ರೆಡ್ಡಿ ಸಮಾಜ ಶಿಕ್ಷಣಕ್ಕೆ ಆದ್ಯತೆ ನೀಡಲಿ

ಸಮಾಜ ಶಿಕ್ಷಣ-ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಮುಖ್ಯವಾಹಿನಿಗೆ ಬರಲಿ

Team Udayavani, Mar 16, 2022, 2:48 PM IST

10

ಬೆಳಗಾವಿ: ಕರ್ನಾಟಕದಲ್ಲಿ ಕನ್ನಡಿಗರಾಗಿ ಸಹೋದರತೆಯಿಂದ ಸಹಬಾಳ್ವೆ ಮಾಡುತ್ತಿರುವ ರೆಡ್ಡಿ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅಂದಾಗ ಮಾತ್ರ ಮುಂದಿನ ಪೀಳಿಗೆಗೆ ಭವಿಷ್ಯವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನಗರದಲ್ಲಿ ಕರ್ನಾಟಕ ರಾಜ್ಯ ರೆಡ್ಡಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕ ಹಾಗೂ ಬೆಳಗಾವಿ ಜಿಲ್ಲಾ ವೇಮನ ಸರಕಾರಿ ಅರೆ ಸರ್ಕಾರಿ ನೌಕರರ ಸಹಕಾರ ಸಂಘದ ಸಹಯೋಗದಲ್ಲಿ ನಡೆದ ರಾಜ್ಯ ಮಟ್ಟದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮುದಾಯದ ಒಳಿತಿಗಾಗಿ, ಒಗ್ಗಟ್ಟಿಗಾಗಿ ಇಂಥ ಸಂಘಗಳು ಬಹುಮುಖ್ಯ ಪಾತ್ರ ವಹಿಸುತ್ತವೆ. ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಮಾತನಾಡಿ, ರೆಡ್ಡಿ ಜನಾಂಗಕ್ಕೆ ಸಹಾಯ, ಸಹಕಾರ ನೀಡುವುದರೊಂದಿಗೆ ಜಾಗ ಮತ್ತು ಭವನದ ಸುಧಾರಣೆ ಮಾಡಲಾಗುವುದು ಎಂದರು.

ಮಾಜಿ ಶಾಸಕ ಎನ್‌.ಎಚ್‌. ಕೋನರೆಡ್ಡಿ ಮಾತನಾಡಿ, ನಮ್ಮ ಸಮಾಜ ಎಲ್ಲ ಸಮುದಾಯಗಳೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು ಸಹಬಾಳ್ವೆಗೆ ಹೆಸರಾಗಿದೆ ಎಂದರು.

ಎರೆಹೊಸಳ್ಳಿಯ ರೆಡ್ಡಿ ಗುರುಪೀಠದ ಶ್ರೀ ವೇಮನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಕನ್ನಡದ ಶರಣ ಪರಂಪರೆಯಲ್ಲಿ ಹೇಮರಡ್ಡಿ ಮಲ್ಲಮ್ಮ ಪ್ರಮುಖ ಸ್ಥಾನ ಪಡೆದಿದ್ದಾರೆ. ಹಾಗೆಯೇ ಆಧ್ಯಾತ್ಮದ ಉತ್ತುಂಗಕ್ಕೆ ಏರಿದ ವೇಮನರು ಕಾಯಕ ನಿಷ್ಠ, ಸತ್ಸಂಗದ ಮಹತ್ವ ಜನಸಾಮಾನ್ಯರಿಗೆ ತಿಳಿ ಹೇಳಿದ್ದಾರೆ. ಇಂದು ರೆಡ್ಡಿ ಸಮುದಾಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನಮಾನ ಸಿಕ್ಕಿಲ್ಲ. ಆ ನಿಟ್ಟಿನಲ್ಲಿ ಸಮುದಾಯದ ಮುಖಂಡರು ಹೆಚ್ಚಿನ ಆಸಕ್ತಿ ತೋರಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಹೇಳಿದರು.

ಮಾಜಿ ಶಾಸಕ ಆರ್‌.ವಿ. ಪಾಟೀಲ ಅವರು ವೆಬ್‌ಸೈಟ್‌ ಉದ್ಘಾಟಿಸಿದರು. ರಾಜ್ಯ ರೆಡ್ಡಿ ಕ್ಷೇಮಾಬಿವೃದ್ಧಿ ಸಂಘದ ಅಧ್ಯಕ್ಷ ಎಸ್‌.ಬಿ. ಮಾಚಾ ಅಧ್ಯಕ್ಷತೆ ವಹಿಸಿದ್ದರು. ಲೇಕ್‌ ವ್ಯೂ ಆಸ್ಪತ್ರೆಯ ಡಾ. ಗಿರೀಶ ಸೋನವಾಲ್ಕರ, ನಗರಾಭಿವೃದ್ಧಿ ಉಪ ಕಾರ್ಯದರ್ಶಿ ಜಗದೀಶ್‌ ರೆಡ್ಡಿ ಕೆ.ಎಸ್‌., ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಬಸವರಾಜ್‌ ಸೋಮಣ್ಣವರ, ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾದ ಗೀತಾ ಕೌಲಗಿ, ಎಸಿಪಿ ನಾರಾಯಣ ಬರಮನಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಶ್ರೀಕಾಂತ ರಡ್ಡಿ, ಆರ್‌.ಪಿ. ಒಂಟಗೋಡಿ, ಸಂಗಣ್ಣ ಸೊಣ್ಣದ, ಎನ್‌.ಬಿ. ಪಾಟೀಲ, ಜಿಲ್ಲಾ ಖಜಾನೆ ಅಧಿಕಾರಿ ಎಸ್‌ .ವಿ. ಹಳ್ಯಾಳ, ಡಿಡಿಪಿಐ ಬಸವರಾಜ ನಲವತವಾಡ, ರವಿ ದೇವರಡ್ಡಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ರವೀಂದ್ರ ಹಕಾಟೆ ಇತರರು ಇದ್ದರು. ಶ್ರೀಕಾಂತ ಯರಡ್ಡಿ ಸ್ವಾಗತಿಸಿದರು. ಆರ್‌.ಎಲ್‌. ಮಿರ್ಜಿ ನಿರೂಪಿಸಿದರು. ಅಶೋಕ ಅಣ್ಣಿಗೇರಿ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.