ಬೆಳಗಾವಿಯಲ್ಲಿ ತಗ್ಗಿದ ಮಳೆ ಆರ್ಭಟ : ಕೊಂಚ ನಿಟ್ಟುಸಿರು ಬಿಟ್ಟ ನಿರಾಶ್ರಿತರು
Team Udayavani, Jul 24, 2021, 1:31 PM IST
ಸಂಕೇಶ್ವರ: ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ ನದಿಗೆ ಪ್ರವಾಹ ಉಂಟಾಗಿ ಸಂಕೇಶ್ವರ ನಗರವು ಅರ್ಧದಷ್ಟು ಜಲಾವೃತ ವಾಗಿ ಹಳೆ ಸಂಕೇಶ್ವರ ನಗರವು ನಡುಗಡ್ಡೆಯಂತಾಗಿ ಪರಿವರ್ತನೆ ಗೊಂಡಿತ್ತು. ಹಲವಾರು ಕುಟುಂಬಗಳು ಈ ಜಲ ಪ್ರವಾಹಕ್ಕೆ ತುತ್ತಾಗಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ಸಾಮಗ್ರಿಗಳನ್ನು ಕಳೆದುಕೊಂಡು ನಿರ್ಗತಿಕರಾಗಿ ಕಾಳಜಿ ಕೇಂದ್ರಗಳಲ್ಲಿ ಸೇರಿಕೊಂಡಿದ್ದರು.
ಸಂಕೇಶ್ವರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಸುಮಾರು ಅಡಿಗಳಷ್ಟು ನೀರಿನ ಸೆಳೆತ ಉಂಟಾಗುವ ಮೂಲಕ ಅದರಲ್ಲಿ ಲಾರಿಯೊಂದು ಚಾಲಕ ಸಮೇತ ಮುಳಗಿತ್ತು. ಆದರೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ಅಧಿಕಾರಿಗಳ ಪ್ರಯತ್ನದಿಂದ ಲಾರಿಯ ಟಪ್ಪ ಮೇಲೆರಿ ರಕ್ಚಣೆ ಮಾಡುವಂತೆ ಮನವಿ ಮಾಡುತ್ತಿದ್ದ ಚಾಲಕನನ್ನು ರಕ್ಷಣೆ ಮಾಡಲಾಗಿದೆ. ಅದರಂತೆ ಶನಿವಾರ ಬೆಳಿಗಿನ ಜಾವು ಎಸ್.ಡಿ.ಆರ್.ಎಫ್ ತಂಡವು ಸಂಕೇಶ್ವರಕ್ಕೆ ಆಗಮಿಸಿ ನಡುಗಡ್ಡೆಯಂತ್ತಿದ್ದ ಹಳೆ ಸಂಕೇಶ್ವರದಲ್ಲಿ ಸಿಲುಕಿಕೊಂಡಿದ್ದ ಕೆಲವು ನಿರಾಶ್ರಿತರನ್ನು ಹೊರತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ