆ ತೊಂದರೆಯಾಗದಂತೆ, ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನತೆಯ ಸುರಕ್ಷತೆಗೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಮಾಡಲು ಕ್ರಮವಹಿಸಲಾಗಿದೆ. • ಮಹಾದೇವಪ್ಪ ಯಾದವಾಡ, ರಾಮದುರ್ಗ ಶಾಸಕ
• ಈರನಗೌಡ ಪಾಟೀಲ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.