ಮನೆ ಹಂಚಿಕೆಗೆ ನಿರಾಶ್ರಿತರ ಮನವಿ


Team Udayavani, May 14, 2019, 1:08 PM IST

bel-2

ಬೆಳಗಾವಿ: ಇಲ್ಲಿಯ ಶ್ರೀನಗರ ಬಳಿ ರಾಜು ಆವಾಸ್‌ ಯೋಜನೆಯಡಿ ನಿರ್ಮಿಸಿದ 272 ಬಹುಮಹಡಿ ಕಟ್ಟಡಗಳನ್ನು ವಂಟಮೂರಿ ಜೋಪಡಪಟ್ಟಿ ನಿರಾಶ್ರಿತರಿಗೆ ಹಂಚಿಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ವಂಟಮೂರಿ ಕಾಲೋನಿ ಜೋಪಡಪಟ್ಟಿಯಲ್ಲಿ ಸುಮಾರು 20-25 ವರ್ಷಗಳಿಂದ ನಿರಾಶ್ರಿತರಾಗಿ ವಾಸವಾಗಿದ್ದು, ಈವರೆಗೆ ಯಾವುದೇ ಆಶ್ರಯವಿಲ್ಲದೇ ಜೀವನ ಸಾಗಿಸುತ್ತಿದ್ದೇವೆ. ರಾಜು ಆವಾಸ್‌ ಯೋಜನೆಯಡಿ ಜಿ ಪ್ಲಸ್‌ 3 ಯೋಜನೆಯಡಿ ಅರ್ಜಿ ತುಂಬಿ ಎಲ್ಲ ದಾಖಲಾತಿಗಳನ್ನು ಲಗತ್ತಿಸಿ ಕೊಡಲಾಗಿದೆ. ಆಗಿನ ಜಿಲ್ಲಾಧಿಕಾರಿ ಎನ್‌. ಜಯರಾಮ್‌ ಅವರು ಶ್ರೀನಗರ ಗಾರ್ಡನ್‌ ಬಳಿಯ ಆಶ್ರಯ ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ದೂರಿದರು.

ಆಶ್ರಯ ಮನೆಗಳಿಗೆ ಹಣ ತುಂಬಲು ಸಿದ್ಧರಿದ್ದರೂ ನಮಗೆ ಚಲನ್‌ ನೀಡದೇ, ನಮ್ಮ ಅಹವಾಲು ಸ್ವೀಕರಿಸದೇ, ಅರ್ಹ ಫಲಾನುಭವಿಗಳನ್ನು ಬದಿಗಿಟ್ಟು ತರಾತುರಿಯಲ್ಲಿ ಬೇರೆಯವರಿಂದ ಅರ್ಜಿ ತುಂಬಿಸಿಕೊಂಡಿದ್ದಾರೆ. ಮಹಾನಗರ ಪಾಲಿಕೆಯವರು ಸರಿಯಾದ ಮಾಹಿತಿ ನೀಡುತ್ತಿಲ್ಲ. ಜನಪ್ರತಿನಿಧಿಗಳನ್ನು ಕೇಳಿದರೆ ಚುನಾವಣಾ ನೀತಿ ಸಂಹಿತಿ ಎಂದು ಹೇಳುತ್ತಿದ್ದಾರೆ. ಈಗ ನೋಡಿದರೆ ಲಾಟರಿ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ನಮ್ಮ ಕಾಲೋನಿಗೆ ಜಿಲ್ಲಾಧಿಕಾರಿಗಳು ಇತರೆ ಅಧಿಕಾರಿಗಳೊಂದಿಗೆ ಬಂದು ಭೇಟಿ ನೀಡಬೇಕು. ಆಶ್ರಯ ಮನೆಗಳಿಗಾಗಿ ಜನಪ್ರತಿನಿಧಿಗಳು ಹಾಗೂ ಮಹಾನಗರ ಪಾಲಿಕೆ ಸದಸ್ಯರ ಕಡೆಗೆ ತಿರುಗಾಡಿ ಸಾಕಾಗಿ ಹೋಗಿದೆ. ನಮ್ಮ ಜೀವನ ಸ್ಥಿತಿಗತಿ ನೋಡಿ ಮುಂದಿನ ಕ್ರಮ ಕೈಗೊಳ್ಳಬೇಕು. ಝೋಪಡಪಟ್ಟಿ ನಿವಾಸಿಗಳಿಗೆ ಆಶ್ರಯ ಒದಗಿಸಿ ನ್ಯಾಯ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.

ನಿವಾಸಿಗಳಾದ ಮಾರುತಿ ಗೊಡಚಿ, ಬಸಪ್ಪ ಕರಡಿಗುಡ್ಡ, ಶಿವಪ್ಪ ಬೆಡಸೂರ, ರಮೇಶ ಮಾದರ, ಕರಿಯಪ್ಪ ಮಾದರ, ರಮೇಶ ಪ್ಯಾಟಿ, ಬೀರಪ್ಪ ಚೌಡಕಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.