ವರಿಷ್ಠರ ಆಶೀರ್ವಾದ ಇಲ್ಲದಿದ್ದರೆ ನನ್ನನ್ನು ಮುಗಿಸಿ ಬಿಡುತ್ತಿದ್ದರು: ಜಾರಕಿಹೊಳಿ ಹೊಸ ಬಾಂಬ್
Team Udayavani, Dec 1, 2021, 3:58 PM IST
ಬೆಳಗಾವಿ: “ನನಗೆ ಬಿಜೆಪಿ ವರಿಷ್ಠರ ಆಶೀರ್ವಾದ ಮತ್ತು ಬೆಂಬಲ ಇದೆ. ಇಲ್ಲದಿದ್ದರೆ ಇಷ್ಟೊತ್ತಿಗೆ ನನ್ನನ್ನು ಮುಗಿಸಿ ಬಿಡುತ್ತಿದ್ದರು” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, “ಬಿಜೆಪಿ ಮತ್ತು ಅರ್ ಎಸ್ಎಸ್ ನಾಯಕರ ಆಶೀರ್ವಾದ ನನಗೆ ಇದೆ. ಹೀಗಾಗಿ ನಾನು ಧೈರ್ಯವಾಗಿ ಇದ್ದೇನೆ. ಇಲ್ಲದಿದ್ದರೆ ಷಡ್ಯಂತ್ರ ಮಾಡಿ ನನ್ನನ್ನು ಮುಗಿಸಿ ಬಿಡುತ್ತಿದ್ದರು” ಎಂದು ಹೇಳಿದರು.
ಇದನ್ನೂ ಓದಿ:ಶ್ರೀರಾಮನ ಮೊಮ್ಮಕ್ಕಳೆಂದು ಹೇಳಿಕೊಳ್ಳಲು ನಾಚಿಕೆಯಾಗಲ್ವಾ: BJP ವಿರುದ್ಧ ಧ್ರುವನಾರಾಯಣ ಕಿಡಿ
ತಮ್ಮ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಈಗ ಯಾವುದೇ ಉತ್ತರ ಕೊಡುವದಿಲ್ಲ. ಡಿಸೆಂಬರ್ 14 ರಂದು ಎಲ್ಲ ವಿವರ ನೀಡುತ್ತೇನೆ. 1985 ರಿಂದ ಹಿಡಿದು ಇಲ್ಲಿಯವರೆಗೆ ನಾನು ಮತ್ತು ನಮ್ಮ ಕುಟುಂಬ ಹಾಗೂ ಶಿವಕುಮಾರ ಮತ್ತು ಅವರ ಕುಟುಂಬ ಹೇಗಿತ್ತು ಎಂಬುದರ ಬಗ್ಗೆ ವಿವರವಾಗಿ ಹೇಳುತ್ತೇನೆ. ನಮ್ಮಿಬ್ಬರ ಮಧ್ಯೆ ಯುದ್ಧವೇ ನಡೆಯಲಿ” ಎಂದು ಕಟುವಾಗಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು