ರಮೇಶ್ ಜಾರಕಿಹೊಳಿ ಸಾಲದ ಸುಳಿಯಲ್ಲಿದ್ದಾರೆ: ಸತೀಶ್ ಜಾರಕಿಹೊಳಿ
Team Udayavani, Sep 20, 2019, 1:17 PM IST
ಬೆಳಗಾವಿ: ರಮೇಶ ಜಾರಕಿಹೊಳಿ ಈಗಾಗಲೇ ಖಾಲಿಯಾಗಿದ್ದಾರೆ. ನಾನು ಸಾಲದ ಸುಳಿಯಲ್ಲಿ ಇದ್ದೇನೆ ಎಂದು ಸ್ವತಃ ರಮೇಶ ಅವರೇ ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ, ರಮೇಶ್ ಜಾರಕಿಹೊಳಿ ಸಹೋದರ ಸತೀಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಹೆಸರು ಸಹ ಇ ಡಿ ವಿಚಾರಣೆಯ ಪ್ರಸ್ತಾಪದಲ್ಲಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿ ಈ ಮಾತನ್ನು ಹೇಳಿದರು.
ಕಾಂಗ್ರೆಸ್ ನಾಯಕರ ಮೇಲೆ ಉದ್ದೇಶ ಪೂರ್ವಕವಾಗಿ ಇ ಡಿ ಹಾಗೂ ದಾಳಿ ನಡೆಯುತ್ತಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಆರೋಪ ಮಾಡಿದರು.
ಇದು ರಾಜಕೀಯ ಪ್ರೇರಿತ ದಾಳಿ. ಕಾಂಗ್ರೆಸ್ ಗುರಿಯಾಗಿಟ್ಟುಕೊಂಡು ದಾಳಿ ಮಾಡಲಾಗುತ್ತಿದೆ ಎಂದರು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಅದರಲ್ಲಿ ಎರಡು ಮಾತಿಲ್ಲ. ಡಿ ಕೆ ಶಿವಕುಮಾರ ಸಮರ್ಥವಾಗಿ ವಿಚಾರಣೆ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಹೆಬ್ಬಾಳಕರ ಅವರ ಮೇಲೆ ಇ ಡಿ ವಿಚಾರಣೆ ನಡೆಯುತ್ತಿರುವ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ