ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡಲ್ಲ: ಈಶ್ವರಪ್ಪ ಸಮರ್ಥನೆ
Team Udayavani, Nov 28, 2021, 1:09 PM IST
ಬೆಳಗಾವಿ: ಯಾವುದೇ ಕಾರಣಕ್ಕೂ ರಮೇಶ್ ಜಾರಕಿಹೊಳಿ ಬಿಜೆಪಿಗೆ ಮೋಸ ಮಾಡುವುದಿಲ್ಲ. ಮೊದಲನೇ ವೋಟ್ ಬಿಜೆಪಿಗೆ, ಎರಡನೇ ವೋಟ್ ತಮ್ಮನಿಗೆ ಕೊಡಿ ಎಂದು ಅವರೇ ಸ್ಪಷ್ಟವಾಗಿ ಹೇಳ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಾರಕಿಹೊಳಿ ಸಹೋದರರನ್ನು ಸಮರ್ಥನೆ ಮಾಡಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಕಾಂಗ್ರೆಸ್ ನಲ್ಲೂ ಮೋಸ, ಬಿಜೆಪಿಯಲ್ಲೂ ಮೋಸ ಮಾಡಿತ್ತಿದ್ದಾರೆ ಎಂಬ ಲಕ್ಷ್ಮೀ ಹೆಬ್ಬಾಳಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ಇದ್ದಾಗ ಕಾಂಗ್ರೆಸ್ ಗೆ ಮೋಸ ಮಾಡಿದರೆಂದು ಅಂದು ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದರೇ? ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಂದಾಗ ಇದು ನೆನಪಾಗಿದೆ. ಸತ್ಯವನ್ನು ಸತ್ಯವಾಗಿ ಹೇಳಿದರೆ ಅದು ಸತ್ಯ. ಅದೇ ಸತ್ಯವನ್ನು ತಮಗೆ ಬೇಕಾದಂತೆ ತಿರುಚಿ ಹೇಳಿದರೆ ಹೇಗೆ? ಲಕ್ಷ್ಮೀ ಹೆಬ್ಬಾಳಕರಗೆ ಪಾಪ ತಡೆದುಕೊಳ್ಳಲು ಆಗಲ್ಲ ಏನ್ ಮಾಡೋದು ಎಂದು ವ್ಯಂಗ್ಯವಾಡಿದರು.
ಇದನ್ನೂ ಓದಿ:ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟಿನ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್
ಒಂದೇ ವೇದಿಕೆ ಯಲ್ಲಿ ರಮೇಶ್, ಲಖನ್ ಪ್ರತ್ಯೇಕ ಪ್ರಚಾರ ವಿಚಾರಕ್ಕೆ ಮಾತನಾಡಿದ ಅವರು, ಅಭ್ಯರ್ಥಿಯೊಬ್ಬರು ಏನು ಹೇಳಬೇಕು? ಮೊದಲ ಓಟ್ ತನಗೆ ಹಾಕು ಎನ್ನಬೇಕು ಅಷ್ಟೇ. ಯಾವ ಕಾರ್ಯಕರ್ತರಿಗೆ ಗೊಂದಲವಿಲ್ಲ. ಇಡೀ ದೇಶದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಗೊಂದಲವಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ