10ರಂದು ರಾಮನವಮಿ ಶೋಭಾಯಾತ್ರೆ: ಜೊಲ್ಲೆ

ನಿಪ್ಪಾಣಿಯಲ್ಲಿ ಭವ್ಯ ಮೆರವಣಿಗೆಗೆ ಸಿದ್ಧತೆ

Team Udayavani, Apr 7, 2022, 12:53 PM IST

12

ಚಿಕ್ಕೋಡಿ: ನಿಪ್ಪಾಣಿ ನಗರದಲ್ಲಿ ಏ.10ರಂದು ರಾಮನವಮಿ ಅಂಗವಾಗಿ ಶ್ರೀರಾಮ ಸೇನಾ ಹಿಂದೂಸ್ಥಾನದಿಂದ ಭವ್ಯ ಶೋಭಾಯಾತ್ರೆಯನ್ನು ಆಯೋಜಿಸಿದ್ದು ಇದನ್ನು ಯಶಸ್ವಿಯಾಗಿಸಲು ಎಲ್ಲರೂ ಶ್ರಮಿಸಬೇಕು ಎಂದು ಮುಜರಾಯಿ, ವಕ್ಫ್‌ ಹಾಗೂ ಹಜ್‌ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ರಾಮನವಮಿ ಅಂಗವಾಗಿ ನಿಪ್ಪಾಣಿ ನಗರದಲ್ಲಿ ಜರುಗಲಿರುವ ಶೋಭಾಯತ್ರೆ ಅಂಗವಾಗಿ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನೇಕತೆಯಲ್ಲಿ ಏಕತೆ ತೋರಿಸುವ ನಮ್ಮ ದೇಶದ ಸಂಸ್ಕೃತಿಯನ್ನು ಇಡೀ ಜಗತ್ತು ಎತ್ತಿ ಹಿಡಿದಿದೆ. ಸ್ವಾಮಿ ವಿವೇಕಾನಂದರು, ಛತ್ರಪತಿ ಶಿವಾಜಿ ಮಹಾರಾಜರು ಸೇರಿದಂತೆ ಹಲವಾರು ಯುಗ ಪುರುಷರು ನಮ್ಮ ಪಾವನ ಭೂಮಿಯಲ್ಲಿ ಜನಿಸಿದ ಪರಿಣಾಮ ಈ ಕಲಿಯುಗದಲ್ಲೂ ನಮ್ಮ ದೇಶದಲ್ಲಿ ಶಾಂತಿಯ ವಾತಾವರಣವಿದೆ ಎಂದರು.

ಈ ಶೋಭಾಯಾತ್ರೆಯಲ್ಲಿ ಎಲ್ಲರೂ ಕೇಸರಿ ಪೇಟ ಧರಿಸಿ. ಯುವತಿಯರು, ಮಹಿಳೆಯರು ಕೇಸರಿ ಸೀರೆ ತೊಟ್ಟುಕೊಳ್ಳಿ. ಈ ಬಾರಿ ಕೇಸರಿ ಪೇಟ ಮತ್ತು ಸೀರೆ ಕಲ್ಪಿಸಲು ಪ್ರಯತ್ನಿಸುವೆ. ಮುಂದಿನ ಬಾರಿ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೇಸರಿ ಪೇಟ ಮತ್ತು ಮಹಿಳೆಯರಿಗೆ ಕೇಸರಿ ಸೀರೆ ಕಲ್ಪಿಸಲಾಗುವುದು ಎಂದರು.

ಸ್ಥಳೀಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಚೇರ್ಮನ್‌, ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ ಮಾತನಾಡಿ, ಈ ಅದ್ದೂರಿ ಶೋಭಾಯಾತ್ರೆಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.

ಬಸವಜ್ಯೋತಿ ಯೂಥ್‌ ಫೌಂಡೇಶನ್‌ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ, ಈ ಶೋಭಾಯಾತ್ರೆಯಲ್ಲಿ ಸ್ಥಳೀಯರಿಂದ ಹಲವಾರು ರೂಪಕಗಳನ್ನು ಸಾದರಪಡಿಸಲಾಗುವುದು. ಅಲ್ಲದೆ ವಿವಿಧ ರಾಜ್ಯಗಳಿಂದ ರಾಮಲೀಲೆ, ನವಿಲು ಕುಣಿತ ಮೊದಲಾದ ರೂಪಕಗಳು ಆನೆ, ಕುದುರೆಗಳು, ಈ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿವೆ ಎಂದರು.

ಶ್ರೀರಾಮ ಸೇನೆ ಹಿಂದೂಸ್ಥಾನ್‌ ಜಿಲ್ಲಾ ಅಧ್ಯಕ್ಷ,ಕ ನ್ಯಾಯವಾದಿ ನಿಲೇಶ ಹತ್ತಿ ಮಾತನಾಡಿದರು. ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಅಭಯ ಮಾನವಿ, ರಾಜು ಗುಂದೇಶಾ, ಸಂತೋಷ ಸಾಂಗಾವಕರ, ಮಹಾದೇವ ರಾವುತ, ಪ್ರವೀನ ಶಹಾ, ಮೊದಲಾದವರು ಸಲಹೆ ಸೂಚನೆ ನೀಡಿದರು. ನಗರಸಭೆ ಉಪಾಧ್ಯಕ್ಷೆ ನೀತಾ ಬಾಗಡೆ ಮತ್ತು ಸದಸ್ಯರು, ಜೋತಿಪ್ರಸಾದ ಜೊಲ್ಲೆ, ಸಮಾಧಿ ಮಠದ ಚೇರ್ಮನ್‌ ಸುರೇಶ ಶೆಟ್ಟಿ, ಪ್ರನೀನ ಶಹಾ, ಪ್ರತಾಪ ಪಟ್ಟಣಶೆಟ್ಟಿ, ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ಪ್ರಣವ ಮಾನವಿ ಸ್ವಾಗತಿಸಿದರು. ಎಪಿಎಂಸಿ ಸದಸ್ಯ ಬಂಡಾ ಘೊರ್ಪಡೆ ನಿರೂಪಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.