ರಂಗೋಲಿಯಲ್ಲಿ ಅರಳಿದ ಸುಳೇಭಾವಿ ಶ್ರೀ ಮಹಾಲಕ್ಷ್ಮೀ, ಲಕ್ಷ್ಮೀ ಹೆಬ್ಬಾಳಕರ, ಚನ್ನರಾಜ
Team Udayavani, Jan 19, 2023, 1:12 PM IST
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ರಂಗೋಲಿ ಚಿತ್ತಾರ ಅರಳುತ್ತಿದ್ದು, ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ರಂಗೋಲಿಯಲ್ಲಿ ಮೂಡಿಸಲಾಗಿದೆ.
ಬೆಳಗಾವಿ ಗ್ರಾಮೀಣ ಉತ್ಸವ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದ ರಂಗೋಲಿ ಸ್ಪರ್ಧೆಯಲ್ಲಿ ಅನೇಕ ಚಿತ್ರಗಳು ರಂಗೋಲಿಯ ಚಿತ್ತಾರದಲ್ಲಿ ಮೂಡಿ ಬಂದಿವೆ.
ಇದನ್ನೂ ಓದಿ:ಕಾರು ಬಿಟ್ಟು ಮೆಟ್ರೋ ಹತ್ತಿ ಕಲ್ಯಾಣ ಮಂಟಪ ತಲುಪಿದ ಮದುಮಗಳು! ವಿಡಿಯೋ ವೈರಲ್
ಮನೆ ಮನೆ ಎದುರು ಬಿಡಿಸಿರುವ ರಂಗೋಲಿ ಚಿತ್ತಾರ ಮನಸೂರೆಗೊಂಡಿವೆ. ರವಿ ಮೂಲಂಗಿ ಅವರ ಮನೆಯಲ್ಲಿ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಯ ಚಿತ್ರ ರಂಗೋಲಿಯಲ್ಲಿ ಮನೋಜ್ಞವಾಗಿ ಅರಳಿದೆ. ಸುಳೇಭಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ ಸುಗಣೇನ್ನವರ ಅವರ ಮನೆ ಎದುರು ಲಕ್ಷ್ಮೀ ಹೆಬ್ಬಾಳಕರ ಹಾಗೂ ಚನ್ನರಾಜ ಹಟ್ಟಿಹೊಳಿ ರಂಗೋಲಿಯ ಚಿತ್ತಾರದಲ್ಲಿ ಮೂಡಿ ಬಂದಿವೆ. ಸೂಕ್ಷ್ಮವಾಗಿ ಈ ಚಿತ್ರಗಳನ್ನು ಬಿಡಿಸುವ ಮೂಲಕ ಗಮನ ಸೆಳೆದಿವೆ.
ಗ್ರಾಮದ ಬಹುತೇಕ ಮನೆಗಳ ಎದುರು ರಂಗೋಲಿ ಚಿತ್ರಗಳು ಮೂಡಿವೆ. ಎಲ್ಲರ ಮನಸೂರೆಗೊಳ್ಳುತ್ತಿವೆ. ನವಿಲು, ಶ್ರೀ ಕೃಷ್ಣ-ರಾಧೆ, ಕೊಳಲು ವಾದಕ ಸೇರಿದಂತೆ ವಿವಿಧ ಚಿತ್ರಗಳು ಮೂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ